ಬ್ರೇಕಿಂಗ್ ನ್ಯೂಸ್
09-01-25 11:27 am Mangaluru Correspondent ಕ್ರೈಂ
ಮಂಗಳೂರು, ಜ.9: ಆಟಿಕೆ ಪಿಸ್ತೂಲ್ ಹಾರಿ ಗಾಯಗೊಂಡಿದ್ದಾಗಿ ಹೇಳಲಾಗಿದ್ದ ಸುದ್ದಿಗೆ ಟ್ವಿಸ್ಟ್ ಸಿಕ್ಕಿದೆ. ಪರವಾನಗಿ ಇಲ್ಲದ ಪಿಸ್ತೂಲ್ ಮತ್ತು ಅದು ರೌಡಿಶೀಟರ್ ವ್ಯಕ್ತಿಯದ್ದು ಎನ್ನುವುದನ್ನು ಪೊಲೀಸರು ಪತ್ತೆ ಮಾಡಿದ್ದಾರೆ.
ಸೋಮವಾರ ಸಂಜೆ ವಾಮಂಜೂರಿನ ರಿಟೇಲ್ ಅಂಗಡಿಯೊಂದರಲ್ಲಿ ಪಿಸ್ತೂಲ್ ಹಾರಿ ಸಫ್ವಾನ್ (37) ಎಂಬ ವ್ಯಕ್ತಿ ಗಾಯಗೊಂಡಿದ್ದರು. ಮೊದಲಿಗೆ ಟೇಬಲ್ ಮೇಲಿಟ್ಟಿದ್ದ ಗನ್ ಅನ್ನು ಸಫ್ವಾನ್ ಆಟಿಕೆಯೆಂದು ಟ್ರಿಗ್ಗರ್ ಒತ್ತಿ ಗಾಯಕ್ಕೀಡಾಗಿದ್ದರು ಎಂದು ಹೇಳಲಾಗಿತ್ತು. ಈ ಬಗ್ಗೆ ಗ್ರಾಮಾಂತರ ಠಾಣೆ ಪೊಲೀಸರು ಸರಿಯಾದ ತನಿಖೆ ಮಾಡಿರದ ಕಾರಣ ನೈಜ ವಿಚಾರ ಏನೆಂದು ತಿಳಿದುಬಂದಿರಲಿಲ್ಲ. 24 ಗಂಟೆ ಕಳೆದರೂ ಪ್ರಕರಣ ದಾಖಲಾಗಿರಲಿಲ್ಲ.
ಎರಡು ದಿನ ಕಳೆದಾಗ, ಲೈಸನ್ಸ್ ಹೊಂದಿಲ್ಲದ ನೈಜ ಪಿಸ್ತೂಲ್ ಎನ್ನುವ ವಿಚಾರ ತಿಳಿದುಬಂದಿದ್ದು ಅಲ್ಲದೆ, ಇದನ್ನು ಅಕ್ರಮವಾಗಿ ರೌಡಿಶೀಟರ್ ಅದ್ದು ಯಾನೆ ಬದ್ರುದ್ದೀನ್ ಇಟ್ಟುಕೊಂಡಿದ್ದ ಎನ್ನುವುದನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಈ ಪಿಸ್ತೂಲನ್ನು ಇಮ್ರಾನ್ ಎಂಬಾತ ನೀಡಿದ್ದಾನೆ ಎನ್ನಲಾಗುತ್ತಿದ್ದು ಪೊಲೀಸರು ಕೇಸು ದಾಖಲಿಸುತ್ತಿದ್ದಂತೆ ಇಬ್ಬರೂ ನಾಪತ್ತೆಯಾಗಿದ್ದಾರೆ.
ಬದ್ರುದ್ದೀನ್ ರಿಟೇಲ್ ಮಳಿಗೆ ಹೊಂದಿದ್ದು ಪಿಸ್ತೂಲ್ ಅನ್ನು ಪರಿಶೀಲಿಸುವ ನೆಪದಲ್ಲಿ ಟ್ರಿಗ್ಗರ್ ಒತ್ತಿದ್ದಾನೆ. ಈ ವೇಳೆ, ಅಂಗಡಿಯ ಹೊರಭಾಗದಲ್ಲಿ ಕುಳಿತಿದ್ದ ಮೊಹಮ್ಮದ್ ಸಫ್ವಾನ್ ಹೊಟ್ಟೆಗೆ ತಗಲಿದೆ ಎಂದು ಪೊಲೀಸರ ವಿಚಾರಣೆಯಲ್ಲಿ ತಿಳಿದುಬಂದಿದೆ. ಗ್ರಾಮಾಂತರ ಠಾಣೆ ಪೊಲೀಸರು ಬದ್ರುದ್ದೀನ್ ವಿರುದ್ಧ ಕೊಲೆಯತ್ನ ಪ್ರಕರಣ ದಾಖಲಿಸಿದ್ದಾರೆ. ರೌಡಿಶೀಟರ್ ವ್ಯಕ್ತಿ ಅಕ್ರಮವಾಗಿ ಪಿಸ್ತೂಲ್ ಹೊಂದಿದ್ದು ಹೇಗೆ ಎನ್ನುವ ಬಗ್ಗೆ ತನಿಖೆ ಆಗಬೇಕಿದೆ. ಅಲ್ಲದೆ, ಅದು ಆಟಿಕೆ ಪಿಸ್ತೂಲ್, ಸಫ್ವಾನ್ ಸ್ವತಃ ಹೊಡೆದುಕೊಂಡಿದ್ದಾಗಿ ಕತೆ ಕಟ್ಟಿದ್ದು ಯಾರು ಎನ್ನುವ ಬಗ್ಗೆ ತನಿಖೆ ಆಗಬೇಕಿದೆ.
In the recent incident at Vamanjoor, authorities have revealed that the firearm involved in the misfire was unlicensed and traced back to Rowdy Shetter, according to the Mangalore police. This shocking revelation has raised serious concerns about public safety and the presence of illegal weapons in the area.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm