ಬ್ರೇಕಿಂಗ್ ನ್ಯೂಸ್
10-01-25 09:51 pm Mangalore Correspondent ಕ್ರೈಂ
ಮಂಗಳೂರು, ಜ.10: ಮಂಗಳೂರು ಪೊಲೀಸರು ಮತ್ತು ಆಂತರಿಕ ಭದ್ರತಾ ವಿಭಾಗದ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ಸುರತ್ಕಲ್ ಸಮೀಪದ ಮುಕ್ಕದಲ್ಲಿ ಕಟ್ಟಡ ನಿರ್ಮಾಣ ಕಾರ್ಮಿಕನಾಗಿದ್ದ ಬಾಂಗ್ಲಾದೇಶ ಮೂಲದ ಯುವಕನನ್ನು ಬಂಧಿಸಿದ್ದಾರೆ.
ಎರಡು ತಿಂಗಳ ಹಿಂದೆ ಅಕ್ರಮ ಪಾಸ್ಪೋರ್ಟ್ ವಿಚಾರದಲ್ಲಿ ಉಡುಪಿಯಲ್ಲಿ ಎಂಟು ಮಂದಿ ಬಾಂಗ್ಲಾ ನಿವಾಸಿಗಳನ್ನು ಬಂಧಿಸಲಾಗಿತ್ತು. ಉಡುಪಿಯಲ್ಲಿ ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಯುವಕರನ್ನು ಪತ್ತೆ ಮಾಡಲಾಗಿತ್ತು. ಅವರ ಜೊತೆಗಿದ್ದ ಮತ್ತೊಬ್ಬ ಬಾಂಗ್ಲಾದೇಶಿಗನ ಬಗ್ಗೆ ಆಂತರಿಕ ಭದ್ರತಾ ವಿಭಾಗದ ಅಧಿಕಾರಿಗಳು ನಿಗಾ ಇಟ್ಟಿದ್ದರು. ಆತ ಉಡುಪಿ ಬಿಟ್ಟು ಕೇರಳಕ್ಕೆ ಪರಾರಿಯಾಗಿದ್ದ. ಕೆಲವು ದಿನಗಳ ಹಿಂದೆ ಸುರತ್ಕಲ್ ಬಳಿಯ ಮುಕ್ಕಕ್ಕೆ ಬಂದು ಮತ್ತೆ ಕೆಲಸಕ್ಕೆ ಸೇರಿಕೊಂಡಿದ್ದ. ಇದೀಗ ಪೊಲೀಸರು ಮುಕ್ಕದಲ್ಲಿ ಬಂಧನ ಮಾಡಿದ್ದು ಆರೋಪಿಯನ್ನು ಅನ್ಸಾರುಲ್ ಶೇಖ್ (25) ಎಂದು ಗುರುತಿಸಲಾಗಿದೆ.
ಈತ ಕಳೆದ ಮೂರು ವರ್ಷಗಳಿಂದ ಅಕ್ರಮವಾಗಿ ನೆಲೆಸಿರುವುದು ತನಿಖೆಯಲ್ಲಿ ಪತ್ತೆಯಾಗಿದೆ. ಬಾಂಗ್ಲಾದೇಶದ ರಾಜಾಶಾಹಿ ಜಿಲ್ಲೆಯ ನಿವಾಸಿಯಾಗಿರುವ ಅನ್ಸಾರುಲ್, ಕಟ್ಟಡ ನಿರ್ಮಾಣ ಕಾರ್ಮಿಕನ ಸೋಗಿನಲ್ಲಿ ಉಳಿದುಕೊಂಡಿದ್ದ. ಅಂತಾರಾಷ್ಟ್ರೀಯ ಗಡಿ ರೇಖೆಯ ಮೂಲಕ ಒಳನುಸುಳಿದ್ದ ಆರೋಪಿ ಮುರ್ಸಿದಾಬಾದ್ ಗೆ ಬಂದಿದ್ದು, ಅಲ್ಲಿಂದ ನೇರವಾಗಿ ಉಡುಪಿಗೆ ಬಂದಿದ್ದ. ಮುಕ್ಕದಲ್ಲಿ ಹೊಸತಾಗಿ ನಿರ್ಮಾಣಗೊಳ್ಳುತ್ತಿರುವ ಮಂಗಳೂರಿನ ಬಿಲ್ಡರ್ ಒಬ್ಬರ ಲೇಔಟ್ ನಲ್ಲಿ ಈಗ ಕೆಲಸಕ್ಕೆ ಸೇರಿದ್ದ. ಇದರ ಬಗ್ಗೆ ಮಾಹಿತಿ ಪಡೆದ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ವಶಕ್ಕೆ ಪಡೆದು ಬೆಂಗಳೂರಿನ ಗಡೀಪಾರು ಕೇಂದ್ರಕ್ಕೆ ಕಳಿಸಿಕೊಟ್ಟಿದ್ದಾರೆ.
In a joint operation, the City Police and the State Internal Securities Division officials apprehended a Bangladeshi national illegally residing in the district. The officials who raided a place at Mukka detained Anarul Sheikh (25), a Bangladeshi who was residing in the nation since three years illegally and was evading the cops.
13-07-25 08:37 pm
HK News Desk
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
ಬೀದಿನಾಯಿಗಳಿಗೆ ಬಿರಿಯಾನಿ ಭಾಗ್ಯ ; ಶಾಲೆಗಳಲ್ಲಿ ಮಕ...
12-07-25 07:07 pm
ಧರ್ಮಸ್ಥಳ ಘಟನೆ ; ಒಬ್ಬ ವ್ಯಕ್ತಿಯ ಪರವಾಗಿ ವಕೀಲರು ದ...
11-07-25 06:36 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm