ಬ್ರೇಕಿಂಗ್ ನ್ಯೂಸ್
20-01-25 05:20 pm HK News Desk ಕ್ರೈಂ
ದಾವಣಗೆರೆ, ಜ.20: ಮಂಗಳೂರು ಬ್ಯಾಂಕ್ ದರೋಡೆಗೂ ದಾವಣಗೆರೆಯಲ್ಲಿ ಮೂರು ತಿಂಗಳ ಹಿಂದೆ ನಡೆದ ದರೋಡೆಗೂ ಲಿಂಕ್ ಇದೆಯೇ ಎನ್ನುವ ಅನುಮಾನ ಬಂದಿದೆ. ನ್ಯಾಮತಿ ಪಟ್ಟಣದಲ್ಲಿ ಎಸ್ ಬಿಐ ಬ್ಯಾಂಕ್ ದರೋಡೆ ನಡೆದು ಮೂರು ತಿಂಗಳಾದರೂ, ಕಳ್ಳರ ಹೆಜ್ಜೆ ಗುರುತು ಪತ್ತೆ ಸಾಧ್ಯವಾಗದೆ ಒಟ್ಟು ಪ್ರಕರಣ ಪೊಲೀಸರಿಗೆ ಕಗ್ಗಂಟಾಗಿ ಪರಿಣಮಿಸಿದೆ.
ಅಕ್ಟೋಬರ್ 28ರಂದು ದಾವಣಗೆರೆ ಜಿಲ್ಲೆಯ ನ್ಯಾಮತಿ ಪಟ್ಟಣದಲ್ಲಿ ಎಸ್ ಬಿ ಐ ಬ್ಯಾಂಕ್ ನುಗ್ಗಿದ್ದ ಆಗಂತುಕರು ಒಟ್ಟು 509 ಗ್ರಾಹಕರಿಗೆ ಸಂಬಂಧಪಟ್ಟ 12.95 ಕೋಟಿ ರೂ. ಮೌಲ್ಯದ ಚಿನ್ನವನ್ನು ಕದ್ದೊಯ್ದಿದ್ದರು. ಗ್ಯಾಸ್ ಕಟರ್ ನಿಂದ ಬ್ಯಾಂಕ್ ಕಿಟಕಿ, ಸರಳು ಕಟ್ ಮಾಡಿ ಲಾಕರಿನಲ್ಲಿಟ್ಟಿದ್ದ ಚಿನ್ನ ಎಗರಿಸಿದ್ದರು. ಬ್ಯಾಂಕ್ ಒಳಗಿದ್ದ ಸಿಸಿಟಿವಿಯ ಡಿವಿಆರ್ ಅನ್ನೂ ಜೊತೆಗೆ ಒಯ್ದಿದ್ದರು. ಪ್ರಕರಣ ಪತ್ತೆಗಾಗಿ ಐದು ಪೊಲೀಸರ ತಂಡಗಳು ಕಾರ್ಯಾಚರಣೆ ನಡೆಸುತ್ತಿವೆ.


ಎಎಸ್ಪಿ ನೇತೃತ್ವದಲ್ಲಿ ಪೊಲೀಸ್ ತಂಡಗಳು ಮೂರು ತಿಂಗಳಿನಿಂದ ಹಗಲು ರಾತ್ರಿ ತನಿಖೆ ನಡೆಸುತ್ತಿದ್ದರೂ, ಯಾವುದೇ ಸುಳಿವು ಸಿಕ್ಕಿಲ್ಲ. ತಮಿಳುನಾಡು ಹಾಗು ಬಿಹಾರ ಮೂಲದ ಗ್ಯಾಂಗ್ ಸೇರಿ ಕಳ್ಳತನ ಮಾಡಿರುವ ಶಂಕೆಯಿದೆ. ಫೋನ್ ಬಳಸದೇ, ಸಿಸಿಟಿವಿಯಲ್ಲಿ ಸಣ್ಣ ಸುಳಿವನ್ನೂ ಬಿಟ್ಟುಕೊಡದೇ ಕಳ್ಳತನ ಮಾಡಿದ್ದರಿಂದ ಪತ್ತೆ ಕಾರ್ಯ ಸವಾಲೆನಿಸಿದೆ.
ನ್ಯಾಮತಿ ಪಟ್ಟಣದಲ್ಲಿ ಪೊಲೀಸರು ಸಾವಿರಾರು ಮೊಬೈಲ್ ಗಳ ಸಿಡಿಆರ್ ಮತ್ತು ಸಿಸಿಟಿವಿ ದೃಶ್ಯಗಳನ್ನು ಚೆಕ್ ಮಾಡಿದ್ದಾರೆ. ಆದರೂ ಪೊಲೀಸರಿಗೆ ಆರೋಪಿಗಳ ಮಾಹಿತಿ ಸಂಗ್ರಹ ಸಾಧ್ಯವಾಗಿಲ್ಲ. ಸಾಲ ಇಟ್ಟು ಚಿನ್ನವನ್ನೇ ಕಳಕೊಂಡಿರುವ ಮಂದಿ ದಿನವೂ ಗೋಳಾಡುತ್ತಿದ್ದಾರೆ.
ಮಂಗಳೂರಿನಲ್ಲಿಯೂ ಇದೇ ರೀತಿ ಬ್ಯಾಂಕ್ ದರೋಡೆಯಾಗಿದ್ದು ಚಿನ್ನಾಭರಣವನ್ನು ಹೊತ್ತುಕೊಂಡು ಪರಾರಿಯಾಗಿದ್ದಾರೆ. ನಾಲ್ಕು ದಿನ ಕಳೆದರೂ ಆರೋಪಿಗಳ ಸುಳಿವು ಪತ್ತೆ ಮಾಡಲು ಸಾಧ್ಯವಾಗಿಲ್ಲ.
Bank robbery link between Davangere and Mangalore Kotekar. Davangere sbi bank robbery was upto Rs 12.95 crore and still on breakthrough in the case so far. Similarly even Mangalore Kotekar case has got no leads so far.
28-07-26 08:12 pm
HK News Staffer
ಶಿಕ್ಷಕರ ಕೊರತೆ ಇರುವ ಸರ್ಕಾರಿ ಶಾಲೆಗಳನ್ನು ಖಾಸಗಿ ಶ...
25-07-26 03:06 pm
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
28-07-26 11:56 am
HK News Staffer
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
28-07-26 10:28 pm
HK News Desk
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
ಜಾಲತಾಣದಲ್ಲಿ ಜೆನ್ ಜೀಗಳ ಅಬ್ಬರ ; ಕಾಕ್ರೋಚ್ ಬೆನ್ನಲ...
27-07-26 09:48 pm
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
28-07-26 08:11 pm
HK News Staffer
Lavanya Murder Case, News: ಲಾವಣ್ಯ ಹತ್ಯೆ ಪ್ರಕರ...
28-07-26 07:07 pm
ವಿಚ್ಛೇದಿತ ಮಹಿಳೆಗೆ ಫೇಸ್ಬುಕ್ನಲ್ಲಿ ಪ್ರೀತಿಯ ನಾಟ...
28-07-26 12:28 pm
12 ವರ್ಷಗಳ ಹಿಂದಿನ ಗಂಗಾಧರ ಪಾಂಗಾಳ ಕೊಲೆ ಪ್ರಕರಣ ;...
27-07-26 11:07 pm
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm