ಬ್ರೇಕಿಂಗ್ ನ್ಯೂಸ್
20-01-25 10:18 pm HK News Desk ಕ್ರೈಂ
ಹುಬ್ಬಳ್ಳಿ, ಜ 20: ಜ.16 ರಂದು ಬೀದರ್ನನಲ್ಲಿ ಎಟಿಎಂಗೆ ಹಣ ತುಂಬಲು ಬಂದಿದ್ದ ಸಿಬ್ಬಂದಿ ಮೇಲೆ ಗುಂಡು ಹಾರಿಸಿ ಹಣ ದರೋಡೆ ಮಾಡಿದ ಪ್ರಕರಣದ ಬೆನ್ನಲ್ಲೇ ಮಂಗಳೂರಿನಲ್ಲಿ ಜನವರಿ 17 ರಂದು ಹಾಡ ಹಗಲೇ ಬ್ಯಾಂಕ್ ಸಿಬ್ಬಂದಿಗೆ ಬಂದೂಕು ತೋರಿಸಿದ ಆಗಂತುಕರು ಸುಮಾರು 12 ಕೋಟಿ ಹಣ ದರೋಡೆ ಮಾಡಿಕೊಂಡು ಪರಾರಿಯಾಗಿದ್ದಾರೆ. ಇನ್ನು ಮೈಸೂರಿನಲ್ಲೂ ಇಂದು ಉದ್ಯೋಗಿ ಒಬ್ಬರ ಕಾರನ್ನು ಹಾಡಹಗಲೇ ಅಡ್ಡಗಟ್ಟಿ ಹಣ ಲೂಟಿ ಮಾಡಿ ಕಾರ್ ಸಮೇತ ಎಸ್ಕೇಪ್ ಆಗಿದ್ದಾರೆ.
ಈ ಮೂವರು ಘಟನೆಗಳು ಮಾಸುವ ಮುನ್ನವೇ ಹುಬ್ಬಳ್ಳಿಯ ಬ್ಯಾಂಕಿನಲ್ಲಿ ದರೋಡೆಗೆ ವಿಫಲ ಯತ್ನ ನಡೆಸಿರುವ ಘಟನೆ ಜರುಗಿದೆ.
ಕೆನರಾ ಬ್ಯಾಂಕಿಗೆ ಕನ್ನ ಹಾಕಲು ವಿಫಲ ಯತ್ನ;
ಸದ್ಯ, ಹುಬ್ಬಳ್ಳಿಯಲ್ಲೂ ಬ್ಯಾಂಕ್ ದರೋಡೆಗೆ ಯತ್ನಿಸಿದ ಖದೀಮರು, ನವನಗರದಲ್ಲಿರುವ ಕೆನರಾ ಬ್ಯಾಂಕ್ನಲ್ಲಿ ದರೋಡೆಗೆ ಯತ್ನ ನಡೆಸಿದ್ದಾರೆ. ನಿನ್ನೆ ರಾತ್ರಿ (ಭಾನುವಾರ) ಬ್ಯಾಂಕ್ ಗೆ ಕನ್ನ ಹಾಕಲು ಖದೀಮರು ಯತ್ನ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ. ನವನಗರದ ಎಪಿಎಂಸಿ ಆವರಣದಲ್ಲಿರುವ ಕೆನರಾ ಬ್ಯಾಂಕ್ ಶಾಖೆಯಲ್ಲಿ ಕಳ್ಳತನಕ್ಕೆ ಯತ್ನ ನಡೆಸಿದ್ದಾರೆ. ಬ್ಯಾಂಕ್ ನ ಶೆಲ್ಟರ್ ಬೀಗ ಮುರಿದು ಕಳ್ಳತನಕ್ಕೆ ಯತ್ನಿಸಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ
ಸಾರ್ವಜನಿಕರಲ್ಲಿ ಅನುಮಾನ ಮೂಡಿಸುತ್ತಿರುವ ಸಿಬ್ಬಂದಿ ನಡೆ;
ನವನಗರದಲ್ಲಿರುವ ಎಪಿಎಂಸಿ ಮಾರುಕಟ್ಟೆಯಲ್ಲಿರುವ ಕೆನರಾ ಬ್ಯಾಂಕಿನಲ್ಲಿ ದೊಡ್ಡ ಮಟ್ಟದ ದರೋಡೆಗೆ ಪ್ರಯತ್ನ ನಡೆಸಿದರೂ ಕೂಡ ಬ್ಯಾಂಕಿನ ಸಿಬ್ಬಂದಿ ಇದುವರೆಗೂ ಯಾವುದೇ ದೂರು ನೀಡಿಲ್ಲ. ಈ ಘಟನೆಯು ಸಾರ್ವಜನಿಕರಲ್ಲಿ ಅಚ್ಚರಿ ಮೂಡಿಸುವುದರ ಜೊತೆಗೆ, ಬ್ಯಾಂಕ್ ಸಿಬ್ಬಂಧಿ ನಡೆಗೆ ಸಾರ್ವಜನಿಕರು ಅನುಮಾನ ವ್ಯಕ್ತಪಡಿಸುತ್ತಿದ್ದಾರೆ.
ದೂರು ನೀಡದ ಮ್ಯಾನೇಜರ್;
ಇನ್ನೊಂದೆಡೆ ಬ್ಯಾಂಕಿನ ಬಾಗಿಲು ಮುರಿದಿದ್ದು, ಗೇಟ್ ಮತ್ತು ಕೀಗೆ ಬ್ಯಾಂಕಿನ ಸಿಬ್ಬಂದಿ ವೆಲ್ಡಿಂಗ್ ಮಾಡಿಸಿದ್ದಾರೆ. ಈ ಕುರಿತು ಬ್ಯಾಂಕ್ ಮ್ಯಾನೇಜರ್ ಬ್ರಹ್ಮಾನಂದ್ ಅವರು ಯಾವುದೇ ಮಾಹಿತಿ ಹಂಚಿಕೊಂಡಿಲ್ಲ. ಮ್ಯಾನೇಜರ್ ದೂರು ನೀಡದೆ ಹಾರಿಕೆ ಉತ್ತರ ನೀಡ್ತಾ ಇದ್ದಾರೆ. ಬ್ಯಾಂಕ್ ಸಿಬ್ಬಂದಿ ಪ್ರಕರಣ ಮುಚ್ಚಿ ಹಾಕಲು ಪ್ರಯತ್ನಿಸುತ್ತಿದ್ದಾರಾ ಎಂಬ ಅನುಮಾನ ಸಾರ್ವಜನಿಕರಲ್ಲಿ ವ್ಯಕ್ತವಾಗುತ್ತಿದೆ.
Attempt to robbery at Hubballi canara bank after robbery at Bidar and Mangalore, case filed.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 01:45 pm
HK News Staffer
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am
ಬಾಂಬ್ ಮಾದರಿಯ ವಸ್ತು ಸ್ಫೋಟಿಸಿ ರೀಲ್ಸ್ ಶೂಟಿಂಗ್ ;...
01-05-26 10:30 am
ಗುದದ್ವಾರದಲ್ಲಿ ಮೊಬೈಲ್ ಬಚ್ಚಿಟ್ಟು ಜೈಲು ಎಂಟ್ರಿಯಾದ...
01-05-26 09:39 am
ಸೌಜನ್ಯಾ ಪ್ರಕರಣ ಮರು ತನಿಖೆಗೆ ಸುಪ್ರೀಂ ಕೋರ್ಟಿಗೆ ಅ...
30-04-26 04:30 pm