ಬ್ರೇಕಿಂಗ್ ನ್ಯೂಸ್
09-01-25 11:27 am Mangaluru Correspondent ಕ್ರೈಂ
ಮಂಗಳೂರು, ಜ.9: ಆಟಿಕೆ ಪಿಸ್ತೂಲ್ ಹಾರಿ ಗಾಯಗೊಂಡಿದ್ದಾಗಿ ಹೇಳಲಾಗಿದ್ದ ಸುದ್ದಿಗೆ ಟ್ವಿಸ್ಟ್ ಸಿಕ್ಕಿದೆ. ಪರವಾನಗಿ ಇಲ್ಲದ ಪಿಸ್ತೂಲ್ ಮತ್ತು ಅದು ರೌಡಿಶೀಟರ್ ವ್ಯಕ್ತಿಯದ್ದು ಎನ್ನುವುದನ್ನು ಪೊಲೀಸರು ಪತ್ತೆ ಮಾಡಿದ್ದಾರೆ.
ಸೋಮವಾರ ಸಂಜೆ ವಾಮಂಜೂರಿನ ರಿಟೇಲ್ ಅಂಗಡಿಯೊಂದರಲ್ಲಿ ಪಿಸ್ತೂಲ್ ಹಾರಿ ಸಫ್ವಾನ್ (37) ಎಂಬ ವ್ಯಕ್ತಿ ಗಾಯಗೊಂಡಿದ್ದರು. ಮೊದಲಿಗೆ ಟೇಬಲ್ ಮೇಲಿಟ್ಟಿದ್ದ ಗನ್ ಅನ್ನು ಸಫ್ವಾನ್ ಆಟಿಕೆಯೆಂದು ಟ್ರಿಗ್ಗರ್ ಒತ್ತಿ ಗಾಯಕ್ಕೀಡಾಗಿದ್ದರು ಎಂದು ಹೇಳಲಾಗಿತ್ತು. ಈ ಬಗ್ಗೆ ಗ್ರಾಮಾಂತರ ಠಾಣೆ ಪೊಲೀಸರು ಸರಿಯಾದ ತನಿಖೆ ಮಾಡಿರದ ಕಾರಣ ನೈಜ ವಿಚಾರ ಏನೆಂದು ತಿಳಿದುಬಂದಿರಲಿಲ್ಲ. 24 ಗಂಟೆ ಕಳೆದರೂ ಪ್ರಕರಣ ದಾಖಲಾಗಿರಲಿಲ್ಲ.
ಎರಡು ದಿನ ಕಳೆದಾಗ, ಲೈಸನ್ಸ್ ಹೊಂದಿಲ್ಲದ ನೈಜ ಪಿಸ್ತೂಲ್ ಎನ್ನುವ ವಿಚಾರ ತಿಳಿದುಬಂದಿದ್ದು ಅಲ್ಲದೆ, ಇದನ್ನು ಅಕ್ರಮವಾಗಿ ರೌಡಿಶೀಟರ್ ಅದ್ದು ಯಾನೆ ಬದ್ರುದ್ದೀನ್ ಇಟ್ಟುಕೊಂಡಿದ್ದ ಎನ್ನುವುದನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಈ ಪಿಸ್ತೂಲನ್ನು ಇಮ್ರಾನ್ ಎಂಬಾತ ನೀಡಿದ್ದಾನೆ ಎನ್ನಲಾಗುತ್ತಿದ್ದು ಪೊಲೀಸರು ಕೇಸು ದಾಖಲಿಸುತ್ತಿದ್ದಂತೆ ಇಬ್ಬರೂ ನಾಪತ್ತೆಯಾಗಿದ್ದಾರೆ.
ಬದ್ರುದ್ದೀನ್ ರಿಟೇಲ್ ಮಳಿಗೆ ಹೊಂದಿದ್ದು ಪಿಸ್ತೂಲ್ ಅನ್ನು ಪರಿಶೀಲಿಸುವ ನೆಪದಲ್ಲಿ ಟ್ರಿಗ್ಗರ್ ಒತ್ತಿದ್ದಾನೆ. ಈ ವೇಳೆ, ಅಂಗಡಿಯ ಹೊರಭಾಗದಲ್ಲಿ ಕುಳಿತಿದ್ದ ಮೊಹಮ್ಮದ್ ಸಫ್ವಾನ್ ಹೊಟ್ಟೆಗೆ ತಗಲಿದೆ ಎಂದು ಪೊಲೀಸರ ವಿಚಾರಣೆಯಲ್ಲಿ ತಿಳಿದುಬಂದಿದೆ. ಗ್ರಾಮಾಂತರ ಠಾಣೆ ಪೊಲೀಸರು ಬದ್ರುದ್ದೀನ್ ವಿರುದ್ಧ ಕೊಲೆಯತ್ನ ಪ್ರಕರಣ ದಾಖಲಿಸಿದ್ದಾರೆ. ರೌಡಿಶೀಟರ್ ವ್ಯಕ್ತಿ ಅಕ್ರಮವಾಗಿ ಪಿಸ್ತೂಲ್ ಹೊಂದಿದ್ದು ಹೇಗೆ ಎನ್ನುವ ಬಗ್ಗೆ ತನಿಖೆ ಆಗಬೇಕಿದೆ. ಅಲ್ಲದೆ, ಅದು ಆಟಿಕೆ ಪಿಸ್ತೂಲ್, ಸಫ್ವಾನ್ ಸ್ವತಃ ಹೊಡೆದುಕೊಂಡಿದ್ದಾಗಿ ಕತೆ ಕಟ್ಟಿದ್ದು ಯಾರು ಎನ್ನುವ ಬಗ್ಗೆ ತನಿಖೆ ಆಗಬೇಕಿದೆ.
In the recent incident at Vamanjoor, authorities have revealed that the firearm involved in the misfire was unlicensed and traced back to Rowdy Shetter, according to the Mangalore police. This shocking revelation has raised serious concerns about public safety and the presence of illegal weapons in the area.
08-11-25 12:38 pm
HK News Desk
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
08-11-25 04:08 pm
Mangaluru Staff
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm