ಬ್ರೇಕಿಂಗ್ ನ್ಯೂಸ್
14-01-25 10:40 pm HK News Desk ಕ್ರೈಂ
ಪತ್ತನಂತಿಟ್ಟ, ಜ 14: ದಲಿತ ಬಾಲಕಿ ಮೇಲೆ ನಡೆದ ಅತ್ಯಾಚಾರ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್ಐಟಿ) 44 ಆರೋಪಿಗಳನ್ನು ಬಂಧಿಸಿದೆ.
ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವುದಕ್ಕೆ ಸಂಬಂಧಿಸಿದಂತೆ 30 ಎಫ್ಐಆರ್ಗಳನ್ನು ದಾಖಲಿಸಿಕೊಳ್ಳಲಾಗಿದೆ ಎಂದು ಡಿಐಜಿ ಎಸ್. ಅಜೀತಾ ಬೇಗಂ ಮಂಗಳವಾರ ತಿಳಿಸಿದರು.
ಎಫ್ಐಆರ್ನಲ್ಲಿ ಉಲ್ಲೇಖವಾಗಿರುವ 59 ಆರೋಪಿಗಳಲ್ಲಿ 44 ಜನರನ್ನು ಬಂಧಿಸಲಾಗಿದೆ. ಇಬ್ಬರು ವಿದೇಶದಲ್ಲಿದ್ದಾರೆ. ಇವರ ಬಂಧನಕ್ಕೆ ಇಂಟರ್ಪೋಲ್ ಮೂಲಕ ರೆಡ್ಕಾರ್ನರ್ ನೋಟಿಸ್ ನೀಡಲು ಚಿಂತಿಸಲಾಗುತ್ತಿದೆ. ಉಳಿದ 13 ಮಂದಿಯನ್ನು ಬಂಧಿಸುತ್ತೇವೆ ಎಂದು ಹೇಳಿದರು.
ಕಳೆದ ವರ್ಷ 12ನೇ ತರಗತಿ ಓದುತ್ತಿದ್ದ ಯುವತಿಯನ್ನು ಇನ್ಸ್ಟಾಗ್ರಾಂ ಮೂಲಕ ಪರಿಚಯಿಸಿಕೊಂಡ ಯುವಕನೊಬ್ಬ ರಬ್ಬರ್ ತೋಟಕ್ಕೆ ಕರೆದೊಯ್ದು, ಅಲ್ಲಿ ಮೂವರೊಂದಿಗೆ ಸೇರಿಕೊಂಡು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದ ಎಂಬುದು ತನಿಖೆಯಲ್ಲಿ ಪತ್ತೆಯಾಗಿತ್ತು
2024ರ ಜನವರಿಯಲ್ಲಿ ಕಾರಿನೊಳಗೆ ಹಾಗೂ ಪತ್ತನಂತಿಟ್ಟ ಜನರಲ್ ಆಸ್ಪತ್ರೆಯಲ್ಲೂ ಸೇರಿದಂತೆ ಕನಿಷ್ಠ ಐದು ಬಾರಿ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂಬುದು ಗೊತ್ತಾಗಿದೆ.
62 ಜನರಿಂದ ಅತ್ಯಾಚಾರ:
'13 ವರ್ಷ ಆದಾಗಿನಿಂದ ಅತ್ಯಾಚಾರಕ್ಕೊಳಗಾಗಿದ್ದೇನೆ. ಇದುವರೆಗೂ 62 ಜನರು ನನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ' ಎಂದು 18 ವರ್ಷದ ದಲಿತ ಯುವತಿಯು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಕ್ರೀಡಾ ತರಬೇತುದಾರರು, ಸಹ ಕ್ರೀಡಾಪಟುಗಳು ಮತ್ತು ಸಹಪಾಠಿಗಳೇ ಆಕೆಯನ್ನು ಶೋಷಿಸಿರುವ ಪುರಾವೆಗಳು ಲಭಿಸಿವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
The special investigation team (SIT) of Kerala police probing the sensational case of alleged sexual abuse of a Dalit girl in the district has arrested 44 people so far in connection with the matter, a senior police officer of the district said on Tuesday (January 14, 2025).
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm