ಬ್ರೇಕಿಂಗ್ ನ್ಯೂಸ್
09-01-25 11:27 am Mangaluru Correspondent ಕ್ರೈಂ
ಮಂಗಳೂರು, ಜ.9: ಆಟಿಕೆ ಪಿಸ್ತೂಲ್ ಹಾರಿ ಗಾಯಗೊಂಡಿದ್ದಾಗಿ ಹೇಳಲಾಗಿದ್ದ ಸುದ್ದಿಗೆ ಟ್ವಿಸ್ಟ್ ಸಿಕ್ಕಿದೆ. ಪರವಾನಗಿ ಇಲ್ಲದ ಪಿಸ್ತೂಲ್ ಮತ್ತು ಅದು ರೌಡಿಶೀಟರ್ ವ್ಯಕ್ತಿಯದ್ದು ಎನ್ನುವುದನ್ನು ಪೊಲೀಸರು ಪತ್ತೆ ಮಾಡಿದ್ದಾರೆ.
ಸೋಮವಾರ ಸಂಜೆ ವಾಮಂಜೂರಿನ ರಿಟೇಲ್ ಅಂಗಡಿಯೊಂದರಲ್ಲಿ ಪಿಸ್ತೂಲ್ ಹಾರಿ ಸಫ್ವಾನ್ (37) ಎಂಬ ವ್ಯಕ್ತಿ ಗಾಯಗೊಂಡಿದ್ದರು. ಮೊದಲಿಗೆ ಟೇಬಲ್ ಮೇಲಿಟ್ಟಿದ್ದ ಗನ್ ಅನ್ನು ಸಫ್ವಾನ್ ಆಟಿಕೆಯೆಂದು ಟ್ರಿಗ್ಗರ್ ಒತ್ತಿ ಗಾಯಕ್ಕೀಡಾಗಿದ್ದರು ಎಂದು ಹೇಳಲಾಗಿತ್ತು. ಈ ಬಗ್ಗೆ ಗ್ರಾಮಾಂತರ ಠಾಣೆ ಪೊಲೀಸರು ಸರಿಯಾದ ತನಿಖೆ ಮಾಡಿರದ ಕಾರಣ ನೈಜ ವಿಚಾರ ಏನೆಂದು ತಿಳಿದುಬಂದಿರಲಿಲ್ಲ. 24 ಗಂಟೆ ಕಳೆದರೂ ಪ್ರಕರಣ ದಾಖಲಾಗಿರಲಿಲ್ಲ.
ಎರಡು ದಿನ ಕಳೆದಾಗ, ಲೈಸನ್ಸ್ ಹೊಂದಿಲ್ಲದ ನೈಜ ಪಿಸ್ತೂಲ್ ಎನ್ನುವ ವಿಚಾರ ತಿಳಿದುಬಂದಿದ್ದು ಅಲ್ಲದೆ, ಇದನ್ನು ಅಕ್ರಮವಾಗಿ ರೌಡಿಶೀಟರ್ ಅದ್ದು ಯಾನೆ ಬದ್ರುದ್ದೀನ್ ಇಟ್ಟುಕೊಂಡಿದ್ದ ಎನ್ನುವುದನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಈ ಪಿಸ್ತೂಲನ್ನು ಇಮ್ರಾನ್ ಎಂಬಾತ ನೀಡಿದ್ದಾನೆ ಎನ್ನಲಾಗುತ್ತಿದ್ದು ಪೊಲೀಸರು ಕೇಸು ದಾಖಲಿಸುತ್ತಿದ್ದಂತೆ ಇಬ್ಬರೂ ನಾಪತ್ತೆಯಾಗಿದ್ದಾರೆ.
ಬದ್ರುದ್ದೀನ್ ರಿಟೇಲ್ ಮಳಿಗೆ ಹೊಂದಿದ್ದು ಪಿಸ್ತೂಲ್ ಅನ್ನು ಪರಿಶೀಲಿಸುವ ನೆಪದಲ್ಲಿ ಟ್ರಿಗ್ಗರ್ ಒತ್ತಿದ್ದಾನೆ. ಈ ವೇಳೆ, ಅಂಗಡಿಯ ಹೊರಭಾಗದಲ್ಲಿ ಕುಳಿತಿದ್ದ ಮೊಹಮ್ಮದ್ ಸಫ್ವಾನ್ ಹೊಟ್ಟೆಗೆ ತಗಲಿದೆ ಎಂದು ಪೊಲೀಸರ ವಿಚಾರಣೆಯಲ್ಲಿ ತಿಳಿದುಬಂದಿದೆ. ಗ್ರಾಮಾಂತರ ಠಾಣೆ ಪೊಲೀಸರು ಬದ್ರುದ್ದೀನ್ ವಿರುದ್ಧ ಕೊಲೆಯತ್ನ ಪ್ರಕರಣ ದಾಖಲಿಸಿದ್ದಾರೆ. ರೌಡಿಶೀಟರ್ ವ್ಯಕ್ತಿ ಅಕ್ರಮವಾಗಿ ಪಿಸ್ತೂಲ್ ಹೊಂದಿದ್ದು ಹೇಗೆ ಎನ್ನುವ ಬಗ್ಗೆ ತನಿಖೆ ಆಗಬೇಕಿದೆ. ಅಲ್ಲದೆ, ಅದು ಆಟಿಕೆ ಪಿಸ್ತೂಲ್, ಸಫ್ವಾನ್ ಸ್ವತಃ ಹೊಡೆದುಕೊಂಡಿದ್ದಾಗಿ ಕತೆ ಕಟ್ಟಿದ್ದು ಯಾರು ಎನ್ನುವ ಬಗ್ಗೆ ತನಿಖೆ ಆಗಬೇಕಿದೆ.
In the recent incident at Vamanjoor, authorities have revealed that the firearm involved in the misfire was unlicensed and traced back to Rowdy Shetter, according to the Mangalore police. This shocking revelation has raised serious concerns about public safety and the presence of illegal weapons in the area.
08-01-26 11:06 pm
HK News Desk
ಪೊಲೀಸರ ಸಭೆ ನಡೆಸಲು ಡಿ.ಕೆ.ಶಿ. ಯಾರು? ರಾಜ್ಯದಲ್ಲಿ...
08-01-26 10:45 pm
ಸಿಎಂ ಕುರ್ಚಿ ಕದನಕ್ಕೆ ದಿಢೀರ್ ಬ್ರೇಕ್ ; ಡಿಕೆಶಿಗೆ...
08-01-26 09:36 pm
ಅತ್ತೆ ಕಿರುಕುಳ ಆರೋಪ ; ಸೊಸೆ ತನ್ನ ಇಬ್ಬರು ಮಕ್ಕಳೊಂ...
08-01-26 07:51 pm
ಪಶ್ಚಿಮ ಘಟ್ಟಗಳ ಸಂರಕ್ಷಣೆಗಾಗಿ ಜೀವನದುದ್ದಕ್ಕೂ ಹೋರಾ...
08-01-26 02:10 pm
08-01-26 11:21 pm
HK News Desk
ರಷ್ಯಾ ತೈಲ ಖರೀದಿ ನಿಲ್ಲಿಸಲು ಅಮೆರಿಕ ಹೊಸ ಮಸೂದೆ ;...
08-01-26 05:11 pm
ಮಹಾರಾಷ್ಟ್ರ ನಗರಸಭೆಯಲ್ಲಿ ಬಿಜೆಪಿ ಜೊತೆಗೆ ಮೈತ್ರಿ ;...
08-01-26 03:12 pm
ಅಧಿಕಾರಕ್ಕಾಗಿ ಶಿವಸೇನೆ ಹೊರಗಿಟ್ಟು ಬಿಜೆಪಿ - ಕಾಂಗ್...
07-01-26 09:37 pm
ದೆಹಲಿಯಲ್ಲಿ ಹಿಂಸಾಚಾರ ; ಮಸೀದಿ ಆವರಣದಲ್ಲಿ ಅಕ್ರಮ ಕ...
07-01-26 04:47 pm
08-01-26 08:48 pm
Mangalore Correspondent
ಜ.10- 11ರಂದು ಮಂಗಳೂರು ಲಿಟ್ ಫೆಸ್ಟ್ ; ರಾಜ್ಯಸಭೆ ಸ...
08-01-26 08:09 pm
ಗಡಿನಾಡು ಕಾಸರಗೋಡಿನಲ್ಲಿ ಮಲಯಾಳ ಹೇರಿಕೆ ; ಕಡ್ಡಾಯ ಭ...
08-01-26 02:34 pm
ಸುಳ್ಯ ಶಾಸಕಿ ಭಾಗೀರಥಿ ಬಗ್ಗೆ ಅವಹೇಳನ ಪೋಸ್ಟ್ ; ಕಾಂ...
07-01-26 11:06 pm
ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯಗೆ ನಿಂದಿಸಿ ಬರೆದು ಜ...
07-01-26 05:15 pm
07-01-26 10:45 pm
Bangalore Correspondent
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm