ಬ್ರೇಕಿಂಗ್ ನ್ಯೂಸ್
14-01-25 10:40 pm HK News Desk ಕ್ರೈಂ
ಪತ್ತನಂತಿಟ್ಟ, ಜ 14: ದಲಿತ ಬಾಲಕಿ ಮೇಲೆ ನಡೆದ ಅತ್ಯಾಚಾರ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್ಐಟಿ) 44 ಆರೋಪಿಗಳನ್ನು ಬಂಧಿಸಿದೆ.
ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವುದಕ್ಕೆ ಸಂಬಂಧಿಸಿದಂತೆ 30 ಎಫ್ಐಆರ್ಗಳನ್ನು ದಾಖಲಿಸಿಕೊಳ್ಳಲಾಗಿದೆ ಎಂದು ಡಿಐಜಿ ಎಸ್. ಅಜೀತಾ ಬೇಗಂ ಮಂಗಳವಾರ ತಿಳಿಸಿದರು.
ಎಫ್ಐಆರ್ನಲ್ಲಿ ಉಲ್ಲೇಖವಾಗಿರುವ 59 ಆರೋಪಿಗಳಲ್ಲಿ 44 ಜನರನ್ನು ಬಂಧಿಸಲಾಗಿದೆ. ಇಬ್ಬರು ವಿದೇಶದಲ್ಲಿದ್ದಾರೆ. ಇವರ ಬಂಧನಕ್ಕೆ ಇಂಟರ್ಪೋಲ್ ಮೂಲಕ ರೆಡ್ಕಾರ್ನರ್ ನೋಟಿಸ್ ನೀಡಲು ಚಿಂತಿಸಲಾಗುತ್ತಿದೆ. ಉಳಿದ 13 ಮಂದಿಯನ್ನು ಬಂಧಿಸುತ್ತೇವೆ ಎಂದು ಹೇಳಿದರು.
ಕಳೆದ ವರ್ಷ 12ನೇ ತರಗತಿ ಓದುತ್ತಿದ್ದ ಯುವತಿಯನ್ನು ಇನ್ಸ್ಟಾಗ್ರಾಂ ಮೂಲಕ ಪರಿಚಯಿಸಿಕೊಂಡ ಯುವಕನೊಬ್ಬ ರಬ್ಬರ್ ತೋಟಕ್ಕೆ ಕರೆದೊಯ್ದು, ಅಲ್ಲಿ ಮೂವರೊಂದಿಗೆ ಸೇರಿಕೊಂಡು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದ ಎಂಬುದು ತನಿಖೆಯಲ್ಲಿ ಪತ್ತೆಯಾಗಿತ್ತು
2024ರ ಜನವರಿಯಲ್ಲಿ ಕಾರಿನೊಳಗೆ ಹಾಗೂ ಪತ್ತನಂತಿಟ್ಟ ಜನರಲ್ ಆಸ್ಪತ್ರೆಯಲ್ಲೂ ಸೇರಿದಂತೆ ಕನಿಷ್ಠ ಐದು ಬಾರಿ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂಬುದು ಗೊತ್ತಾಗಿದೆ.
62 ಜನರಿಂದ ಅತ್ಯಾಚಾರ:
'13 ವರ್ಷ ಆದಾಗಿನಿಂದ ಅತ್ಯಾಚಾರಕ್ಕೊಳಗಾಗಿದ್ದೇನೆ. ಇದುವರೆಗೂ 62 ಜನರು ನನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ' ಎಂದು 18 ವರ್ಷದ ದಲಿತ ಯುವತಿಯು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಕ್ರೀಡಾ ತರಬೇತುದಾರರು, ಸಹ ಕ್ರೀಡಾಪಟುಗಳು ಮತ್ತು ಸಹಪಾಠಿಗಳೇ ಆಕೆಯನ್ನು ಶೋಷಿಸಿರುವ ಪುರಾವೆಗಳು ಲಭಿಸಿವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
The special investigation team (SIT) of Kerala police probing the sensational case of alleged sexual abuse of a Dalit girl in the district has arrested 44 people so far in connection with the matter, a senior police officer of the district said on Tuesday (January 14, 2025).
06-06-25 10:58 pm
Bangalore Correspondent
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
Police Constable Protest, Commissioner Dayana...
06-06-25 09:03 pm
RCB Manager Arrest, Court; ಸಿಎಂ ಸೂಚನೆಯಂತೆ ತನಿ...
06-06-25 05:32 pm
Rcb, Death, Dayanand IPS, Congress: ಕಾಲ್ತುಳಿತ...
06-06-25 02:14 pm
06-06-25 11:08 pm
HK News Desk
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
MP Brijesh Chowta, Delegation: ಐದು ದೇಶಗಳಲ್ಲಿ...
03-06-25 10:10 pm
ಎರಡನೇ ಮಹಡಿಯಿಂದ ಕೆಳಕ್ಕೆ ಬಿದ್ದ ಕಟ್ಟಡ ಕಾರ್ಮಿಕನನ್...
01-06-25 12:35 pm
07-06-25 12:08 pm
Mangalore Correspondent
Magalore Bus Accident, Bangalore: ಮಂಗಳೂರು- ಬೆ...
07-06-25 11:46 am
ಮಂಗಳೂರಿನ ಹುಡುಗ ಜಾಗತಿಕ ವೇದಿಕೆಯತ್ತ ಹೆಜ್ಜೆ ; ಜೂನ...
06-06-25 09:29 pm
Mangalore Minister Mankal Vaidya: ನಾಪತ್ತೆಯಾದ...
06-06-25 07:20 pm
Puttur Arun Puthila, DK Sp Arun Kumar, Notice...
06-06-25 05:33 pm
03-06-25 10:25 pm
Mangalore Correspondent
Mangalore Suhas Shetty Murder Case, arrest; ಸ...
03-06-25 08:01 pm
Bank robbery, Vijayapura, 58 crore: ವಿಜಯಪುರದಲ...
03-06-25 01:33 pm
Mangalore Police, CCB, Cattle trafficking, Ta...
02-06-25 04:01 pm
Ullal, Mangalore, Crime: ಕೋಮು ದ್ವೇಷದ ನೆಲದಲ್ಲ...
01-06-25 11:02 pm