ಬ್ರೇಕಿಂಗ್ ನ್ಯೂಸ್
13-01-25 03:30 pm Mangaluru Correspondent ಕ್ರೈಂ
ಮಂಗಳೂರು, ಜ.13: ತಣ್ಣೀರುಬಾವಿ ಬಳಿಯ ಗಣೇಶ್ ಕಟ್ಟೆ ಎಂಬಲ್ಲಿ ಭಾನುವಾರ (ನಿನ್ನೆ) ರಾತ್ರಿ ಯುವಕರ ಗುಂಪುಗಳ ನಡುವೆ ಗಲಾಟೆ ನಡೆದಿದ್ದು, ಗಾಂಜಾ ಮತ್ತು ಕುಡಿದ ಮತ್ತಿನಲ್ಲಿ ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಘಟನೆಯ ಬಗ್ಗೆ ಪಣಂಬೂರು ಠಾಣೆಯಲ್ಲಿ ಇತ್ತಂಡಗಳಿಂದ ದೂರು, ಪ್ರತಿದೂರು ದಾಖಲಾಗಿದೆ. ಘಟನೆ ಹಿನ್ನೆಲೆಯಲ್ಲಿ ಹಿಂದು- ಮುಸ್ಲಿಂ ಗುಂಪುಗಳ ನಡುವೆ ಹೊಡೆದಾಟ ಆಗಿದೆಯೆಂದು ಜಾಲತಾಣದಲ್ಲಿ ಸುಳ್ಳು ಸುದ್ದಿ ಹಬ್ಬಿಸಿದ ಯತ್ನವೂ ನಡೆದಿದೆ.
ವೆಂಕಟೇಶ್, ಕಾರ್ತಿಕ್, ಸಂತೋಷ್, ಸೈಫ್, ಧನುಷ್, ಪ್ರಜ್ವಲ್ ಎಂಬವರು ಮದ್ಯಪಾನ ಮಾಡಿಕೊಂಡು ಸಿಗರೇಟ್ ಸೇದುತ್ತಿದ್ದಾಗ ಪ್ರೀತಂ ಮತ್ತು ಸನ್ವಿತ್ ಎಂಬವರು ಸ್ಥಳಕ್ಕೆ ಬಂದು ಸಿಗರ್ ಲೈಟ್ ಕೇಳಿದ್ದಾರೆ. ಪ್ರಜ್ವಲ್ ಸಿಗರ್ ಲೈಟ್ ನೀಡಿದ್ದು, ಹಿಂತಿರುಗಿ ನೀಡದೇ ಇದ್ದ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಗಲಾಟೆಯಾಗಿದೆ. ಗಾಂಜಾ ಅಮಲಿನಲ್ಲಿದ್ದ ಯುವಕರು ಪರಸ್ಪರ ಹೊಡೆದಾಡಿದ್ದಾರೆ. ಘಟನೆ ಸಂಬಂಧಿಸಿ ಗಾಯಗೊಂಡವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದು, ಒಬ್ಬನನ್ನು ಅಡ್ಮಿಟ್ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಕಾರ್ತಿಕ್ ತಲೆಗೆ ಬೀಯರ್ ಬಾಟಲಿಯಿಂದ ಹೊಡೆದು ಗಾಯಗೊಳಿಸಿದ್ದು, ಇತರ 4-5 ಜನರು ಸೇರಿ ಮರದ ದೊಣ್ಣೆಯಿಂದ ಪ್ರಜ್ವಲ್, ಕಾರ್ತಿಕ್, ಸಂತೋಷ್, ಸೈಫ್, ಧನುಷ್ ಎಂಬವರಿಗೆ ಹಲ್ಲೆ ನಡೆಸಲಾಗಿದೆ. ಪ್ರೀತಂ ಎಂಬಾತ ನೀಡಿದ ದೂರಿನಂತೆ, ಪಣಂಬೂರು ಠಾಣೆಯಲ್ಲಿ ವೆಂಕಟೇಶ್, ಕಾರ್ತಿಕ್, ಸಂತೋಷ್, ಸೈಫ್, ಧನುಷ್, ಪ್ರಜ್ವಲ್ ಅವರನ್ನು ಆರೋಪಿಗಳೆಂದು ಹೇಳಿದ್ದು, ಈ ಪೈಕಿ ಕಾರ್ತಿಕ್, ಸಂತೋಷ್, ಧನುಷ್, ಪ್ರಜ್ವಲ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಪ್ರತಿಯಾಗಿ ಪ್ರಜ್ವಲ್ ನೀಡಿದ ದೂರಿನಂತೆ, ಪ್ರೀತಂ ಮತ್ತು ಸನ್ವಿತ್ ಹಾಗೂ ಇತರರ ಮೇಲೆ ದೂರು ದಾಖಲಾಗಿದೆ.
ಸದ್ರಿ ಘಟನೆಗೆ ಸಂಬಂಧಿಸಿ ವಾಟ್ಸಪ್ ನಲ್ಲಿ ಬೆಂಗ್ರೆ ಪರಿಸರದಲ್ಲಿ ಹಿಂದುಗಳ ಮನೆಯನ್ನು ಗುರಿಯಾಗಿಸಿ ತಲವಾರು ಸಹಿತ ಮುಸ್ಲಿಮರು ನುಗ್ಗಿದ್ದು ಪರಿಶಿಷ್ಟ ಸಮುದಾಯದ ಯುವಕನ ಮೇಲೆ ಹಲ್ಲೆ ನಡೆಸಿದ್ದಾರೆ. ಪರಾರಿಯಾಗುವ ಯತ್ನದಲ್ಲಿ ಒಬ್ಬನನ್ನು ಸ್ಥಳೀಯರು ಸೆರೆಹಿಡಿದಿದ್ದಾಗಿ ಜಾಲತಾಣದಲ್ಲಿ ಸುಳ್ಳು ಸುದ್ದಿ ಹಬ್ಬಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ತಣ್ಣೀರುಬಾವಿ, ಬೆಂಗ್ರೆ ಪರಿಸರದಲ್ಲಿ ಗಾಂಜಾ ವ್ಯಸನ ಜೋರಾಗಿದ್ದು, ಯುವಕರು ಹಗಲಿನಲ್ಲೇ ತೇಲಾಡುತ್ತ ಇರುತ್ತಾರೆ. ಎರಡು ದಿನಗಳಿಂದ ಬೀಚ್ ಉತ್ಸವ ಕಾರಣಕ್ಕೆ ಯುವಕರು ಜಾಲಿ ಮಾಡುತ್ತಿದ್ದರು. ಅದೇ ಗುಂಗಿನಲ್ಲಿ ಗಲಾಟೆ ಆಗಿರುವ ಸಾಧ್ಯತೆಯಿದೆ.
Mangalore Fight near Tannirbhavi beach Two cases filed for spreading communal rumours, four arrested. An altercation late on January 12 near Ganesh Katte, Tannirbhavi, under the jurisdiction of Panambur police station, escalated into a violent clash between two groups
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm