ಬ್ರೇಕಿಂಗ್ ನ್ಯೂಸ್
09-01-25 11:27 am Mangaluru Correspondent ಕ್ರೈಂ
ಮಂಗಳೂರು, ಜ.9: ಆಟಿಕೆ ಪಿಸ್ತೂಲ್ ಹಾರಿ ಗಾಯಗೊಂಡಿದ್ದಾಗಿ ಹೇಳಲಾಗಿದ್ದ ಸುದ್ದಿಗೆ ಟ್ವಿಸ್ಟ್ ಸಿಕ್ಕಿದೆ. ಪರವಾನಗಿ ಇಲ್ಲದ ಪಿಸ್ತೂಲ್ ಮತ್ತು ಅದು ರೌಡಿಶೀಟರ್ ವ್ಯಕ್ತಿಯದ್ದು ಎನ್ನುವುದನ್ನು ಪೊಲೀಸರು ಪತ್ತೆ ಮಾಡಿದ್ದಾರೆ.
ಸೋಮವಾರ ಸಂಜೆ ವಾಮಂಜೂರಿನ ರಿಟೇಲ್ ಅಂಗಡಿಯೊಂದರಲ್ಲಿ ಪಿಸ್ತೂಲ್ ಹಾರಿ ಸಫ್ವಾನ್ (37) ಎಂಬ ವ್ಯಕ್ತಿ ಗಾಯಗೊಂಡಿದ್ದರು. ಮೊದಲಿಗೆ ಟೇಬಲ್ ಮೇಲಿಟ್ಟಿದ್ದ ಗನ್ ಅನ್ನು ಸಫ್ವಾನ್ ಆಟಿಕೆಯೆಂದು ಟ್ರಿಗ್ಗರ್ ಒತ್ತಿ ಗಾಯಕ್ಕೀಡಾಗಿದ್ದರು ಎಂದು ಹೇಳಲಾಗಿತ್ತು. ಈ ಬಗ್ಗೆ ಗ್ರಾಮಾಂತರ ಠಾಣೆ ಪೊಲೀಸರು ಸರಿಯಾದ ತನಿಖೆ ಮಾಡಿರದ ಕಾರಣ ನೈಜ ವಿಚಾರ ಏನೆಂದು ತಿಳಿದುಬಂದಿರಲಿಲ್ಲ. 24 ಗಂಟೆ ಕಳೆದರೂ ಪ್ರಕರಣ ದಾಖಲಾಗಿರಲಿಲ್ಲ.
ಎರಡು ದಿನ ಕಳೆದಾಗ, ಲೈಸನ್ಸ್ ಹೊಂದಿಲ್ಲದ ನೈಜ ಪಿಸ್ತೂಲ್ ಎನ್ನುವ ವಿಚಾರ ತಿಳಿದುಬಂದಿದ್ದು ಅಲ್ಲದೆ, ಇದನ್ನು ಅಕ್ರಮವಾಗಿ ರೌಡಿಶೀಟರ್ ಅದ್ದು ಯಾನೆ ಬದ್ರುದ್ದೀನ್ ಇಟ್ಟುಕೊಂಡಿದ್ದ ಎನ್ನುವುದನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಈ ಪಿಸ್ತೂಲನ್ನು ಇಮ್ರಾನ್ ಎಂಬಾತ ನೀಡಿದ್ದಾನೆ ಎನ್ನಲಾಗುತ್ತಿದ್ದು ಪೊಲೀಸರು ಕೇಸು ದಾಖಲಿಸುತ್ತಿದ್ದಂತೆ ಇಬ್ಬರೂ ನಾಪತ್ತೆಯಾಗಿದ್ದಾರೆ.
ಬದ್ರುದ್ದೀನ್ ರಿಟೇಲ್ ಮಳಿಗೆ ಹೊಂದಿದ್ದು ಪಿಸ್ತೂಲ್ ಅನ್ನು ಪರಿಶೀಲಿಸುವ ನೆಪದಲ್ಲಿ ಟ್ರಿಗ್ಗರ್ ಒತ್ತಿದ್ದಾನೆ. ಈ ವೇಳೆ, ಅಂಗಡಿಯ ಹೊರಭಾಗದಲ್ಲಿ ಕುಳಿತಿದ್ದ ಮೊಹಮ್ಮದ್ ಸಫ್ವಾನ್ ಹೊಟ್ಟೆಗೆ ತಗಲಿದೆ ಎಂದು ಪೊಲೀಸರ ವಿಚಾರಣೆಯಲ್ಲಿ ತಿಳಿದುಬಂದಿದೆ. ಗ್ರಾಮಾಂತರ ಠಾಣೆ ಪೊಲೀಸರು ಬದ್ರುದ್ದೀನ್ ವಿರುದ್ಧ ಕೊಲೆಯತ್ನ ಪ್ರಕರಣ ದಾಖಲಿಸಿದ್ದಾರೆ. ರೌಡಿಶೀಟರ್ ವ್ಯಕ್ತಿ ಅಕ್ರಮವಾಗಿ ಪಿಸ್ತೂಲ್ ಹೊಂದಿದ್ದು ಹೇಗೆ ಎನ್ನುವ ಬಗ್ಗೆ ತನಿಖೆ ಆಗಬೇಕಿದೆ. ಅಲ್ಲದೆ, ಅದು ಆಟಿಕೆ ಪಿಸ್ತೂಲ್, ಸಫ್ವಾನ್ ಸ್ವತಃ ಹೊಡೆದುಕೊಂಡಿದ್ದಾಗಿ ಕತೆ ಕಟ್ಟಿದ್ದು ಯಾರು ಎನ್ನುವ ಬಗ್ಗೆ ತನಿಖೆ ಆಗಬೇಕಿದೆ.
In the recent incident at Vamanjoor, authorities have revealed that the firearm involved in the misfire was unlicensed and traced back to Rowdy Shetter, according to the Mangalore police. This shocking revelation has raised serious concerns about public safety and the presence of illegal weapons in the area.
13-07-25 08:37 pm
HK News Desk
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
ಬೀದಿನಾಯಿಗಳಿಗೆ ಬಿರಿಯಾನಿ ಭಾಗ್ಯ ; ಶಾಲೆಗಳಲ್ಲಿ ಮಕ...
12-07-25 07:07 pm
ಧರ್ಮಸ್ಥಳ ಘಟನೆ ; ಒಬ್ಬ ವ್ಯಕ್ತಿಯ ಪರವಾಗಿ ವಕೀಲರು ದ...
11-07-25 06:36 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm