ಬ್ರೇಕಿಂಗ್ ನ್ಯೂಸ್
09-01-25 10:43 pm Mangalore Correspondent ಕ್ರೈಂ
ಮಂಗಳೂರು, ಜ.9: ಷೇರು ಮಾರುಕಟ್ಟೆಯಲ್ಲಿ ಹಣ ತೊಡಗಿಸಿದರೆ ಹೆಚ್ಚು ಲಾಭ ಸಿಗಲಿದೆ ಎಂದು ನಂಬಿಸಿ ವ್ಯಕ್ತಿಯೊಬ್ಬರಿಂದ 10.32 ಲಕ್ಷ ಹೂಡಿಕೆ ಮಾಡಿಸಿ ಮೋಸ ಮಾಡಿದ ಪ್ರಕರಣದಲ್ಲಿ ಹಣ ವರ್ಗಾವಣೆಯಾದ ಬ್ಯಾಂಕ್ ಖಾತೆಯನ್ನು ಬೆನ್ನತ್ತಿದ ಮಂಗಳೂರು ಪೊಲೀಸರು ಕೇರಳದ ತ್ರಿಶ್ಶೂರ್ ಜಿಲ್ಲೆಯ ಯುವಕನನ್ನು ಬಂಧಿಸಿದ್ದಾರೆ.
ಮಂಗಳೂರಿನ ವ್ಯಕ್ತಿಗೆ ವಾಟ್ಸಪ್ ನಲ್ಲಿ ಷೇರು ಮಾರುಕಟ್ಟೆಯಲ್ಲಿ ಹಣ ತೊಡಗಿಸುವಂತೆ ಹೇಳಿ ಮೆಸೇಜ್ ಬಂದಿತ್ತು. ಅದನ್ನು ನಂಬಿ ಅಪರಿಚಿತರು ಸೂಚಿಸಿದ ಮಾದರಿಯಲ್ಲಿ ಹಂತ ಹಂತವಾಗಿ ಹಣವನ್ನು ಹೂಡಿಕೆ ಮಾಡಿದ್ದರು. ಒಟ್ಟು 10.32 ಲಕ್ಷ ರೂಪಾಯಿ ಹಣ ಹೂಡಿಕೆ ಮಾಡಿದ್ದು, ಆನಂತರ ಅದನ್ನು ಹಿಂದೆ ಪಡೆಯಲಾಗದೆ ಮೋಸ ಹೋಗಿದ್ದರು. ಕೃತ್ಯದ ಬಗ್ಗೆ ಮಂಗಳೂರಿನ ಸೈಬರ್ ಪೊಲೀಸರಿಗೆ ದೂರು ನೀಡಿದ್ದರು. ಅಲ್ಲದೆ, ತಾನು ಹಣ ವರ್ಗಾವಣೆ ಮಾಡಿದ ಬ್ಯಾಂಕ್ ಖಾತೆಗಳ ಮಾಹಿತಿಯನ್ನೂ ನೀಡಿದ್ದರು.
ಪೊಲೀಸರು ಬ್ಯಾಂಕ್ ಖಾತೆಯನ್ನು ಸೀಜ್ ಮಾಡಿ, ಅದರಿಂದ ಯಾವೆಲ್ಲ ಖಾತೆಗಳಿಗೆ ಹಣ ರವಾನೆಯಾಗಿದೆ ಎಂದು ತನಿಖೆ ನಡೆಸಿದ್ದಾರೆ. ಈ ವೇಳೆ ತ್ರಿಶ್ಶೂರು ಜಿಲ್ಲೆಯ ಮಟ್ಟೂರು ಚೆಂಬುಚೀರ ನಿವಾಸಿ ನಿಧಿಶ್ ಕುಮಾರ್ ಎಂಬಾತನ ಖಾತೆಗೆ ಒಂದು ಲಕ್ಷ ಹಣ ರವಾನೆಯಾಗಿರುವುದು ಪತ್ತೆಯಾಗಿತ್ತು. ಸ್ನೇಹಿತನೊಬ್ಬ ತಿಳಿಸಿದಂತೆ ಬಂದಿದ್ದ ಹಣವನ್ನು ವಿವಿಧ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಿದ್ದು, ಇದಕ್ಕಾಗಿ ಕಮಿಷನ್ ಹಣವನ್ನೂ ಪಡೆದಿದ್ದ. ಈ ಬಗ್ಗೆ ವಿಚಾರಣೆ ಸಲುವಾಗಿ ಮಂಗಳೂರು ಪೊಲೀಸರು ನಿಧಿಶ್ ನನ್ನು ವಶಕ್ಕೆ ಪಡೆದಿದ್ದಾರೆ. ಸೆನ್ ಠಾಣೆಯ ಎಸಿಪಿ ರವೀಶ್ ನಾಯ್ಕ್, ಪೊಲೀಸ್ ನಿರೀಕ್ಷಕ ಸತೀಶ್ ಎಂ. ಮತ್ತು ಪಿಎಸ್ಐ ಗುರಪ್ಪ ಕಾಂತಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿತ್ತು.
Share marker scam 10.32 lakhs fraud, accused from thrissur arrested by Mangalore police.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm