ಬ್ರೇಕಿಂಗ್ ನ್ಯೂಸ್
08-01-25 10:57 pm Mangalore Correspondent ಕ್ರೈಂ
ಮಂಗಳೂರು, ಜ.8 : ಪೆಟ್ರೋಲ್ ಪಂಪ್ ಗಳಲ್ಲಿ ಡಿಜಿಟಲ್ ಪೇಮೆಂಟ್ ಗಾಗಿ ಸ್ಕ್ಯಾನರ್ ಇಡುವುದು, ಗ್ರಾಹಕರು ತಮ್ಮ ಮೊಬೈಲಿನಲ್ಲಿ ನೇರವಾಗಿ ಹಣ ಪಾವತಿ ಮಾಡುವುದು ಸಾಮಾನ್ಯ. ಆದರೆ ಇಲ್ಲೊಂದು ಪೆಟ್ರೋಲ್ ಪಂಪ್ ಸಿಬ್ಬಂದಿಯೊಬ್ಬ ಸಂಸ್ಥೆಯ ಕ್ಯೂಆರ್ ಕೋಡ್ ಬದಲಿಗೆ ತನ್ನದೇ ವೈಯಕ್ತಿಕ ಕ್ಯೂಆರ್ ಕೋಡನ್ನು ಗ್ರಾಹಕರ ಮುಂದಿಟ್ಟು ಲಕ್ಷಾಂತರ ರೂಪಾಯಿ ವಂಚನೆ ಎಸಗಿರುವ ಬಗ್ಗೆ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಬಗ್ಗೆ ನಗರದ ಬಂಗ್ರಕೂಳೂರು ನಲ್ಲಿರುವ ರಿಯಲನ್ಸ್ ಔಟ್ ಲೆಟ್ ಮ್ಯಾನೇಜರ್ ಸಿಇಎನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಬಂಗ್ರಕೂಳೂರಿನ ರಿಲಯನ್ಸ್ ಔಟ್ ಲೆಟ್ ಪೆಟ್ರೋಲ್ ಬಂಕ್ ನಲ್ಲಿ ಸುಮಾರು 15 ವರ್ಷಗಳಿಂದ ಸೂಪರ್ವೈಸರ್ ಆಗಿ ಕೆಲಸ ಮಾಡಿಕೊಂಡಿದ್ದ ಮೋಹನದಾಸ್ ಎಂಬಾತ ಈ ಕೃತ್ಯ ಎಸಗಿದ್ದಾಗಿ ದೂರಿನಲ್ಲಿ ತಿಳಿಸಲಾಗಿದೆ.
ಮೋಹನದಾಸ್ ಪೆಟ್ರೋಲ್ ಪಂಪ್ ನಲ್ಲಿ ಹಣಕಾಸು ವ್ಯವಹಾರದ ಸಂಪೂರ್ಣ ಜವಾಬ್ದಾರಿ ವಹಿಸಿಕೊಂಡಿದ್ದ. 2023ರ ಮಾರ್ಚ್ 1ರಿಂದ 2023 ಜುಲೈ 31ರ ವರೆಗೆ ಪೆಟ್ರೋಲ್
ಬಂಕ್ನಲ್ಲಿ ಅಧಿಕೃತ ಕ್ಯೂಆರ್ ಕೋಡ್ ಬದಲು, ತನ್ನ ವೈಯಕ್ತಿಕ ಖಾತೆಯ ಕ್ಯೂಆರ್ ಕೋಡ್ ಹಾಕಿದ್ದು ಗ್ರಾಹಕರು ಪೆಟ್ರೋಲ್ ಬಂಕ್ನದ್ದೇ ಎಂದು ನಂಬಿ ಹಣ ಪಾವತಿ ಮಾಡುತ್ತಿದ್ದರು. ಆಮೂಲಕ ಆರೋಪಿಯ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಕೊಟ್ಟಾರ ಶಾಖೆಯ ಬ್ಯಾಂಕ್ ಖಾತೆಗೆ ಒಟ್ಟು 58,85,333 ರೂ. ಹಣ ವರ್ಗಾವಣೆಯಾಗಿದ್ದು ಭಾರೀ ಮೋಸ ಎಸಗಿದ್ದಾನೆ. ಅಕ್ರಮವಾಗಿ ಹಣ ಜಮೆ ಮಾಡಿಕೊಂಡು ದ್ರೋಹ ಎಸಗಿದ್ದಾನೆ ಎಂದು ರಿಲಯನ್ಸ್ ಔಟ್ ಲೆಟ್ನ ಮ್ಯಾನೇಜರ್ ತಮ್ಮ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಸಿಇಎನ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ.
Mangalore petrol pump cashier replaces QR code at fuel pump, swindles money of 58 lakhs at Reliance fule pump. Case has been registered at the CEN police station against MohanDas.
01-01-26 06:21 pm
Bangalore Correspondent
ಜನವರಿ 15ರ ನಂತರ ಸಂಪುಟ ವಿಸ್ತರಣೆ ಆಗಲಿದೆ, ನನಗೂ ಮಂ...
01-01-26 05:18 pm
ಬೆಂಗಳೂರಿನಿಂದ ಕನ್ಯಾಕುಮಾರಿಗೆ ಸೈಕಲ್ ಸವಾರಿ ; 70ರ...
01-01-26 03:05 pm
ಕೋಗಿಲು ಬಡಾವಣೆ ವಿವಾದ ; ಬಿಜೆಪಿಯಿಂದ ಸತ್ಯಶೋಧನಾ ಸಮ...
31-12-25 10:57 pm
ಕೋಗಿಲು ಬಡಾವಣೆ ವಿವಾದ ನಡುವೆಯೇ ಕೇರಳ ಸಿಎಂ ಪಿಣರಾಯಿ...
31-12-25 02:35 pm
01-01-26 09:34 pm
HK News Desk
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
01-01-26 09:43 am
Mangalore Correspondent
ಧರ್ಮಸ್ಥಳ ಪ್ರಕರಣದಲ್ಲಿ ಕ್ಷೇತ್ರದ ಪರ ಬೆಳ್ತಂಗಡಿ ಕೋ...
31-12-25 10:57 pm
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
01-01-26 08:25 pm
Mangalore Correspondent
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm