ಬ್ರೇಕಿಂಗ್ ನ್ಯೂಸ್
18-01-25 10:28 am Mangalore Correspondent ಕ್ರೈಂ
ಪುತ್ತೂರು, ಜ.18: ಮಗನಿಗೆ ಗುಂಡಿಕ್ಕಲು ಹೋಗಿ ಪತ್ನಿ ಬಲಿಯಾಗಿದ್ದು ಇದರಿಂದ ನೊಂದುಕೊಂಡ ಪತಿಯೂ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯ ತಾಲೂಕಿನ ನೆಲ್ಲೂರು ನೆಕ್ರಾಜೆಯಲ್ಲಿ ನಡೆದಿದೆ.
ನೆಕ್ರಾಜೆ ಗ್ರಾಮದ ರಾಮಚಂದ್ರ ಗೌಡ(53) ಆತ್ಮಹತ್ಯೆ ಮಾಡಿಕೊಂಡರೆ, ಅವರ ಪತ್ನಿ ವಿನೋದ(45) ಗುಂಡೇಟಿಗೆ ಬಲಿಯಾಗಿದ್ದಾರೆ. ನಿನ್ನೆ ರಾತ್ರಿ 10 ಗಂಟೆ ಸುಮಾರಿಗೆ ರಾಮಚಂದ್ರ ಗೌಡ ಕುಡಿದು ಬಂದು ಮನೆಯಲ್ಲಿ ಗಲಾಟೆ ಮಾಡಿದ್ದರು. ಈ ವೇಳೆ, ಮಾತಿಗೆ ಮಾತು ಬೆಳೆದಿದ್ದು ಮಗನ ಬಗ್ಗೆ ತಂದೆ ಸಿಟ್ಟಾಗಿ ಕೋವಿ ತೆಗೆದುಕೊಂಡು ಬಂದಿದ್ದರು. ಮಗನಿಗೆ ಗುರಿಯಿಟ್ಟು ಗುಂಡು ಹಾರಿಸಲು ಯತ್ನಿಸಿದಾಗ, ಪತ್ನಿ ವಿನೋದ ತಡೆಯಲು ಬಂದಿದ್ದರು.
ಪತಿಯನ್ನು ಹಿಂದಕ್ಕೆ ದೂಡುತ್ತಲೇ ಬೆಡ್ ರೂಮಿಗೆ ತಳ್ಳಲು ಯತ್ನಿಸಿದಾಗ, ಕೋವಿ ಟ್ರಿಗ್ಗರ್ ಒತ್ತಲ್ಪಟ್ಟು ಪತ್ನಿಯ ಎದೆಗೆ ಗುಂಡು ಹೊಕ್ಕಿತ್ತು. ಇದರಿಂದ ಪತ್ನಿ ವಿನೋದ ತೀವ್ರ ಗಾಯಗೊಂಡು ನೆಲಕ್ಕುರುಳಿ ಪ್ರಾಣ ಕಳಕೊಂಡಿದ್ದಾರೆ. ಪತ್ನಿ ನೆಲಕ್ಕೆ ಬಿದ್ದಿದ್ದನ್ನು ನೋಡಿ ಭಯಗೊಂಡು ಇನ್ನು ತಾನು ಕೂಡ ಬದುಕುವುದಿಲ್ಲ ಎಂದು ಹೇಳಿ ರಬ್ಬರ್ ಗಿಡಕ್ಕೆ ಹಾಕಲು ತಂದಿದ್ದ ಕೀಟ ನಾಶಕವನ್ನು ರಾಮಚಂದ್ರ ಗೌಡ ಕುಡಿದು ಪತ್ನಿ ಬಿದ್ದ ಜಾಗದಲ್ಲೇ ಬಿದ್ದುಕೊಂಡಿದ್ದಾರೆ.
ಮಗ ಪ್ರಶಾಂತ್ ಕಣ್ಣೆದುರಲ್ಲೇ ಘಟನೆ ನಡೆದಿದ್ದು ಪತಿ- ಪತ್ನಿ ದುರಂತ ಸಾವು ಕಂಡಿದ್ದಾರೆ. ಕುಡಿತದ ಚಟ, ಮಗನ ಮೇಲಿನ ಸಿಟ್ಟು, ಕೈಗೆ ಬಂದ ಬಂದೂಕು ಮನೆಯೊಳಗೆ ಸ್ಮಶಾನ ಸೃಷ್ಟಿಸಿದೆ. ಈ ಹಿಂದೆಯೂ ರಾಮಚಂದ್ರ ಗೌಡ ಬಂದೂಕು ಹಿಡಿದು ಪತ್ನಿ, ಮಗನನ್ನು ಮನೆಯಿಂದ ಓಡಿಸಿದ್ದರು. ಆನಂತರ, ಪತ್ನಿಯ ದೂರಿನಂತೆ ಕೋವಿಯನ್ನು ಡಿಪಾಸಿಟ್ ಮಾಡಲಾಗಿತ್ತು. ಇತ್ತೀಚೆಗೆ ಆನೆ, ಇತರ ಪ್ರಾಣಿಗಳ ಉಪಟಳದಿಂದಾಗಿ ಕೋವಿಯನ್ನು ಮರಳಿ ಮನೆಗೆ ತರಿಸಿಕೊಂಡಿದ್ದರು. ಅದೇ ಕೋವಿಯನ್ನು ಕುಡಿದ ಅಮಲಿನಲ್ಲಿ ಮತ್ತೆ ಹಿಡಿದುಕೊಂಡು ಬಂದಿದ್ದರು. ಲೋಡ್ ಮಾಡಿ ಇಟ್ಟಿದ್ದರಿಂದ ಟ್ರಿಗ್ಗರ್ ಒತ್ತುತ್ತಲೇ ಪತ್ನಿಯ ಪ್ರಾಣ ಹಾರಿ ಹೋಗಿದೆ.
A man in an inebriated condition killed his wife by shooting her and later consumed acid and ended his own life, at Nellur Kemraje village in Sullia on Friday late night. The deceased are Ramachandra Gowda and his wife Vinoda Kumari.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm