ಬ್ರೇಕಿಂಗ್ ನ್ಯೂಸ್
17-01-25 03:02 pm Mangaluru Correspondent ಕ್ರೈಂ
ಉಳ್ಳಾಲ, ಜ.17: ಮಟ ಮಟ ಮಧ್ಯಾಹ್ನವೇ ಉಳ್ಳಾಲ ಠಾಣಾ ವ್ಯಾಪ್ತಿಯ ಕೆ.ಸಿ ರೋಡ್ ಜಂಕ್ಷನ್ ನಲ್ಲಿರುವ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ಶಾಖೆಯಿಂದ ದರೋಡೆ ನಡೆದಿದೆ. ಬ್ಯಾಂಕ್ ಶಾಖೆಗೆ ನುಗ್ಗಿದ ಐವರು ಮಾಸ್ಕ್ ಧಾರಿಗಳು ಒಳಗಿದ್ದ ಐವರು ಸಿಬ್ಬಂದಿಗಳಿಗೆ ಬಂದೂಕು, ತಲ್ವಾರ್ ತೋರಿಸಿ ದರೋಡೆ ನಡೆಸಿದ್ದಾರೆ. ಬೀದರಿನಲ್ಲಿ ನಿನ್ನೆ ಎಟಿಎಂ ಹಣ ತುಂಬುವಾಗ ಗನ್ ಶೂಟ್ ಮಾಡಿದ ದರೋಡೆ ಬೆನ್ನಲ್ಲೇ ದಕ್ಷಿಣ ಕರ್ನಾಟಕದ ತುದಿಯಲ್ಲಿ ಅಂತಹದ್ದೇ ಘಟನೆ ನಡೆದಿದೆ.
ಶುಕ್ರವಾರ ಮಧ್ಯಾಹ್ನ ಒಂದು ಗಂಟೆ ವೇಳೆಗೆ ಕಾರಿನಲ್ಲಿ ಬಂದ ಆಗಂತುಕರಲ್ಲಿ ಐವರು ಬ್ಯಾಂಕ್ ಶಾಖೆಗೆ ನುಗ್ಗಿದ್ದು ಕಚೇರಿಯಲ್ಲಿದ್ದ ಸಿಬ್ಬಂದಿಗಳಿಗೆ ಮಾರಕಾಯುಧಗಳನ್ನ ತೋರಿಸಿ ಸುಮಾರು ಹತ್ತು ಕೋಟಿಗೂ ಅಧಿಕ ಬೆಲೆಬಾಳುವ ಚಿನ್ನಾಭರಣ, ಸುಮಾರು ಐದು ಲಕ್ಷ ರೂಪಾಯಿ ನಗದನ್ನ ದರೋಡೆಗೈದು ಮಂಗಳೂರು ಕಡೆ ಕಾರಿನಲ್ಲಿ ಪರಾರಿಯಾಗಿದ್ದಾರೆ.






ಕೆ.ಸಿ ರೋಡ್ ಜಂಕ್ಷನ್ನಲ್ಲಿರುವ ವಾಣಿಜ್ಯ ಕಟ್ಟಡದ ಮೊದಲ ಮಹಡಿಯಲ್ಲಿ ಕಾರ್ಯಾಚರಿಸುತ್ತಿದ್ದ ಬ್ಯಾಂಕ್ ಶಾಖೆಯಲ್ಲಿ ದರೋಡೆ ನಡೆದಿದೆ. ಬ್ಯಾಂಕಿನ ಕೆಳಗಿನ ಅಂತಸ್ತಿನ ಬೇಕರಿಯಲ್ಲಿದ್ದ ನಾಲ್ವರು ಶಾಲಾ ವಿದ್ಯಾರ್ಥಿಗಳು ಬ್ಯಾಂಕಿನ ಸಿಬ್ಬಂದಿಗಳ ಬೊಬ್ಬೆ ಕೇಳಿ ಮೇಲೆ ಓಡಿದ್ದಾರೆ. ವಿದ್ಯಾರ್ಥಿಗಳಿಗೆ ಆಗಂತುಕರು ಗನ್ ತೋರಿಸಿ ಬೆದರಿಸಿದ್ದಾರೆ.
ಎಸಿಪಿ ಧನ್ಯ ನಾಯಕ್ ನೇತೃತ್ವದ ಪೊಲೀಸರ ತಂಡವು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದೆ. ಸ್ಥಳಕ್ಕೆ ಸ್ಪೀಕರ್ ಖಾದರ್ ಭೇಟಿ ನೀಡಿ ಆರೋಪಿಗಳನ್ನ ಶೀಘ್ರ ಬಂಧಿಸಲು ಪೊಲೀಸರಿಗೆ ಸೂಚನೆ ನೀಡಿದ್ದಾರೆ.
ವಿಶೇಷ ಅಂದ್ರೆ, ಬ್ಯಾಂಕ್ ಒಳಗಿನ ಸಿಸಿಟಿವಿ ಕ್ಯಾಮೆರಾವನ್ನು ಸರ್ವಿಸ್ ಮಾಡುತ್ತಿದ್ದ ವೇಳೆಯೇ ಘಟನೆ ನಡೆದಿದೆ. ಹೊರಗಿನ ಕ್ಯಾಮೆರಾದಲ್ಲಿ ಆರೋಪಿಗಳು ಪಲಾಯನಗೈಯುತ್ತಿರುವ ದೃಶ್ಯ ಸೆರೆಯಾಗಿದೆ. ಹೀಗಾಗಿ ಬ್ಯಾಂಕ್ ಬಗ್ಗೆ ತಿಳಿದಿರುವ ಮಂದಿಯೇ ದರೋಡೆ ನಡೆಸಿರುವಂತೆ ಕಂಡುಬಂದಿದೆ.
Bank robbery in Kotekar Vyavasaaya Seva Sahakaari Bank, Armed gang robs gold, cash in daylight heist. A daring robbery was carried out in broad daylight at the Kotekar Cooperative Society Bank, K C Road branch, by a gang of five armed individuals.
26-12-25 01:35 pm
HK News Desk
ಸದ್ಯಕ್ಕಿಲ್ಲ ಸಿಎಂ ಬದಲಾವಣೆ ! ರಾಜ್ಯದಿಂದ ಕೇಂದ್ರ ನ...
25-12-25 08:00 pm
Chitradurga Seabird Bus accident: ಚಿತ್ರದುರ್ಗ...
25-12-25 06:26 pm
SeaBird Bus Fire Accident, Chitradurga: ಕಂಟೈನ...
25-12-25 12:12 pm
ತಡರಾತ್ರಿ ವರೆಗೂ ವಹಿವಾಟು ; ಹೊಟೇಲ್ ವ್ಯವಸ್ಥಾಪಕರಿಂ...
24-12-25 11:20 pm
26-12-25 03:04 pm
HK News Desk
ಹೆತ್ತವರು ಮನೆಯಲ್ಲಿ ಆತ್ಮಹತ್ಯೆ ; ಬೆಳೆದು ನಿಂತ ಪುತ...
26-12-25 02:50 pm
ಜಗತ್ತಿನ ಅತಿ ದೊಡ್ಡ ಮುಸ್ಲಿಂ ದೇಶದಲ್ಲಿ 4500 ವರ್ಷ...
24-12-25 11:13 pm
ಅಯೋಧ್ಯೆ ಮಂದಿರಕ್ಕೆ ಚಿನ್ನ, ವಜ್ರ, ಪಚ್ಚೆ ಕಲ್ಲುಗಳಿ...
24-12-25 07:38 pm
ಹಿಂಸೆಗೆ ನಲುಗಿದ ಬಾಂಗ್ಲಾ ; ಹಿಂದುಗಳನ್ನು ಗುರಿಯಾಗಿ...
23-12-25 03:28 pm
25-12-25 10:54 pm
Mangalore Correspondent
ಡಿ.27ರಂದು 9ನೇ ವರ್ಷದ ಮಂಗಳೂರು ಕಂಬಳ ; ನವ ವರ್ಷ- ನ...
24-12-25 10:30 pm
ಬಜಪೆಯಲ್ಲಿ ಕಾಂಗ್ರೆಸ್ ಓಟಕ್ಕೆ ಎಸ್ಡಿಪಿಐ ಅಡ್ಡಗಾಲು...
24-12-25 06:07 pm
ವಿದ್ಯಾರ್ಥಿಗಳ ಕುಸಿತ, ಅಸ್ತಿತ್ವ ಕಳಕೊಂಡ ಸಣ್ಣ ಕಾಲೇ...
24-12-25 12:23 pm
ಬಜಪೆ ಪಟ್ಟಣ ಪಂಚಾಯತ್ ಚುನಾವಣೆ ; ಬಿಜೆಪಿಗೆ ಸ್ಪಷ್ಟ...
24-12-25 12:02 pm
23-12-25 01:41 pm
Mangalore Correspondent
ನೀವು 24 ಸಾವಿರ ಕಟ್ಟಿದರೆ ತಿಂಗಳಿಗೆ 20 ಲಕ್ಷ, ಕೇಂದ...
22-12-25 04:00 pm
ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ; 19 ವರ್ಷದ ಗರ್ಭಿ...
22-12-25 02:18 pm
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm