ಬ್ರೇಕಿಂಗ್ ನ್ಯೂಸ್
15-01-25 11:06 pm Mangalore Correspondent ಕ್ರೈಂ
ಮಂಗಳೂರು, ಜ.16: ನಕಲಿ ಷೇರು ಮಾರುಕಟ್ಟೆ ಜಾಲದ ಮೂಲಕ ಅಪರಿಚಿತ ವ್ಯಕ್ತಿಗಳು ಮಂಗಳೂರಿನ ವ್ಯಕ್ತಿಯೊಬ್ಬರಿಂದ 77.96 ಲಕ್ಷ ರೂಪಾಯಿ ಹಣ ಪೀಕಿಸಿ ಮೋಸ ಮಾಡಿದ ಪ್ರಕರಣದಲ್ಲಿ ಹಣ ವರ್ಗಾವಣೆಯಾದ ಬ್ಯಾಂಕ್ ಖಾತೆಯೊಂದರ ಬೆನ್ನು ಹತ್ತಿ ಕಮಿಷನ್ ಆಸೆಗೆ ಹಣ ಪಡೆದು ಡ್ರಾ ಮಾಡಿಕೊಟ್ಟ ಕೇರಳ ಮೂಲದ ಆರೋಪಿಯನ್ನು ಬಂಧಿಸಿದ್ದಾರೆ.
ಈ ಬಗ್ಗೆ ಮಂಗಳೂರು ನಗರ ಸಿ.ಇ.ಎನ್ ಕ್ರೈಂ ಪೊಲೀಸ್ ಠಾಣೆಯಲ್ಲಿ 108/2024 ಕಲಂ 66(ಸಿ) 66(ಡಿ) ಐಟಿ ಆಕ್ಟ್ 318(4),3(5) ಬಿ.ಎನ್.ಎಸ್ ಅಡಿ ಪ್ರಕರಣ ದಾಖಲಾಗಿತ್ತು. ಅಪಚಿರಿತ ವ್ಯಕ್ತಿ ವಾಟ್ಸ್ ಆಪ್ ನಲ್ಲಿ ಮೆಸೇಜ್ ಮಾಡಿ ಷೇರು ಮಾರುಕಟ್ಟೆಯಲ್ಲಿ ಹಣ ತೊಡಗಿಸಿದರೆ ಹೆಚ್ಚಿನ ಲಾಭಾಂಶ ಸಿಗಬಹುದು ಎಂದು ನಂಬಿಸಿ ವ್ಯಕ್ತಿಯೊಬ್ಬರಿಂದ ಹಂತ ಹಂತವಾಗಿ ಒಟ್ಟು 77,96,322.08/- ಹಣವನ್ನು ಪಡೆದು ವಂಚನೆ ಮಾಡಿದ್ದರು.
ತನಿಖೆ ನಡೆಸಿದ ಪೊಲೀಸರು ಹಣ ವರ್ಗಾವಣೆಯಾಗಿದ್ದ ಬ್ಯಾಂಕ್ ಖಾತೆದಾರರ ವಿವರವನ್ನು ಸಂಗ್ರಹಿಸಿ ನೋಡಿದಾಗ ಪಶ್ಚಿಮ ಬಂಗಾಳದ ಮೂಲದ ವ್ಯಕ್ತಿಗೆ ರೂ 26,27,114.4/- ಹಣ ವರ್ಗಾವಣೆಯಾಗಿದ್ದು ಪತ್ತೆಯಾಗಿದೆ. ನಂತರದಲ್ಲಿ ಸದ್ರಿ ಆರೋಪಿಯ ಬ್ಯಾಂಕ್ ಖಾತೆಯಿಂದ ಕೇರಳದ ಕಣ್ಣೂರು ನಿವಾಸಿ ಉಮ್ಮರ್ ವಲಿಯ ಪರಂಬತ್ (41) ಎಂಬಾತನ ಬ್ಯಾಂಕ್ ಖಾತೆಗೆ ರೂ,6,00,000/- ರೂ. ಹಣ ರವಾನೆಯಾಗಿದ್ದು ಕಂಡುಬಂದಿತ್ತು. ಈ ಬಗ್ಗೆ ತನಿಖೆ ಕೈಗೊಂಡಾಗ ಕಣ್ಣೂರು ಜಿಲ್ಲೆಯ ಪತಾಯಕುನ್ನು ನಿವಾಸಿ ರಿಯಾಸ್ ಎಂ.ವಿ (45) ಎಂಬಾತ ಹಣವನ್ನು ವರ್ಗಾವಣೆ ಮಾಡಿಸಿದ್ದು, ಹಣ ವಿಥ್ ಡ್ರಾ ಮಾಡಿಕೊಟ್ಟಲ್ಲಿ ಕಮಿಷನ್ ನೀಡುವುದಾಗಿ ತಿಳಿಸಿದ್ದ ಎನ್ನುವ ಮಾಹಿತಿ ಸಿಕ್ಕಿತ್ತು. ಇದರಂತೆ, ರಿಯಾಸ್ ಸೂಚನೆಯಂತೆ 6,00,000 ಲಕ್ಷ ಹಣವನ್ನು ವಿಥ್ ಡ್ರಾ ಮಾಡಿರುವುದಾಗಿ ತಿಳಿಸಿದ್ದಾನೆ. ಸದ್ಯ ಪ್ರಕರಣದಲ್ಲಿ ಭಾಗಿಯಾದ ಈ ಇಬ್ಬರು ಕೇರಳ ಮೂಲದ ವ್ಯಕ್ತಿಗಳನ್ನು ದಸ್ತಗಿರಿ ಮಾಡಲಾಗಿದೆ. ಸೆನ್ ಠಾಣಾಧಿಕಾರಿ ಎಸಿಪಿ ರವೀಶ್ ನಾಯಕ ಮತ್ತು ಸೆನ್ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕರಾದ ಸತೀಶ್ ಎಂ.ಪಿ ಮತ್ತು ಪೊಲೀಸ್ ಉಪ ನಿರೀಕ್ಷಕ ಗುರಪ್ಪ ಕಾಂತಿ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿತ್ತು.
Fake share market scam, 78 lakhs looted by fraudsters, two arrested by Mangalore police for helping fraudsters to withdraw money.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm