ಬ್ರೇಕಿಂಗ್ ನ್ಯೂಸ್
09-01-25 11:27 am Mangaluru Correspondent ಕ್ರೈಂ
ಮಂಗಳೂರು, ಜ.9: ಆಟಿಕೆ ಪಿಸ್ತೂಲ್ ಹಾರಿ ಗಾಯಗೊಂಡಿದ್ದಾಗಿ ಹೇಳಲಾಗಿದ್ದ ಸುದ್ದಿಗೆ ಟ್ವಿಸ್ಟ್ ಸಿಕ್ಕಿದೆ. ಪರವಾನಗಿ ಇಲ್ಲದ ಪಿಸ್ತೂಲ್ ಮತ್ತು ಅದು ರೌಡಿಶೀಟರ್ ವ್ಯಕ್ತಿಯದ್ದು ಎನ್ನುವುದನ್ನು ಪೊಲೀಸರು ಪತ್ತೆ ಮಾಡಿದ್ದಾರೆ.
ಸೋಮವಾರ ಸಂಜೆ ವಾಮಂಜೂರಿನ ರಿಟೇಲ್ ಅಂಗಡಿಯೊಂದರಲ್ಲಿ ಪಿಸ್ತೂಲ್ ಹಾರಿ ಸಫ್ವಾನ್ (37) ಎಂಬ ವ್ಯಕ್ತಿ ಗಾಯಗೊಂಡಿದ್ದರು. ಮೊದಲಿಗೆ ಟೇಬಲ್ ಮೇಲಿಟ್ಟಿದ್ದ ಗನ್ ಅನ್ನು ಸಫ್ವಾನ್ ಆಟಿಕೆಯೆಂದು ಟ್ರಿಗ್ಗರ್ ಒತ್ತಿ ಗಾಯಕ್ಕೀಡಾಗಿದ್ದರು ಎಂದು ಹೇಳಲಾಗಿತ್ತು. ಈ ಬಗ್ಗೆ ಗ್ರಾಮಾಂತರ ಠಾಣೆ ಪೊಲೀಸರು ಸರಿಯಾದ ತನಿಖೆ ಮಾಡಿರದ ಕಾರಣ ನೈಜ ವಿಚಾರ ಏನೆಂದು ತಿಳಿದುಬಂದಿರಲಿಲ್ಲ. 24 ಗಂಟೆ ಕಳೆದರೂ ಪ್ರಕರಣ ದಾಖಲಾಗಿರಲಿಲ್ಲ.
ಎರಡು ದಿನ ಕಳೆದಾಗ, ಲೈಸನ್ಸ್ ಹೊಂದಿಲ್ಲದ ನೈಜ ಪಿಸ್ತೂಲ್ ಎನ್ನುವ ವಿಚಾರ ತಿಳಿದುಬಂದಿದ್ದು ಅಲ್ಲದೆ, ಇದನ್ನು ಅಕ್ರಮವಾಗಿ ರೌಡಿಶೀಟರ್ ಅದ್ದು ಯಾನೆ ಬದ್ರುದ್ದೀನ್ ಇಟ್ಟುಕೊಂಡಿದ್ದ ಎನ್ನುವುದನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಈ ಪಿಸ್ತೂಲನ್ನು ಇಮ್ರಾನ್ ಎಂಬಾತ ನೀಡಿದ್ದಾನೆ ಎನ್ನಲಾಗುತ್ತಿದ್ದು ಪೊಲೀಸರು ಕೇಸು ದಾಖಲಿಸುತ್ತಿದ್ದಂತೆ ಇಬ್ಬರೂ ನಾಪತ್ತೆಯಾಗಿದ್ದಾರೆ.
ಬದ್ರುದ್ದೀನ್ ರಿಟೇಲ್ ಮಳಿಗೆ ಹೊಂದಿದ್ದು ಪಿಸ್ತೂಲ್ ಅನ್ನು ಪರಿಶೀಲಿಸುವ ನೆಪದಲ್ಲಿ ಟ್ರಿಗ್ಗರ್ ಒತ್ತಿದ್ದಾನೆ. ಈ ವೇಳೆ, ಅಂಗಡಿಯ ಹೊರಭಾಗದಲ್ಲಿ ಕುಳಿತಿದ್ದ ಮೊಹಮ್ಮದ್ ಸಫ್ವಾನ್ ಹೊಟ್ಟೆಗೆ ತಗಲಿದೆ ಎಂದು ಪೊಲೀಸರ ವಿಚಾರಣೆಯಲ್ಲಿ ತಿಳಿದುಬಂದಿದೆ. ಗ್ರಾಮಾಂತರ ಠಾಣೆ ಪೊಲೀಸರು ಬದ್ರುದ್ದೀನ್ ವಿರುದ್ಧ ಕೊಲೆಯತ್ನ ಪ್ರಕರಣ ದಾಖಲಿಸಿದ್ದಾರೆ. ರೌಡಿಶೀಟರ್ ವ್ಯಕ್ತಿ ಅಕ್ರಮವಾಗಿ ಪಿಸ್ತೂಲ್ ಹೊಂದಿದ್ದು ಹೇಗೆ ಎನ್ನುವ ಬಗ್ಗೆ ತನಿಖೆ ಆಗಬೇಕಿದೆ. ಅಲ್ಲದೆ, ಅದು ಆಟಿಕೆ ಪಿಸ್ತೂಲ್, ಸಫ್ವಾನ್ ಸ್ವತಃ ಹೊಡೆದುಕೊಂಡಿದ್ದಾಗಿ ಕತೆ ಕಟ್ಟಿದ್ದು ಯಾರು ಎನ್ನುವ ಬಗ್ಗೆ ತನಿಖೆ ಆಗಬೇಕಿದೆ.
In the recent incident at Vamanjoor, authorities have revealed that the firearm involved in the misfire was unlicensed and traced back to Rowdy Shetter, according to the Mangalore police. This shocking revelation has raised serious concerns about public safety and the presence of illegal weapons in the area.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm