ಬ್ರೇಕಿಂಗ್ ನ್ಯೂಸ್
15-12-20 02:43 pm Bangalore Correspondent ಕ್ರೈಂ
ಬೆಂಗಳೂರು, ಡಿ.15: ದೇವರಿಗೆ ಕೈಮುಗಿಯುವ ನೆಪದಲ್ಲಿ ದೇವಸ್ಥಾನಕ್ಕೆ ಬಂದಿದ್ದ ಯುವಕನೊಬ್ಬ ದೇವರ ವಿಗ್ರಹವನ್ನೇ ಹೊತ್ತೊಯ್ದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕಳವು ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸಿಸಿಟಿವಿ ದೃಶ್ಯ ಆಧರಿಸಿ ಚಿಕ್ಕಜಾಲ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಚಿಕ್ಕಜಾಲ ಠಾಣೆ ವ್ಯಾಪ್ತಿಯ ಹುಣಸೆಮಾರನಹಳ್ಳಿಯಲ್ಲಿ ಘಟನೆ ನಡೆದಿದ್ದು, ದೇವಸ್ಥಾನದಲ್ಲಿದ್ದ ಪ್ರಾಚೀನ ಪಂಚಲೋಹದ ವಿಗ್ರಹ ಕಳವಾಗಿತ್ತು. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಪ್ರಾಚೀನ ಪಂಚಲೋಹದ ವಿಗ್ರಹಕ್ಕೆ ಕೋಟ್ಯಂತರ ರೂಪಾಯಿ ಬೆಲೆ ಇದ್ದು, ರೈಸ್ ಪುಲ್ಲಿಂಗ್ ಜಾಲದ ಖದೀಮರು ಇದನ್ನು ಕೋಟಿಗಟ್ಟಲೆ ದರಕ್ಕೆ ಮಾರುತ್ತಾರೆ. ಈ ಬಗ್ಗೆ ತಿಳಿದಿದ್ದ ರಘು ಎಂಬಾತ ಹುಣಸೆಮಾರನಹಳ್ಳಿಯ ಚಂದ್ರಮೌಳೇಶ್ವರನ ಮಠಕ್ಕೆ ಭಕ್ತನ ಸೋಗಿನಲ್ಲಿ ತೆರಳಿದ್ದ. ಮುಖ ಕಾಣದಂತೆ ಹೆಲ್ಮೆಟ್ ಧರಿಸಿಕೊಂಡೇ ಒಳಗೆ ನುಗ್ಗಿದ್ದ ಆರೋಪಿ, ಗರ್ಭಗುಡಿಗೆ ತೆರಳಿ ಅಲ್ಲಿಂದ ವಿಗ್ರಹವನ್ನು ಎತ್ತಿಕೊಂಡು ಪರಾರಿಯಾಗಿದ್ದಾನೆ. ಯಾರೂ ಇಲ್ಲದ ಸಂದರ್ಭ ಘಟನೆ ನಡೆದಿದ್ದು, ಸ್ಥಳೀಯರಿಗೆ ಗೊತ್ತಾಗದಂತೆ ಕೃತ್ಯ ನಡೆಸಿದ್ದ.

ನಾಲ್ಕು ಅಡಿ ಎತ್ತರದ ಚಂದ್ರಮೌಳೇಶ್ವರನ ವಿಗ್ರಹವಾಗಿದ್ದು, ಗರ್ಭಗುಡಿಯಿಂದ ಹೊರಗೊಯ್ದು ಬೈಕಿನಲ್ಲಿ ಪರಾರಿಯಾಗಿದ್ದ. ಹೀಗೆ ಎತ್ತಿಕೊಂಡು ಹೋಗುವುದು ಅಲ್ಲಿನ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಕಳವು ಕೃತ್ಯದ ಬಗ್ಗೆ ತಿಳಿದ ಮಠದ ಗುರು ನಂಜೇಶ್ವರ ಸ್ವಾಮೀಜಿ ಚಿಕ್ಕಜಾಲ ಪೊಲೀಸರಿಗೆ ದೂರು ನೀಡಿದ್ದರು. ಸಿಸಿಟಿವಿ ಆಧರಿಸಿ, ಬೆನ್ನತ್ತಿದ ಪೊಲೀಸರು ಆರೋಪಿಯನ್ನು ವಿಗ್ರಹ ಸಹಿತ ಬಂಧಿಸಿದ್ದಾರೆ. ಆರೋಪಿ ರಘು ರೈಸ್ ಪುಲ್ಲಿಂಗ್ ಜಾಲದ ಖದೀಮರಿಗೆ ಮಾರಾಟ ಮಾಡಲು ಯೋಜನೆ ಹಾಕಿದ್ದ. ಹೀಗಿರುವಾಗಲೇ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.
ಪುರಾತನ ವಿಗ್ರಹಗಳಿಗೆ ನಿಗೂಢ ಶಕ್ತಿ ಇರುತ್ತದೆ. ಇದಕ್ಕೆ ವಿದೇಶದಲ್ಲಿ ಕೋಟ್ಯಂತರ ಬೆಲೆಬಾಳುತ್ತದೆ ಎಂದು ಶ್ರೀಮಂತರನ್ನು ನಂಬಿಸಿ, ಹಣ ಪಡೆಯುವ ಜಾಲ ಇದೆ. ಇದಕ್ಕಾಗೇ ಆರೋಪಿ ರಘು ವಿಗ್ರಹವನ್ನು ಕದ್ದು ಮಾರಾಟ ಮಾಡಲು ಯೋಜನೆ ರೂಪಿಸಿದ್ದ. ಆದರೆ, ಸಿಸಿಟಿವಿಯ ಜಾಲ ಆತನ ಕೃತ್ಯವನ್ನು ಬಯಲು ಮಾಡಿದೆ.
19-12-25 01:41 pm
Bangalore Correspondent
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm