ಬ್ರೇಕಿಂಗ್ ನ್ಯೂಸ್
08-01-25 10:57 pm Mangalore Correspondent ಕ್ರೈಂ
ಮಂಗಳೂರು, ಜ.8 : ಪೆಟ್ರೋಲ್ ಪಂಪ್ ಗಳಲ್ಲಿ ಡಿಜಿಟಲ್ ಪೇಮೆಂಟ್ ಗಾಗಿ ಸ್ಕ್ಯಾನರ್ ಇಡುವುದು, ಗ್ರಾಹಕರು ತಮ್ಮ ಮೊಬೈಲಿನಲ್ಲಿ ನೇರವಾಗಿ ಹಣ ಪಾವತಿ ಮಾಡುವುದು ಸಾಮಾನ್ಯ. ಆದರೆ ಇಲ್ಲೊಂದು ಪೆಟ್ರೋಲ್ ಪಂಪ್ ಸಿಬ್ಬಂದಿಯೊಬ್ಬ ಸಂಸ್ಥೆಯ ಕ್ಯೂಆರ್ ಕೋಡ್ ಬದಲಿಗೆ ತನ್ನದೇ ವೈಯಕ್ತಿಕ ಕ್ಯೂಆರ್ ಕೋಡನ್ನು ಗ್ರಾಹಕರ ಮುಂದಿಟ್ಟು ಲಕ್ಷಾಂತರ ರೂಪಾಯಿ ವಂಚನೆ ಎಸಗಿರುವ ಬಗ್ಗೆ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಬಗ್ಗೆ ನಗರದ ಬಂಗ್ರಕೂಳೂರು ನಲ್ಲಿರುವ ರಿಯಲನ್ಸ್ ಔಟ್ ಲೆಟ್ ಮ್ಯಾನೇಜರ್ ಸಿಇಎನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಬಂಗ್ರಕೂಳೂರಿನ ರಿಲಯನ್ಸ್ ಔಟ್ ಲೆಟ್ ಪೆಟ್ರೋಲ್ ಬಂಕ್ ನಲ್ಲಿ ಸುಮಾರು 15 ವರ್ಷಗಳಿಂದ ಸೂಪರ್ವೈಸರ್ ಆಗಿ ಕೆಲಸ ಮಾಡಿಕೊಂಡಿದ್ದ ಮೋಹನದಾಸ್ ಎಂಬಾತ ಈ ಕೃತ್ಯ ಎಸಗಿದ್ದಾಗಿ ದೂರಿನಲ್ಲಿ ತಿಳಿಸಲಾಗಿದೆ.
ಮೋಹನದಾಸ್ ಪೆಟ್ರೋಲ್ ಪಂಪ್ ನಲ್ಲಿ ಹಣಕಾಸು ವ್ಯವಹಾರದ ಸಂಪೂರ್ಣ ಜವಾಬ್ದಾರಿ ವಹಿಸಿಕೊಂಡಿದ್ದ. 2023ರ ಮಾರ್ಚ್ 1ರಿಂದ 2023 ಜುಲೈ 31ರ ವರೆಗೆ ಪೆಟ್ರೋಲ್
ಬಂಕ್ನಲ್ಲಿ ಅಧಿಕೃತ ಕ್ಯೂಆರ್ ಕೋಡ್ ಬದಲು, ತನ್ನ ವೈಯಕ್ತಿಕ ಖಾತೆಯ ಕ್ಯೂಆರ್ ಕೋಡ್ ಹಾಕಿದ್ದು ಗ್ರಾಹಕರು ಪೆಟ್ರೋಲ್ ಬಂಕ್ನದ್ದೇ ಎಂದು ನಂಬಿ ಹಣ ಪಾವತಿ ಮಾಡುತ್ತಿದ್ದರು. ಆಮೂಲಕ ಆರೋಪಿಯ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಕೊಟ್ಟಾರ ಶಾಖೆಯ ಬ್ಯಾಂಕ್ ಖಾತೆಗೆ ಒಟ್ಟು 58,85,333 ರೂ. ಹಣ ವರ್ಗಾವಣೆಯಾಗಿದ್ದು ಭಾರೀ ಮೋಸ ಎಸಗಿದ್ದಾನೆ. ಅಕ್ರಮವಾಗಿ ಹಣ ಜಮೆ ಮಾಡಿಕೊಂಡು ದ್ರೋಹ ಎಸಗಿದ್ದಾನೆ ಎಂದು ರಿಲಯನ್ಸ್ ಔಟ್ ಲೆಟ್ನ ಮ್ಯಾನೇಜರ್ ತಮ್ಮ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಸಿಇಎನ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ.
Mangalore petrol pump cashier replaces QR code at fuel pump, swindles money of 58 lakhs at Reliance fule pump. Case has been registered at the CEN police station against MohanDas.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 01:45 pm
HK News Staffer
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am
ಬಾಂಬ್ ಮಾದರಿಯ ವಸ್ತು ಸ್ಫೋಟಿಸಿ ರೀಲ್ಸ್ ಶೂಟಿಂಗ್ ;...
01-05-26 10:30 am
ಗುದದ್ವಾರದಲ್ಲಿ ಮೊಬೈಲ್ ಬಚ್ಚಿಟ್ಟು ಜೈಲು ಎಂಟ್ರಿಯಾದ...
01-05-26 09:39 am
ಸೌಜನ್ಯಾ ಪ್ರಕರಣ ಮರು ತನಿಖೆಗೆ ಸುಪ್ರೀಂ ಕೋರ್ಟಿಗೆ ಅ...
30-04-26 04:30 pm