ಬ್ರೇಕಿಂಗ್ ನ್ಯೂಸ್
20-01-25 10:18 pm HK News Desk ಕ್ರೈಂ
ಹುಬ್ಬಳ್ಳಿ, ಜ 20: ಜ.16 ರಂದು ಬೀದರ್ನನಲ್ಲಿ ಎಟಿಎಂಗೆ ಹಣ ತುಂಬಲು ಬಂದಿದ್ದ ಸಿಬ್ಬಂದಿ ಮೇಲೆ ಗುಂಡು ಹಾರಿಸಿ ಹಣ ದರೋಡೆ ಮಾಡಿದ ಪ್ರಕರಣದ ಬೆನ್ನಲ್ಲೇ ಮಂಗಳೂರಿನಲ್ಲಿ ಜನವರಿ 17 ರಂದು ಹಾಡ ಹಗಲೇ ಬ್ಯಾಂಕ್ ಸಿಬ್ಬಂದಿಗೆ ಬಂದೂಕು ತೋರಿಸಿದ ಆಗಂತುಕರು ಸುಮಾರು 12 ಕೋಟಿ ಹಣ ದರೋಡೆ ಮಾಡಿಕೊಂಡು ಪರಾರಿಯಾಗಿದ್ದಾರೆ. ಇನ್ನು ಮೈಸೂರಿನಲ್ಲೂ ಇಂದು ಉದ್ಯೋಗಿ ಒಬ್ಬರ ಕಾರನ್ನು ಹಾಡಹಗಲೇ ಅಡ್ಡಗಟ್ಟಿ ಹಣ ಲೂಟಿ ಮಾಡಿ ಕಾರ್ ಸಮೇತ ಎಸ್ಕೇಪ್ ಆಗಿದ್ದಾರೆ.
ಈ ಮೂವರು ಘಟನೆಗಳು ಮಾಸುವ ಮುನ್ನವೇ ಹುಬ್ಬಳ್ಳಿಯ ಬ್ಯಾಂಕಿನಲ್ಲಿ ದರೋಡೆಗೆ ವಿಫಲ ಯತ್ನ ನಡೆಸಿರುವ ಘಟನೆ ಜರುಗಿದೆ.
ಕೆನರಾ ಬ್ಯಾಂಕಿಗೆ ಕನ್ನ ಹಾಕಲು ವಿಫಲ ಯತ್ನ;
ಸದ್ಯ, ಹುಬ್ಬಳ್ಳಿಯಲ್ಲೂ ಬ್ಯಾಂಕ್ ದರೋಡೆಗೆ ಯತ್ನಿಸಿದ ಖದೀಮರು, ನವನಗರದಲ್ಲಿರುವ ಕೆನರಾ ಬ್ಯಾಂಕ್ನಲ್ಲಿ ದರೋಡೆಗೆ ಯತ್ನ ನಡೆಸಿದ್ದಾರೆ. ನಿನ್ನೆ ರಾತ್ರಿ (ಭಾನುವಾರ) ಬ್ಯಾಂಕ್ ಗೆ ಕನ್ನ ಹಾಕಲು ಖದೀಮರು ಯತ್ನ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ. ನವನಗರದ ಎಪಿಎಂಸಿ ಆವರಣದಲ್ಲಿರುವ ಕೆನರಾ ಬ್ಯಾಂಕ್ ಶಾಖೆಯಲ್ಲಿ ಕಳ್ಳತನಕ್ಕೆ ಯತ್ನ ನಡೆಸಿದ್ದಾರೆ. ಬ್ಯಾಂಕ್ ನ ಶೆಲ್ಟರ್ ಬೀಗ ಮುರಿದು ಕಳ್ಳತನಕ್ಕೆ ಯತ್ನಿಸಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ
ಸಾರ್ವಜನಿಕರಲ್ಲಿ ಅನುಮಾನ ಮೂಡಿಸುತ್ತಿರುವ ಸಿಬ್ಬಂದಿ ನಡೆ;
ನವನಗರದಲ್ಲಿರುವ ಎಪಿಎಂಸಿ ಮಾರುಕಟ್ಟೆಯಲ್ಲಿರುವ ಕೆನರಾ ಬ್ಯಾಂಕಿನಲ್ಲಿ ದೊಡ್ಡ ಮಟ್ಟದ ದರೋಡೆಗೆ ಪ್ರಯತ್ನ ನಡೆಸಿದರೂ ಕೂಡ ಬ್ಯಾಂಕಿನ ಸಿಬ್ಬಂದಿ ಇದುವರೆಗೂ ಯಾವುದೇ ದೂರು ನೀಡಿಲ್ಲ. ಈ ಘಟನೆಯು ಸಾರ್ವಜನಿಕರಲ್ಲಿ ಅಚ್ಚರಿ ಮೂಡಿಸುವುದರ ಜೊತೆಗೆ, ಬ್ಯಾಂಕ್ ಸಿಬ್ಬಂಧಿ ನಡೆಗೆ ಸಾರ್ವಜನಿಕರು ಅನುಮಾನ ವ್ಯಕ್ತಪಡಿಸುತ್ತಿದ್ದಾರೆ.
ದೂರು ನೀಡದ ಮ್ಯಾನೇಜರ್;
ಇನ್ನೊಂದೆಡೆ ಬ್ಯಾಂಕಿನ ಬಾಗಿಲು ಮುರಿದಿದ್ದು, ಗೇಟ್ ಮತ್ತು ಕೀಗೆ ಬ್ಯಾಂಕಿನ ಸಿಬ್ಬಂದಿ ವೆಲ್ಡಿಂಗ್ ಮಾಡಿಸಿದ್ದಾರೆ. ಈ ಕುರಿತು ಬ್ಯಾಂಕ್ ಮ್ಯಾನೇಜರ್ ಬ್ರಹ್ಮಾನಂದ್ ಅವರು ಯಾವುದೇ ಮಾಹಿತಿ ಹಂಚಿಕೊಂಡಿಲ್ಲ. ಮ್ಯಾನೇಜರ್ ದೂರು ನೀಡದೆ ಹಾರಿಕೆ ಉತ್ತರ ನೀಡ್ತಾ ಇದ್ದಾರೆ. ಬ್ಯಾಂಕ್ ಸಿಬ್ಬಂದಿ ಪ್ರಕರಣ ಮುಚ್ಚಿ ಹಾಕಲು ಪ್ರಯತ್ನಿಸುತ್ತಿದ್ದಾರಾ ಎಂಬ ಅನುಮಾನ ಸಾರ್ವಜನಿಕರಲ್ಲಿ ವ್ಯಕ್ತವಾಗುತ್ತಿದೆ.
Attempt to robbery at Hubballi canara bank after robbery at Bidar and Mangalore, case filed.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
09-09-25 11:09 pm
HK News Desk
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
09-09-25 10:47 pm
Mangalore Correspondent
Mangalore Accident, Kulur, NHAI: ಕುಳೂರು ರಸ್ತೆ...
09-09-25 08:01 pm
YouTuber Munaf, SIT, Dharmasthala Case: ಎಸ್ಐಟ...
09-09-25 05:59 pm
Mangalore, NHAI, Padmaraj: ಇನ್ನೆಷ್ಟು ಜೀವ ಬಲಿಯ...
09-09-25 05:14 pm
MLA Vedavyas Kamath, Mangalore, Yakshangana:...
09-09-25 04:47 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm