ಬ್ರೇಕಿಂಗ್ ನ್ಯೂಸ್
20-01-25 10:18 pm HK News Desk ಕ್ರೈಂ
ಹುಬ್ಬಳ್ಳಿ, ಜ 20: ಜ.16 ರಂದು ಬೀದರ್ನನಲ್ಲಿ ಎಟಿಎಂಗೆ ಹಣ ತುಂಬಲು ಬಂದಿದ್ದ ಸಿಬ್ಬಂದಿ ಮೇಲೆ ಗುಂಡು ಹಾರಿಸಿ ಹಣ ದರೋಡೆ ಮಾಡಿದ ಪ್ರಕರಣದ ಬೆನ್ನಲ್ಲೇ ಮಂಗಳೂರಿನಲ್ಲಿ ಜನವರಿ 17 ರಂದು ಹಾಡ ಹಗಲೇ ಬ್ಯಾಂಕ್ ಸಿಬ್ಬಂದಿಗೆ ಬಂದೂಕು ತೋರಿಸಿದ ಆಗಂತುಕರು ಸುಮಾರು 12 ಕೋಟಿ ಹಣ ದರೋಡೆ ಮಾಡಿಕೊಂಡು ಪರಾರಿಯಾಗಿದ್ದಾರೆ. ಇನ್ನು ಮೈಸೂರಿನಲ್ಲೂ ಇಂದು ಉದ್ಯೋಗಿ ಒಬ್ಬರ ಕಾರನ್ನು ಹಾಡಹಗಲೇ ಅಡ್ಡಗಟ್ಟಿ ಹಣ ಲೂಟಿ ಮಾಡಿ ಕಾರ್ ಸಮೇತ ಎಸ್ಕೇಪ್ ಆಗಿದ್ದಾರೆ.
ಈ ಮೂವರು ಘಟನೆಗಳು ಮಾಸುವ ಮುನ್ನವೇ ಹುಬ್ಬಳ್ಳಿಯ ಬ್ಯಾಂಕಿನಲ್ಲಿ ದರೋಡೆಗೆ ವಿಫಲ ಯತ್ನ ನಡೆಸಿರುವ ಘಟನೆ ಜರುಗಿದೆ.
ಕೆನರಾ ಬ್ಯಾಂಕಿಗೆ ಕನ್ನ ಹಾಕಲು ವಿಫಲ ಯತ್ನ;
ಸದ್ಯ, ಹುಬ್ಬಳ್ಳಿಯಲ್ಲೂ ಬ್ಯಾಂಕ್ ದರೋಡೆಗೆ ಯತ್ನಿಸಿದ ಖದೀಮರು, ನವನಗರದಲ್ಲಿರುವ ಕೆನರಾ ಬ್ಯಾಂಕ್ನಲ್ಲಿ ದರೋಡೆಗೆ ಯತ್ನ ನಡೆಸಿದ್ದಾರೆ. ನಿನ್ನೆ ರಾತ್ರಿ (ಭಾನುವಾರ) ಬ್ಯಾಂಕ್ ಗೆ ಕನ್ನ ಹಾಕಲು ಖದೀಮರು ಯತ್ನ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ. ನವನಗರದ ಎಪಿಎಂಸಿ ಆವರಣದಲ್ಲಿರುವ ಕೆನರಾ ಬ್ಯಾಂಕ್ ಶಾಖೆಯಲ್ಲಿ ಕಳ್ಳತನಕ್ಕೆ ಯತ್ನ ನಡೆಸಿದ್ದಾರೆ. ಬ್ಯಾಂಕ್ ನ ಶೆಲ್ಟರ್ ಬೀಗ ಮುರಿದು ಕಳ್ಳತನಕ್ಕೆ ಯತ್ನಿಸಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ
ಸಾರ್ವಜನಿಕರಲ್ಲಿ ಅನುಮಾನ ಮೂಡಿಸುತ್ತಿರುವ ಸಿಬ್ಬಂದಿ ನಡೆ;
ನವನಗರದಲ್ಲಿರುವ ಎಪಿಎಂಸಿ ಮಾರುಕಟ್ಟೆಯಲ್ಲಿರುವ ಕೆನರಾ ಬ್ಯಾಂಕಿನಲ್ಲಿ ದೊಡ್ಡ ಮಟ್ಟದ ದರೋಡೆಗೆ ಪ್ರಯತ್ನ ನಡೆಸಿದರೂ ಕೂಡ ಬ್ಯಾಂಕಿನ ಸಿಬ್ಬಂದಿ ಇದುವರೆಗೂ ಯಾವುದೇ ದೂರು ನೀಡಿಲ್ಲ. ಈ ಘಟನೆಯು ಸಾರ್ವಜನಿಕರಲ್ಲಿ ಅಚ್ಚರಿ ಮೂಡಿಸುವುದರ ಜೊತೆಗೆ, ಬ್ಯಾಂಕ್ ಸಿಬ್ಬಂಧಿ ನಡೆಗೆ ಸಾರ್ವಜನಿಕರು ಅನುಮಾನ ವ್ಯಕ್ತಪಡಿಸುತ್ತಿದ್ದಾರೆ.
ದೂರು ನೀಡದ ಮ್ಯಾನೇಜರ್;
ಇನ್ನೊಂದೆಡೆ ಬ್ಯಾಂಕಿನ ಬಾಗಿಲು ಮುರಿದಿದ್ದು, ಗೇಟ್ ಮತ್ತು ಕೀಗೆ ಬ್ಯಾಂಕಿನ ಸಿಬ್ಬಂದಿ ವೆಲ್ಡಿಂಗ್ ಮಾಡಿಸಿದ್ದಾರೆ. ಈ ಕುರಿತು ಬ್ಯಾಂಕ್ ಮ್ಯಾನೇಜರ್ ಬ್ರಹ್ಮಾನಂದ್ ಅವರು ಯಾವುದೇ ಮಾಹಿತಿ ಹಂಚಿಕೊಂಡಿಲ್ಲ. ಮ್ಯಾನೇಜರ್ ದೂರು ನೀಡದೆ ಹಾರಿಕೆ ಉತ್ತರ ನೀಡ್ತಾ ಇದ್ದಾರೆ. ಬ್ಯಾಂಕ್ ಸಿಬ್ಬಂದಿ ಪ್ರಕರಣ ಮುಚ್ಚಿ ಹಾಕಲು ಪ್ರಯತ್ನಿಸುತ್ತಿದ್ದಾರಾ ಎಂಬ ಅನುಮಾನ ಸಾರ್ವಜನಿಕರಲ್ಲಿ ವ್ಯಕ್ತವಾಗುತ್ತಿದೆ.
Attempt to robbery at Hubballi canara bank after robbery at Bidar and Mangalore, case filed.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm