ಬ್ರೇಕಿಂಗ್ ನ್ಯೂಸ್
18-01-25 10:28 am Mangalore Correspondent ಕ್ರೈಂ
ಪುತ್ತೂರು, ಜ.18: ಮಗನಿಗೆ ಗುಂಡಿಕ್ಕಲು ಹೋಗಿ ಪತ್ನಿ ಬಲಿಯಾಗಿದ್ದು ಇದರಿಂದ ನೊಂದುಕೊಂಡ ಪತಿಯೂ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯ ತಾಲೂಕಿನ ನೆಲ್ಲೂರು ನೆಕ್ರಾಜೆಯಲ್ಲಿ ನಡೆದಿದೆ.
ನೆಕ್ರಾಜೆ ಗ್ರಾಮದ ರಾಮಚಂದ್ರ ಗೌಡ(53) ಆತ್ಮಹತ್ಯೆ ಮಾಡಿಕೊಂಡರೆ, ಅವರ ಪತ್ನಿ ವಿನೋದ(45) ಗುಂಡೇಟಿಗೆ ಬಲಿಯಾಗಿದ್ದಾರೆ. ನಿನ್ನೆ ರಾತ್ರಿ 10 ಗಂಟೆ ಸುಮಾರಿಗೆ ರಾಮಚಂದ್ರ ಗೌಡ ಕುಡಿದು ಬಂದು ಮನೆಯಲ್ಲಿ ಗಲಾಟೆ ಮಾಡಿದ್ದರು. ಈ ವೇಳೆ, ಮಾತಿಗೆ ಮಾತು ಬೆಳೆದಿದ್ದು ಮಗನ ಬಗ್ಗೆ ತಂದೆ ಸಿಟ್ಟಾಗಿ ಕೋವಿ ತೆಗೆದುಕೊಂಡು ಬಂದಿದ್ದರು. ಮಗನಿಗೆ ಗುರಿಯಿಟ್ಟು ಗುಂಡು ಹಾರಿಸಲು ಯತ್ನಿಸಿದಾಗ, ಪತ್ನಿ ವಿನೋದ ತಡೆಯಲು ಬಂದಿದ್ದರು.
ಪತಿಯನ್ನು ಹಿಂದಕ್ಕೆ ದೂಡುತ್ತಲೇ ಬೆಡ್ ರೂಮಿಗೆ ತಳ್ಳಲು ಯತ್ನಿಸಿದಾಗ, ಕೋವಿ ಟ್ರಿಗ್ಗರ್ ಒತ್ತಲ್ಪಟ್ಟು ಪತ್ನಿಯ ಎದೆಗೆ ಗುಂಡು ಹೊಕ್ಕಿತ್ತು. ಇದರಿಂದ ಪತ್ನಿ ವಿನೋದ ತೀವ್ರ ಗಾಯಗೊಂಡು ನೆಲಕ್ಕುರುಳಿ ಪ್ರಾಣ ಕಳಕೊಂಡಿದ್ದಾರೆ. ಪತ್ನಿ ನೆಲಕ್ಕೆ ಬಿದ್ದಿದ್ದನ್ನು ನೋಡಿ ಭಯಗೊಂಡು ಇನ್ನು ತಾನು ಕೂಡ ಬದುಕುವುದಿಲ್ಲ ಎಂದು ಹೇಳಿ ರಬ್ಬರ್ ಗಿಡಕ್ಕೆ ಹಾಕಲು ತಂದಿದ್ದ ಕೀಟ ನಾಶಕವನ್ನು ರಾಮಚಂದ್ರ ಗೌಡ ಕುಡಿದು ಪತ್ನಿ ಬಿದ್ದ ಜಾಗದಲ್ಲೇ ಬಿದ್ದುಕೊಂಡಿದ್ದಾರೆ.
ಮಗ ಪ್ರಶಾಂತ್ ಕಣ್ಣೆದುರಲ್ಲೇ ಘಟನೆ ನಡೆದಿದ್ದು ಪತಿ- ಪತ್ನಿ ದುರಂತ ಸಾವು ಕಂಡಿದ್ದಾರೆ. ಕುಡಿತದ ಚಟ, ಮಗನ ಮೇಲಿನ ಸಿಟ್ಟು, ಕೈಗೆ ಬಂದ ಬಂದೂಕು ಮನೆಯೊಳಗೆ ಸ್ಮಶಾನ ಸೃಷ್ಟಿಸಿದೆ. ಈ ಹಿಂದೆಯೂ ರಾಮಚಂದ್ರ ಗೌಡ ಬಂದೂಕು ಹಿಡಿದು ಪತ್ನಿ, ಮಗನನ್ನು ಮನೆಯಿಂದ ಓಡಿಸಿದ್ದರು. ಆನಂತರ, ಪತ್ನಿಯ ದೂರಿನಂತೆ ಕೋವಿಯನ್ನು ಡಿಪಾಸಿಟ್ ಮಾಡಲಾಗಿತ್ತು. ಇತ್ತೀಚೆಗೆ ಆನೆ, ಇತರ ಪ್ರಾಣಿಗಳ ಉಪಟಳದಿಂದಾಗಿ ಕೋವಿಯನ್ನು ಮರಳಿ ಮನೆಗೆ ತರಿಸಿಕೊಂಡಿದ್ದರು. ಅದೇ ಕೋವಿಯನ್ನು ಕುಡಿದ ಅಮಲಿನಲ್ಲಿ ಮತ್ತೆ ಹಿಡಿದುಕೊಂಡು ಬಂದಿದ್ದರು. ಲೋಡ್ ಮಾಡಿ ಇಟ್ಟಿದ್ದರಿಂದ ಟ್ರಿಗ್ಗರ್ ಒತ್ತುತ್ತಲೇ ಪತ್ನಿಯ ಪ್ರಾಣ ಹಾರಿ ಹೋಗಿದೆ.
A man in an inebriated condition killed his wife by shooting her and later consumed acid and ended his own life, at Nellur Kemraje village in Sullia on Friday late night. The deceased are Ramachandra Gowda and his wife Vinoda Kumari.
23-01-26 03:21 pm
Bangalore Correspondent
ವಿಧಾನಸಭೆ ಅಧಿವೇಶನ ; ಭಾಷಣ ಅರ್ಧಕ್ಕೆ ಬಿಟ್ಟು ತೆರಳಿ...
22-01-26 10:27 pm
ಕುಕ್ಕೆ ಸುಬ್ರಹ್ಮಣ್ಯ ; 2 ತಿಂಗಳಲ್ಲಿ 14 ಕೋಟಿಗೂ ಹೆ...
22-01-26 05:20 pm
ಚಾಮರಾಜನಗರದಲ್ಲಿ ಚಿರತೆ ದಾಳಿ ; ಪಾದಯಾತ್ರೆಗೆ ಹೊರಟ್...
21-01-26 01:31 pm
ರಾಯಚೂರಿನಲ್ಲಿ ಭೀಕರ ಅಪಘಾತ ; ಬೊಲೆರೋ - ಪಿಕ್ಅ...
21-01-26 12:30 pm
23-01-26 06:44 pm
HK News Desk
ಗಾಜಾದಲ್ಲಿ ಶಾಂತಿ ಸ್ಥಾಪನೆಗೆ 35 ದೇಶಗಳ ಮಂಡಳಿ ರಚನೆ...
22-01-26 10:16 pm
ರೈಲಿನ ಶೌಚಾಲಯದಲ್ಲಿ ಎರಡು ಗಂಟೆ ಲಾಕ್ ಮಾಡಿಕೊಂಡ ಯುವ...
22-01-26 01:52 pm
ಗ್ರೀನ್ ಲ್ಯಾಂಡ್ ; ಯುರೋಪ್ ರಾಷ್ಟ್ರಗಳ ಮೇಲೆ ಸುಂಕ ಹ...
22-01-26 01:16 pm
ಆಂಧ್ರದಲ್ಲಿ ಮತ್ತೆ ಬಸ್ ಬೆಂಕಿ ; ಟೈರ್ ಸ್ಫೋಟಗೊಂಡು...
22-01-26 11:26 am
23-01-26 09:21 pm
Mangaluru Staffer
National Conference on Neuropsychiatry Held a...
23-01-26 09:08 pm
ನಾರ್ಲ ಪಡೀಲಿನಲ್ಲಿ ಒಣ ತ್ಯಾಜ್ಯ ಸಂಸ್ಕರಣಾ ಘಟಕ ನಿರ್...
23-01-26 08:22 pm
Prabhakara Joshi, Vishweshwar Bhat: ಜಾಲತಾಣದಲ್...
23-01-26 06:57 pm
Karkala Accident, Three Killed: ಕಾರ್ಕಳ ಕಂಬಳಕ್...
23-01-26 05:12 pm
23-01-26 09:36 pm
Mangaluru Staffer
ಕಾವೂರು ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ನಕಲಿ ಚಿನ್ನ...
23-01-26 03:34 pm
29 ವರ್ಷಗಳ ಹಿಂದೆ ತಾಯಿ, ಮಗನನ್ನು ಕೊಲೆಗೈದು ಚಿನ್ನಾ...
22-01-26 10:12 pm
ಸ್ವಾಮೀಜಿಗೆ ಬ್ಲ್ಯಾಕ್ಮೇಲ್ ; ಒಂದು ಕೋಟಿಗೆ ಡಿಮ್ಯಾಂ...
22-01-26 02:40 pm
ಜೂಜಾಡಿ ಸಾಲ ; ಹಣದಾಸೆಗೆ ಇಂಜೆಕ್ಷನ್ ನೀಡಿ ಸ್ವಂತ...
21-01-26 09:35 pm