ಬ್ರೇಕಿಂಗ್ ನ್ಯೂಸ್
11-01-25 10:21 pm Mangalore Correspondent ಕ್ರೈಂ
ಮಂಗಳೂರು, ಜ.11: ಪಾರ್ಟಿಯಲ್ಲಿ ಯುವತಿಗೆ ಅಮಲು ಪದಾರ್ಥ ಕೊಟ್ಟು ಆಕೆಯನ್ನು ಅತ್ಯಾಚಾರಗೈದ ಪ್ರಕರಣದಲ್ಲಿ ಆರೋಪ ಸಾಬೀತಾಗಿದ್ದು, ಅಪರಾಧಿಗೆ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಶನ್ಸ್ ನ್ಯಾಯಾಲಯ 10 ವರ್ಷ ಕಠಿಣ ಸಜೆ ವಿಧಿಸಿ ತೀರ್ಪು ನೀಡಿದೆ.
ಮಂಗಳೂರು ನಗರದ ಲೈಟ್ ಹೌಸ್ ಹಿಲ್ ರಸ್ತೆಯ ನಿವಾಸಿ ಬ್ರಿಯಾನ್ ರಿಚರ್ಡ್ ಅಮ್ಮನ್ನ (34) ಶಿಕ್ಷೆಗೊಳಗಾದ ವ್ಯಕ್ತಿ. ಸಂತ್ರಸ್ತ ಯುವತಿ ಬ್ಯಾಂಕ್ ಒಂದರಲ್ಲಿ ಉದ್ಯೋಗಿಯಾಗಿದ್ದು, ಇವರ ಗ್ರಾಹಕರು ಮತ್ತು ಸ್ನೇಹಿತರಾದ ನೌಕಾಪಡೆಯಲ್ಲಿ ಉದ್ಯೋಗದಲ್ಲಿದ್ದ ಜಾಯ್ಲಿನ್ ಗ್ಲಾನೆಲ್ ಎಂಬವರಿಗೆ ಅಂಡಮಾನ್ ಗೆ ವರ್ಗಾವಣೆಯಾಗಿತ್ತು. ಇದರ ನೆಪದಲ್ಲಿ 2021ರ ಫೆಬ್ರವರಿ 5ರಂದು ಪುತ್ತೂರಿನ ಕೊಡಿಪ್ಪಾಡಿ ಗ್ರಾಮದ ಕೋಡಿಕಾಡು ಎಂಬಲ್ಲಿನ ಗೆಸ್ಟ್ ಹೌಸ್ ನಲ್ಲಿ ಪಾರ್ಟಿ ಆಯೋಜಿಸಲಾಗಿತ್ತು.
ಪಾರ್ಟಿಗೆ ಯುವತಿಯನ್ನೂ ಆಹ್ವಾನಿಸಿದ್ದು, ಜಾಯ್ಲಿನ್ ಅವರ ಸ್ನೇಹಿತನ ಕಾರಿನಲ್ಲಿ ಪುತ್ತೂರಿಗೆ ತೆರಳಿದ್ದರು. ಸ್ನೇಹಿತರು ಪಾರ್ಟಿಯಲ್ಲಿ ತೊಡಗಿದ್ದಾಗ ಯುವತಿಗೆ ವೈನ್ ಎಂದು ಕುಡಿಯಲು ಕೊಟ್ಟಿದ್ದರು. ಪಾರ್ಟಿ ಮಧ್ಯೆ ಜಾಯ್ಲಿನ್ ಸ್ನೇಹಿತ ಎಂದು ಆರೋಪಿ ಬ್ರಿಯಾನ್ ತನ್ನನ್ನು ಪರಿಚಯಿಸಿಕೊಂಡಿದ್ದ. ಪಾರ್ಟಿ ಮುಗಿದ ಬಳಿಕ ಎಲ್ಲರೂ ಗೆಸ್ಟ್ ಹೌಸ್ ರೂಮಿಗೆ ತೆರಳಿದ್ದರು. ಪಾರ್ಟಿ ಆಯೋಜಿಸಿದ್ದ ಜಾಯ್ಲಿನ್ ಮತ್ತು ರೆಬೆಕಾ ಎಂಬವರು ಯುವತಿ ಇದ್ದ ರೂಮಿನಲ್ಲೇ ಮಲಗಿದ್ದರು. ಅರ್ಧ ರಾತ್ರಿಯಲ್ಲಿ ಯುವತಿ ಎಚ್ಚರಗೊಂಡಾಗ ಜಾಯ್ಲಿನ್ ಮತ್ತು ರೆಬೆಕಾ ರೂಮಿನಲ್ಲಿ ಇರಲಿಲ್ಲ. ಈಕೆಯ ರೂಮಿನಲ್ಲಿ ಯಾರೂ ಇಲ್ಲದಿರುವುದನ್ನು ಗಮನಿಸಿದ ಆರೋಪಿ ಬ್ರಿಯಾನ್ ರಿಚರ್ಡ್ ಅಲ್ಲಿಗೆ ಬಂದು ಯುವತಿ ಮೇಲೆ ಬಲವಂತದಿಂದ ಅತ್ಯಾಚಾರ ನಡೆಸಿದ್ದಾನೆ. ಯುವತಿ ಮರುದಿನ ಫೆ.6ರಂದು ಪುತ್ತೂರಿನ ಮಹಿಳಾ ಠಾಣೆಯಲ್ಲಿ ದೂರು ನೀಡಿದ್ದಳು.
ಯುವತಿಗೆ ತಿಳಿಯದಂತೆ ಆರೋಪಿ ಬ್ರಿಯಾನ್, ಕುಡಿಯಲು ಕೊಟ್ಟಿದ್ದ ಪಾನೀಯದಲ್ಲಿ ಅಮಲು ಪದಾರ್ಥ ಬೆರೆಸಿದ್ದ. ಅಮಲಿನಲ್ಲಿದ್ದಾಗ ಅತ್ಯಾಚಾರ ನಡೆಸಿದ್ದಾನೆ. ಪುತ್ತೂರು ಮಹಿಳಾ ಠಾಣೆ ನಿರೀಕ್ಷಕ ತಿಮ್ಮಪ್ಪ ನಾಯ್ಕ ದೋಷಾರೋಪ ಸಲ್ಲಿಸಿದ್ದರು. ಸಂತ್ರಸ್ತೆ ಪರವಾಗಿ 21 ಸಾಕ್ಷಿದಾರರು ಕೋರ್ಟಿನಲ್ಲಿ ಸಾಕ್ಷಿ ಹೇಳಿದ್ದು 37 ದಾಖಲೆಗಳನ್ನು ಸಲ್ಲಿಸಲಾಗಿತ್ತು. ವಿಚಾರಣೆ ನಡೆಸಿದ ನ್ಯಾಯಾಧೀಶ ಕಾಂತರಾಜು ಎಸ್.ವಿ. ಅವರು ಆರೋಪ ಸಾಬೀತಾಗಿದ್ದರಿಂದ ತೀರ್ಪು ಪ್ರಕಟಿಸಿದ್ದು 10 ವರ್ಷ ಕಠಿಣ ಶಿಕ್ಷೆ ಮತ್ತು 10 ಸಾವಿರ ರೂ. ದಂಡ ವಿಧಿಸಿದ್ದಾರೆ.
The sixth additional District and Sessions Court has sentenced a man to ten years rigorous imprisonment for raping a young woman after spiking her drink at a party.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm