ಬ್ರೇಕಿಂಗ್ ನ್ಯೂಸ್
18-01-25 10:28 am Mangalore Correspondent ಕ್ರೈಂ
ಪುತ್ತೂರು, ಜ.18: ಮಗನಿಗೆ ಗುಂಡಿಕ್ಕಲು ಹೋಗಿ ಪತ್ನಿ ಬಲಿಯಾಗಿದ್ದು ಇದರಿಂದ ನೊಂದುಕೊಂಡ ಪತಿಯೂ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯ ತಾಲೂಕಿನ ನೆಲ್ಲೂರು ನೆಕ್ರಾಜೆಯಲ್ಲಿ ನಡೆದಿದೆ.
ನೆಕ್ರಾಜೆ ಗ್ರಾಮದ ರಾಮಚಂದ್ರ ಗೌಡ(53) ಆತ್ಮಹತ್ಯೆ ಮಾಡಿಕೊಂಡರೆ, ಅವರ ಪತ್ನಿ ವಿನೋದ(45) ಗುಂಡೇಟಿಗೆ ಬಲಿಯಾಗಿದ್ದಾರೆ. ನಿನ್ನೆ ರಾತ್ರಿ 10 ಗಂಟೆ ಸುಮಾರಿಗೆ ರಾಮಚಂದ್ರ ಗೌಡ ಕುಡಿದು ಬಂದು ಮನೆಯಲ್ಲಿ ಗಲಾಟೆ ಮಾಡಿದ್ದರು. ಈ ವೇಳೆ, ಮಾತಿಗೆ ಮಾತು ಬೆಳೆದಿದ್ದು ಮಗನ ಬಗ್ಗೆ ತಂದೆ ಸಿಟ್ಟಾಗಿ ಕೋವಿ ತೆಗೆದುಕೊಂಡು ಬಂದಿದ್ದರು. ಮಗನಿಗೆ ಗುರಿಯಿಟ್ಟು ಗುಂಡು ಹಾರಿಸಲು ಯತ್ನಿಸಿದಾಗ, ಪತ್ನಿ ವಿನೋದ ತಡೆಯಲು ಬಂದಿದ್ದರು.
ಪತಿಯನ್ನು ಹಿಂದಕ್ಕೆ ದೂಡುತ್ತಲೇ ಬೆಡ್ ರೂಮಿಗೆ ತಳ್ಳಲು ಯತ್ನಿಸಿದಾಗ, ಕೋವಿ ಟ್ರಿಗ್ಗರ್ ಒತ್ತಲ್ಪಟ್ಟು ಪತ್ನಿಯ ಎದೆಗೆ ಗುಂಡು ಹೊಕ್ಕಿತ್ತು. ಇದರಿಂದ ಪತ್ನಿ ವಿನೋದ ತೀವ್ರ ಗಾಯಗೊಂಡು ನೆಲಕ್ಕುರುಳಿ ಪ್ರಾಣ ಕಳಕೊಂಡಿದ್ದಾರೆ. ಪತ್ನಿ ನೆಲಕ್ಕೆ ಬಿದ್ದಿದ್ದನ್ನು ನೋಡಿ ಭಯಗೊಂಡು ಇನ್ನು ತಾನು ಕೂಡ ಬದುಕುವುದಿಲ್ಲ ಎಂದು ಹೇಳಿ ರಬ್ಬರ್ ಗಿಡಕ್ಕೆ ಹಾಕಲು ತಂದಿದ್ದ ಕೀಟ ನಾಶಕವನ್ನು ರಾಮಚಂದ್ರ ಗೌಡ ಕುಡಿದು ಪತ್ನಿ ಬಿದ್ದ ಜಾಗದಲ್ಲೇ ಬಿದ್ದುಕೊಂಡಿದ್ದಾರೆ.
ಮಗ ಪ್ರಶಾಂತ್ ಕಣ್ಣೆದುರಲ್ಲೇ ಘಟನೆ ನಡೆದಿದ್ದು ಪತಿ- ಪತ್ನಿ ದುರಂತ ಸಾವು ಕಂಡಿದ್ದಾರೆ. ಕುಡಿತದ ಚಟ, ಮಗನ ಮೇಲಿನ ಸಿಟ್ಟು, ಕೈಗೆ ಬಂದ ಬಂದೂಕು ಮನೆಯೊಳಗೆ ಸ್ಮಶಾನ ಸೃಷ್ಟಿಸಿದೆ. ಈ ಹಿಂದೆಯೂ ರಾಮಚಂದ್ರ ಗೌಡ ಬಂದೂಕು ಹಿಡಿದು ಪತ್ನಿ, ಮಗನನ್ನು ಮನೆಯಿಂದ ಓಡಿಸಿದ್ದರು. ಆನಂತರ, ಪತ್ನಿಯ ದೂರಿನಂತೆ ಕೋವಿಯನ್ನು ಡಿಪಾಸಿಟ್ ಮಾಡಲಾಗಿತ್ತು. ಇತ್ತೀಚೆಗೆ ಆನೆ, ಇತರ ಪ್ರಾಣಿಗಳ ಉಪಟಳದಿಂದಾಗಿ ಕೋವಿಯನ್ನು ಮರಳಿ ಮನೆಗೆ ತರಿಸಿಕೊಂಡಿದ್ದರು. ಅದೇ ಕೋವಿಯನ್ನು ಕುಡಿದ ಅಮಲಿನಲ್ಲಿ ಮತ್ತೆ ಹಿಡಿದುಕೊಂಡು ಬಂದಿದ್ದರು. ಲೋಡ್ ಮಾಡಿ ಇಟ್ಟಿದ್ದರಿಂದ ಟ್ರಿಗ್ಗರ್ ಒತ್ತುತ್ತಲೇ ಪತ್ನಿಯ ಪ್ರಾಣ ಹಾರಿ ಹೋಗಿದೆ.
A man in an inebriated condition killed his wife by shooting her and later consumed acid and ended his own life, at Nellur Kemraje village in Sullia on Friday late night. The deceased are Ramachandra Gowda and his wife Vinoda Kumari.
19-02-26 09:29 pm
mangalore
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
19-02-26 11:04 pm
mangalore
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
19-02-26 10:37 pm
mangalore
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
ನೇತ್ರಾವತಿ ಸೇತುವೆ ಆವರಣ ಗೋಡೆಗೆ ಅಪ್ಪಳಿಸಿದ ಮಿನಿ ಟ...
19-02-26 05:38 pm
ಬೆಳ್ತಂಗಡಿ : ಮಕ್ಕಳು ಕ್ರಿಕೆಟ್ ಆಡುತ್ತಿದ್ದಾಗ ನಿಗೂ...
19-02-26 04:09 pm
18-02-26 09:16 pm
Mangaluru Staffer
Mangalore Shivabagh Suicide: ಕೈ ಕೊಯ್ದುಕೊಂಡು ರ...
18-02-26 07:42 pm
Hassan Murder: ಆಸ್ತಿ ವಿಚಾರಕ್ಕೆ ತಕರಾರು, ಕೋರ್ಟ್...
18-02-26 07:10 pm
ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆ, ಹಡಗುಗಳ ರಹಸ್ಯ ಮಾ...
18-02-26 01:52 pm
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm