ಬ್ರೇಕಿಂಗ್ ನ್ಯೂಸ್
20-01-25 10:18 pm HK News Desk ಕ್ರೈಂ
ಹುಬ್ಬಳ್ಳಿ, ಜ 20: ಜ.16 ರಂದು ಬೀದರ್ನನಲ್ಲಿ ಎಟಿಎಂಗೆ ಹಣ ತುಂಬಲು ಬಂದಿದ್ದ ಸಿಬ್ಬಂದಿ ಮೇಲೆ ಗುಂಡು ಹಾರಿಸಿ ಹಣ ದರೋಡೆ ಮಾಡಿದ ಪ್ರಕರಣದ ಬೆನ್ನಲ್ಲೇ ಮಂಗಳೂರಿನಲ್ಲಿ ಜನವರಿ 17 ರಂದು ಹಾಡ ಹಗಲೇ ಬ್ಯಾಂಕ್ ಸಿಬ್ಬಂದಿಗೆ ಬಂದೂಕು ತೋರಿಸಿದ ಆಗಂತುಕರು ಸುಮಾರು 12 ಕೋಟಿ ಹಣ ದರೋಡೆ ಮಾಡಿಕೊಂಡು ಪರಾರಿಯಾಗಿದ್ದಾರೆ. ಇನ್ನು ಮೈಸೂರಿನಲ್ಲೂ ಇಂದು ಉದ್ಯೋಗಿ ಒಬ್ಬರ ಕಾರನ್ನು ಹಾಡಹಗಲೇ ಅಡ್ಡಗಟ್ಟಿ ಹಣ ಲೂಟಿ ಮಾಡಿ ಕಾರ್ ಸಮೇತ ಎಸ್ಕೇಪ್ ಆಗಿದ್ದಾರೆ.
ಈ ಮೂವರು ಘಟನೆಗಳು ಮಾಸುವ ಮುನ್ನವೇ ಹುಬ್ಬಳ್ಳಿಯ ಬ್ಯಾಂಕಿನಲ್ಲಿ ದರೋಡೆಗೆ ವಿಫಲ ಯತ್ನ ನಡೆಸಿರುವ ಘಟನೆ ಜರುಗಿದೆ.
ಕೆನರಾ ಬ್ಯಾಂಕಿಗೆ ಕನ್ನ ಹಾಕಲು ವಿಫಲ ಯತ್ನ;
ಸದ್ಯ, ಹುಬ್ಬಳ್ಳಿಯಲ್ಲೂ ಬ್ಯಾಂಕ್ ದರೋಡೆಗೆ ಯತ್ನಿಸಿದ ಖದೀಮರು, ನವನಗರದಲ್ಲಿರುವ ಕೆನರಾ ಬ್ಯಾಂಕ್ನಲ್ಲಿ ದರೋಡೆಗೆ ಯತ್ನ ನಡೆಸಿದ್ದಾರೆ. ನಿನ್ನೆ ರಾತ್ರಿ (ಭಾನುವಾರ) ಬ್ಯಾಂಕ್ ಗೆ ಕನ್ನ ಹಾಕಲು ಖದೀಮರು ಯತ್ನ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ. ನವನಗರದ ಎಪಿಎಂಸಿ ಆವರಣದಲ್ಲಿರುವ ಕೆನರಾ ಬ್ಯಾಂಕ್ ಶಾಖೆಯಲ್ಲಿ ಕಳ್ಳತನಕ್ಕೆ ಯತ್ನ ನಡೆಸಿದ್ದಾರೆ. ಬ್ಯಾಂಕ್ ನ ಶೆಲ್ಟರ್ ಬೀಗ ಮುರಿದು ಕಳ್ಳತನಕ್ಕೆ ಯತ್ನಿಸಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ
ಸಾರ್ವಜನಿಕರಲ್ಲಿ ಅನುಮಾನ ಮೂಡಿಸುತ್ತಿರುವ ಸಿಬ್ಬಂದಿ ನಡೆ;
ನವನಗರದಲ್ಲಿರುವ ಎಪಿಎಂಸಿ ಮಾರುಕಟ್ಟೆಯಲ್ಲಿರುವ ಕೆನರಾ ಬ್ಯಾಂಕಿನಲ್ಲಿ ದೊಡ್ಡ ಮಟ್ಟದ ದರೋಡೆಗೆ ಪ್ರಯತ್ನ ನಡೆಸಿದರೂ ಕೂಡ ಬ್ಯಾಂಕಿನ ಸಿಬ್ಬಂದಿ ಇದುವರೆಗೂ ಯಾವುದೇ ದೂರು ನೀಡಿಲ್ಲ. ಈ ಘಟನೆಯು ಸಾರ್ವಜನಿಕರಲ್ಲಿ ಅಚ್ಚರಿ ಮೂಡಿಸುವುದರ ಜೊತೆಗೆ, ಬ್ಯಾಂಕ್ ಸಿಬ್ಬಂಧಿ ನಡೆಗೆ ಸಾರ್ವಜನಿಕರು ಅನುಮಾನ ವ್ಯಕ್ತಪಡಿಸುತ್ತಿದ್ದಾರೆ.
ದೂರು ನೀಡದ ಮ್ಯಾನೇಜರ್;
ಇನ್ನೊಂದೆಡೆ ಬ್ಯಾಂಕಿನ ಬಾಗಿಲು ಮುರಿದಿದ್ದು, ಗೇಟ್ ಮತ್ತು ಕೀಗೆ ಬ್ಯಾಂಕಿನ ಸಿಬ್ಬಂದಿ ವೆಲ್ಡಿಂಗ್ ಮಾಡಿಸಿದ್ದಾರೆ. ಈ ಕುರಿತು ಬ್ಯಾಂಕ್ ಮ್ಯಾನೇಜರ್ ಬ್ರಹ್ಮಾನಂದ್ ಅವರು ಯಾವುದೇ ಮಾಹಿತಿ ಹಂಚಿಕೊಂಡಿಲ್ಲ. ಮ್ಯಾನೇಜರ್ ದೂರು ನೀಡದೆ ಹಾರಿಕೆ ಉತ್ತರ ನೀಡ್ತಾ ಇದ್ದಾರೆ. ಬ್ಯಾಂಕ್ ಸಿಬ್ಬಂದಿ ಪ್ರಕರಣ ಮುಚ್ಚಿ ಹಾಕಲು ಪ್ರಯತ್ನಿಸುತ್ತಿದ್ದಾರಾ ಎಂಬ ಅನುಮಾನ ಸಾರ್ವಜನಿಕರಲ್ಲಿ ವ್ಯಕ್ತವಾಗುತ್ತಿದೆ.
Attempt to robbery at Hubballi canara bank after robbery at Bidar and Mangalore, case filed.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm