ಬ್ರೇಕಿಂಗ್ ನ್ಯೂಸ್
20-01-25 10:18 pm HK News Desk ಕ್ರೈಂ
ಹುಬ್ಬಳ್ಳಿ, ಜ 20: ಜ.16 ರಂದು ಬೀದರ್ನನಲ್ಲಿ ಎಟಿಎಂಗೆ ಹಣ ತುಂಬಲು ಬಂದಿದ್ದ ಸಿಬ್ಬಂದಿ ಮೇಲೆ ಗುಂಡು ಹಾರಿಸಿ ಹಣ ದರೋಡೆ ಮಾಡಿದ ಪ್ರಕರಣದ ಬೆನ್ನಲ್ಲೇ ಮಂಗಳೂರಿನಲ್ಲಿ ಜನವರಿ 17 ರಂದು ಹಾಡ ಹಗಲೇ ಬ್ಯಾಂಕ್ ಸಿಬ್ಬಂದಿಗೆ ಬಂದೂಕು ತೋರಿಸಿದ ಆಗಂತುಕರು ಸುಮಾರು 12 ಕೋಟಿ ಹಣ ದರೋಡೆ ಮಾಡಿಕೊಂಡು ಪರಾರಿಯಾಗಿದ್ದಾರೆ. ಇನ್ನು ಮೈಸೂರಿನಲ್ಲೂ ಇಂದು ಉದ್ಯೋಗಿ ಒಬ್ಬರ ಕಾರನ್ನು ಹಾಡಹಗಲೇ ಅಡ್ಡಗಟ್ಟಿ ಹಣ ಲೂಟಿ ಮಾಡಿ ಕಾರ್ ಸಮೇತ ಎಸ್ಕೇಪ್ ಆಗಿದ್ದಾರೆ.
ಈ ಮೂವರು ಘಟನೆಗಳು ಮಾಸುವ ಮುನ್ನವೇ ಹುಬ್ಬಳ್ಳಿಯ ಬ್ಯಾಂಕಿನಲ್ಲಿ ದರೋಡೆಗೆ ವಿಫಲ ಯತ್ನ ನಡೆಸಿರುವ ಘಟನೆ ಜರುಗಿದೆ.
ಕೆನರಾ ಬ್ಯಾಂಕಿಗೆ ಕನ್ನ ಹಾಕಲು ವಿಫಲ ಯತ್ನ;
ಸದ್ಯ, ಹುಬ್ಬಳ್ಳಿಯಲ್ಲೂ ಬ್ಯಾಂಕ್ ದರೋಡೆಗೆ ಯತ್ನಿಸಿದ ಖದೀಮರು, ನವನಗರದಲ್ಲಿರುವ ಕೆನರಾ ಬ್ಯಾಂಕ್ನಲ್ಲಿ ದರೋಡೆಗೆ ಯತ್ನ ನಡೆಸಿದ್ದಾರೆ. ನಿನ್ನೆ ರಾತ್ರಿ (ಭಾನುವಾರ) ಬ್ಯಾಂಕ್ ಗೆ ಕನ್ನ ಹಾಕಲು ಖದೀಮರು ಯತ್ನ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ. ನವನಗರದ ಎಪಿಎಂಸಿ ಆವರಣದಲ್ಲಿರುವ ಕೆನರಾ ಬ್ಯಾಂಕ್ ಶಾಖೆಯಲ್ಲಿ ಕಳ್ಳತನಕ್ಕೆ ಯತ್ನ ನಡೆಸಿದ್ದಾರೆ. ಬ್ಯಾಂಕ್ ನ ಶೆಲ್ಟರ್ ಬೀಗ ಮುರಿದು ಕಳ್ಳತನಕ್ಕೆ ಯತ್ನಿಸಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ
ಸಾರ್ವಜನಿಕರಲ್ಲಿ ಅನುಮಾನ ಮೂಡಿಸುತ್ತಿರುವ ಸಿಬ್ಬಂದಿ ನಡೆ;
ನವನಗರದಲ್ಲಿರುವ ಎಪಿಎಂಸಿ ಮಾರುಕಟ್ಟೆಯಲ್ಲಿರುವ ಕೆನರಾ ಬ್ಯಾಂಕಿನಲ್ಲಿ ದೊಡ್ಡ ಮಟ್ಟದ ದರೋಡೆಗೆ ಪ್ರಯತ್ನ ನಡೆಸಿದರೂ ಕೂಡ ಬ್ಯಾಂಕಿನ ಸಿಬ್ಬಂದಿ ಇದುವರೆಗೂ ಯಾವುದೇ ದೂರು ನೀಡಿಲ್ಲ. ಈ ಘಟನೆಯು ಸಾರ್ವಜನಿಕರಲ್ಲಿ ಅಚ್ಚರಿ ಮೂಡಿಸುವುದರ ಜೊತೆಗೆ, ಬ್ಯಾಂಕ್ ಸಿಬ್ಬಂಧಿ ನಡೆಗೆ ಸಾರ್ವಜನಿಕರು ಅನುಮಾನ ವ್ಯಕ್ತಪಡಿಸುತ್ತಿದ್ದಾರೆ.
ದೂರು ನೀಡದ ಮ್ಯಾನೇಜರ್;
ಇನ್ನೊಂದೆಡೆ ಬ್ಯಾಂಕಿನ ಬಾಗಿಲು ಮುರಿದಿದ್ದು, ಗೇಟ್ ಮತ್ತು ಕೀಗೆ ಬ್ಯಾಂಕಿನ ಸಿಬ್ಬಂದಿ ವೆಲ್ಡಿಂಗ್ ಮಾಡಿಸಿದ್ದಾರೆ. ಈ ಕುರಿತು ಬ್ಯಾಂಕ್ ಮ್ಯಾನೇಜರ್ ಬ್ರಹ್ಮಾನಂದ್ ಅವರು ಯಾವುದೇ ಮಾಹಿತಿ ಹಂಚಿಕೊಂಡಿಲ್ಲ. ಮ್ಯಾನೇಜರ್ ದೂರು ನೀಡದೆ ಹಾರಿಕೆ ಉತ್ತರ ನೀಡ್ತಾ ಇದ್ದಾರೆ. ಬ್ಯಾಂಕ್ ಸಿಬ್ಬಂದಿ ಪ್ರಕರಣ ಮುಚ್ಚಿ ಹಾಕಲು ಪ್ರಯತ್ನಿಸುತ್ತಿದ್ದಾರಾ ಎಂಬ ಅನುಮಾನ ಸಾರ್ವಜನಿಕರಲ್ಲಿ ವ್ಯಕ್ತವಾಗುತ್ತಿದೆ.
Attempt to robbery at Hubballi canara bank after robbery at Bidar and Mangalore, case filed.
01-01-26 06:21 pm
Bangalore Correspondent
ಜನವರಿ 15ರ ನಂತರ ಸಂಪುಟ ವಿಸ್ತರಣೆ ಆಗಲಿದೆ, ನನಗೂ ಮಂ...
01-01-26 05:18 pm
ಬೆಂಗಳೂರಿನಿಂದ ಕನ್ಯಾಕುಮಾರಿಗೆ ಸೈಕಲ್ ಸವಾರಿ ; 70ರ...
01-01-26 03:05 pm
ಕೋಗಿಲು ಬಡಾವಣೆ ವಿವಾದ ; ಬಿಜೆಪಿಯಿಂದ ಸತ್ಯಶೋಧನಾ ಸಮ...
31-12-25 10:57 pm
ಕೋಗಿಲು ಬಡಾವಣೆ ವಿವಾದ ನಡುವೆಯೇ ಕೇರಳ ಸಿಎಂ ಪಿಣರಾಯಿ...
31-12-25 02:35 pm
01-01-26 09:34 pm
HK News Desk
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
01-01-26 09:43 am
Mangalore Correspondent
ಧರ್ಮಸ್ಥಳ ಪ್ರಕರಣದಲ್ಲಿ ಕ್ಷೇತ್ರದ ಪರ ಬೆಳ್ತಂಗಡಿ ಕೋ...
31-12-25 10:57 pm
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
01-01-26 08:25 pm
Mangalore Correspondent
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm