ಬ್ರೇಕಿಂಗ್ ನ್ಯೂಸ್
10-01-25 09:51 pm Mangalore Correspondent ಕ್ರೈಂ
ಮಂಗಳೂರು, ಜ.10: ಮಂಗಳೂರು ಪೊಲೀಸರು ಮತ್ತು ಆಂತರಿಕ ಭದ್ರತಾ ವಿಭಾಗದ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ಸುರತ್ಕಲ್ ಸಮೀಪದ ಮುಕ್ಕದಲ್ಲಿ ಕಟ್ಟಡ ನಿರ್ಮಾಣ ಕಾರ್ಮಿಕನಾಗಿದ್ದ ಬಾಂಗ್ಲಾದೇಶ ಮೂಲದ ಯುವಕನನ್ನು ಬಂಧಿಸಿದ್ದಾರೆ.
ಎರಡು ತಿಂಗಳ ಹಿಂದೆ ಅಕ್ರಮ ಪಾಸ್ಪೋರ್ಟ್ ವಿಚಾರದಲ್ಲಿ ಉಡುಪಿಯಲ್ಲಿ ಎಂಟು ಮಂದಿ ಬಾಂಗ್ಲಾ ನಿವಾಸಿಗಳನ್ನು ಬಂಧಿಸಲಾಗಿತ್ತು. ಉಡುಪಿಯಲ್ಲಿ ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಯುವಕರನ್ನು ಪತ್ತೆ ಮಾಡಲಾಗಿತ್ತು. ಅವರ ಜೊತೆಗಿದ್ದ ಮತ್ತೊಬ್ಬ ಬಾಂಗ್ಲಾದೇಶಿಗನ ಬಗ್ಗೆ ಆಂತರಿಕ ಭದ್ರತಾ ವಿಭಾಗದ ಅಧಿಕಾರಿಗಳು ನಿಗಾ ಇಟ್ಟಿದ್ದರು. ಆತ ಉಡುಪಿ ಬಿಟ್ಟು ಕೇರಳಕ್ಕೆ ಪರಾರಿಯಾಗಿದ್ದ. ಕೆಲವು ದಿನಗಳ ಹಿಂದೆ ಸುರತ್ಕಲ್ ಬಳಿಯ ಮುಕ್ಕಕ್ಕೆ ಬಂದು ಮತ್ತೆ ಕೆಲಸಕ್ಕೆ ಸೇರಿಕೊಂಡಿದ್ದ. ಇದೀಗ ಪೊಲೀಸರು ಮುಕ್ಕದಲ್ಲಿ ಬಂಧನ ಮಾಡಿದ್ದು ಆರೋಪಿಯನ್ನು ಅನ್ಸಾರುಲ್ ಶೇಖ್ (25) ಎಂದು ಗುರುತಿಸಲಾಗಿದೆ.
ಈತ ಕಳೆದ ಮೂರು ವರ್ಷಗಳಿಂದ ಅಕ್ರಮವಾಗಿ ನೆಲೆಸಿರುವುದು ತನಿಖೆಯಲ್ಲಿ ಪತ್ತೆಯಾಗಿದೆ. ಬಾಂಗ್ಲಾದೇಶದ ರಾಜಾಶಾಹಿ ಜಿಲ್ಲೆಯ ನಿವಾಸಿಯಾಗಿರುವ ಅನ್ಸಾರುಲ್, ಕಟ್ಟಡ ನಿರ್ಮಾಣ ಕಾರ್ಮಿಕನ ಸೋಗಿನಲ್ಲಿ ಉಳಿದುಕೊಂಡಿದ್ದ. ಅಂತಾರಾಷ್ಟ್ರೀಯ ಗಡಿ ರೇಖೆಯ ಮೂಲಕ ಒಳನುಸುಳಿದ್ದ ಆರೋಪಿ ಮುರ್ಸಿದಾಬಾದ್ ಗೆ ಬಂದಿದ್ದು, ಅಲ್ಲಿಂದ ನೇರವಾಗಿ ಉಡುಪಿಗೆ ಬಂದಿದ್ದ. ಮುಕ್ಕದಲ್ಲಿ ಹೊಸತಾಗಿ ನಿರ್ಮಾಣಗೊಳ್ಳುತ್ತಿರುವ ಮಂಗಳೂರಿನ ಬಿಲ್ಡರ್ ಒಬ್ಬರ ಲೇಔಟ್ ನಲ್ಲಿ ಈಗ ಕೆಲಸಕ್ಕೆ ಸೇರಿದ್ದ. ಇದರ ಬಗ್ಗೆ ಮಾಹಿತಿ ಪಡೆದ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ವಶಕ್ಕೆ ಪಡೆದು ಬೆಂಗಳೂರಿನ ಗಡೀಪಾರು ಕೇಂದ್ರಕ್ಕೆ ಕಳಿಸಿಕೊಟ್ಟಿದ್ದಾರೆ.
In a joint operation, the City Police and the State Internal Securities Division officials apprehended a Bangladeshi national illegally residing in the district. The officials who raided a place at Mukka detained Anarul Sheikh (25), a Bangladeshi who was residing in the nation since three years illegally and was evading the cops.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm