ಬ್ರೇಕಿಂಗ್ ನ್ಯೂಸ್
09-01-25 10:43 pm Mangalore Correspondent ಕ್ರೈಂ
ಮಂಗಳೂರು, ಜ.9: ಷೇರು ಮಾರುಕಟ್ಟೆಯಲ್ಲಿ ಹಣ ತೊಡಗಿಸಿದರೆ ಹೆಚ್ಚು ಲಾಭ ಸಿಗಲಿದೆ ಎಂದು ನಂಬಿಸಿ ವ್ಯಕ್ತಿಯೊಬ್ಬರಿಂದ 10.32 ಲಕ್ಷ ಹೂಡಿಕೆ ಮಾಡಿಸಿ ಮೋಸ ಮಾಡಿದ ಪ್ರಕರಣದಲ್ಲಿ ಹಣ ವರ್ಗಾವಣೆಯಾದ ಬ್ಯಾಂಕ್ ಖಾತೆಯನ್ನು ಬೆನ್ನತ್ತಿದ ಮಂಗಳೂರು ಪೊಲೀಸರು ಕೇರಳದ ತ್ರಿಶ್ಶೂರ್ ಜಿಲ್ಲೆಯ ಯುವಕನನ್ನು ಬಂಧಿಸಿದ್ದಾರೆ.
ಮಂಗಳೂರಿನ ವ್ಯಕ್ತಿಗೆ ವಾಟ್ಸಪ್ ನಲ್ಲಿ ಷೇರು ಮಾರುಕಟ್ಟೆಯಲ್ಲಿ ಹಣ ತೊಡಗಿಸುವಂತೆ ಹೇಳಿ ಮೆಸೇಜ್ ಬಂದಿತ್ತು. ಅದನ್ನು ನಂಬಿ ಅಪರಿಚಿತರು ಸೂಚಿಸಿದ ಮಾದರಿಯಲ್ಲಿ ಹಂತ ಹಂತವಾಗಿ ಹಣವನ್ನು ಹೂಡಿಕೆ ಮಾಡಿದ್ದರು. ಒಟ್ಟು 10.32 ಲಕ್ಷ ರೂಪಾಯಿ ಹಣ ಹೂಡಿಕೆ ಮಾಡಿದ್ದು, ಆನಂತರ ಅದನ್ನು ಹಿಂದೆ ಪಡೆಯಲಾಗದೆ ಮೋಸ ಹೋಗಿದ್ದರು. ಕೃತ್ಯದ ಬಗ್ಗೆ ಮಂಗಳೂರಿನ ಸೈಬರ್ ಪೊಲೀಸರಿಗೆ ದೂರು ನೀಡಿದ್ದರು. ಅಲ್ಲದೆ, ತಾನು ಹಣ ವರ್ಗಾವಣೆ ಮಾಡಿದ ಬ್ಯಾಂಕ್ ಖಾತೆಗಳ ಮಾಹಿತಿಯನ್ನೂ ನೀಡಿದ್ದರು.
ಪೊಲೀಸರು ಬ್ಯಾಂಕ್ ಖಾತೆಯನ್ನು ಸೀಜ್ ಮಾಡಿ, ಅದರಿಂದ ಯಾವೆಲ್ಲ ಖಾತೆಗಳಿಗೆ ಹಣ ರವಾನೆಯಾಗಿದೆ ಎಂದು ತನಿಖೆ ನಡೆಸಿದ್ದಾರೆ. ಈ ವೇಳೆ ತ್ರಿಶ್ಶೂರು ಜಿಲ್ಲೆಯ ಮಟ್ಟೂರು ಚೆಂಬುಚೀರ ನಿವಾಸಿ ನಿಧಿಶ್ ಕುಮಾರ್ ಎಂಬಾತನ ಖಾತೆಗೆ ಒಂದು ಲಕ್ಷ ಹಣ ರವಾನೆಯಾಗಿರುವುದು ಪತ್ತೆಯಾಗಿತ್ತು. ಸ್ನೇಹಿತನೊಬ್ಬ ತಿಳಿಸಿದಂತೆ ಬಂದಿದ್ದ ಹಣವನ್ನು ವಿವಿಧ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಿದ್ದು, ಇದಕ್ಕಾಗಿ ಕಮಿಷನ್ ಹಣವನ್ನೂ ಪಡೆದಿದ್ದ. ಈ ಬಗ್ಗೆ ವಿಚಾರಣೆ ಸಲುವಾಗಿ ಮಂಗಳೂರು ಪೊಲೀಸರು ನಿಧಿಶ್ ನನ್ನು ವಶಕ್ಕೆ ಪಡೆದಿದ್ದಾರೆ. ಸೆನ್ ಠಾಣೆಯ ಎಸಿಪಿ ರವೀಶ್ ನಾಯ್ಕ್, ಪೊಲೀಸ್ ನಿರೀಕ್ಷಕ ಸತೀಶ್ ಎಂ. ಮತ್ತು ಪಿಎಸ್ಐ ಗುರಪ್ಪ ಕಾಂತಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿತ್ತು.
Share marker scam 10.32 lakhs fraud, accused from thrissur arrested by Mangalore police.
16-01-26 09:38 pm
Bangalore Correspondent
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
16-01-26 06:33 pm
HK News Desk
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
16-01-26 10:28 pm
Mangalore Correspondent
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
ಡಿಮಾರ್ಟ್ ಶಾಪಿಂಗ್ ಮಾಲ್ ನಲ್ಲಿ ಉದ್ಯೋಗಾವಕಾಶ ಜಾಹಿರ...
16-01-26 12:31 pm
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm