ಬ್ರೇಕಿಂಗ್ ನ್ಯೂಸ್
21-01-25 06:00 pm Mangaluru Correspondent ಕ್ರೈಂ
ಮಂಗಳೂರು, ಜ.2: ಕೋಟೆಕಾರು ಸಹಕಾರಿ ಬ್ಯಾಂಕು ದರೋಡೆ ಪ್ರಕರಣದಲ್ಲಿ ಆರೋಪಿಯೊಬ್ಬನಿಗೆ ಮಂಗಳೂರು ಪೊಲೀಸರು ಗುಂಡೇಟಿನ ರುಚಿ ತೋರಿಸಿದ್ದಾರೆ. ತಮಿಳುನಾಡಿನಲ್ಲಿ ಬಂಧಿಸಲ್ಪಟ್ಟ ಆರೋಪಿಗಳನ್ನು ಮಂಗಳೂರಿಗೆ ಕರೆತಂದು ಸ್ಥಳ ಮಹಜರು ನಡೆಸುವುದಕ್ಕಾಗಿ ಉಳ್ಳಾಲಕ್ಕೆ ಕರೆದೊಯ್ದಿದ್ದರು. ಈ ವೇಳೆ, ಎಸ್ಕೇಪ್ ಆಗಲು ಯತ್ನಿಸಿದ ಕಣ್ಣನ್ ಮಣಿ (35) ಎಂಬಾತನ ಮೇಲೆ ಪೊಲೀಸರು ಗುಂಡು ಹಾರಿಸಿದ್ದಾರೆ. ಘಟನೆಯಲ್ಲಿ ಮೂವರು ಪೊಲೀಸರು ಗಾಯಗೊಂಡಿದ್ದಾರೆ.
ಕಣ್ಣನ್ ಮಣಿ ಮೂಲತಃ ತಮಿಳುನಾಡು ನಿವಾಸಿಯಾಗಿದ್ದರೂ, ಸದ್ಯಕ್ಕೆ ಮುಂಬೈ ನಗರದ ಚೆಂಬೂರಿನಲ್ಲಿ ನೆಲೆಸಿದ್ದ. ಧಾರಾವಿ ಗ್ಯಾಂಗ್ ನಲ್ಲಿ ಪ್ರಮುಖವಾಗಿ ಗುರುತಿಸಿಕೊಂಡಿದ್ದ ಮಣಿಯನ್ನು ಮಂಗಳೂರು ಸಿಸಿಬಿ ಮತ್ತು ಉಳ್ಳಾಲ ಪೊಲೀಸರು ಸ್ಥಳ ಮಹಜರು ನಡೆಸುವ ಸಲುವಾಗಿ ತಲಪಾಡಿ ಬಳಿಯ ಕೆಸಿ ರೋಡ್ ಅಲಂಕಾರ ಗುಡ್ಡೆಗೆ ಕರೆದೊಯ್ದಿದ್ದರು. ಅಲ್ಲಿ ಜೀಪಿನಿಂದ ಇಳಿಯುತ್ತಲೇ ಪೊಲೀಸರಿಗೆ ಹಲ್ಲೆಗೈದು ಪರಾರಿಗೆ ಯತ್ನಿಸಿದ್ದಾನೆ. ಸ್ಥಳದಲ್ಲಿ ಬಿದ್ದಿದ್ದ ಬಿಯರ್ ಬಾಟಲಿಯ ಚೂರಿನಿಂದ ಹಲ್ಲೆಗೆ ಯತ್ನಿಸಿದ್ದು ಸಿಸಿಬಿ ಇನ್ಸ್ ಪೆಕ್ಟರ್ ಆರೋಪಿ ಕಾಲಿಗೆ ಫೈರ್ ಮಾಡಿದ್ದಾರೆ.






ಘಟನೆಯಲ್ಲಿ ಉಳ್ಳಾಲ ಇನ್ಸ್ ಪೆಕ್ಟರ್ ಬಾಲಕೃಷ್ಣ, ಪೇದೆಗಳಾದ ಆಂಜಿನಪ್ಪ, ನಿತಿನ್ ಎಂಬವರಿಗೆ ಗಾಯವಾಗಿದ್ದು ಅವರನ್ನು ಮತ್ತು ಗುಂಡೇಟು ಪಡೆದ ಆರೋಪಿ ಕಣ್ಣನ್ ಮಣಿಯನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಫೈರಿಂಗ್ ಘಟನೆ ಬಗ್ಗೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸ್ಥಳದಲ್ಲಿ ಪೊಲೀಸರು ಬೀಡು ಬಿಟ್ಟಿದ್ದು, ಭದ್ರತಾ ಕಾರ್ಯ ನಡೆಸಿದ್ದಾರೆ. ದರೋಡೆ ಪ್ರಕರಣ ಸಂಬಂಧಿಸಿ ಮುರುಗನ್ ಡಿ ದೇವರ್, ಕಣ್ಣನ್ ಮಣಿ ಮತ್ತು ಯೋಶುವಾ ರಾಜೇಂದ್ರನ್ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ಸದ್ಯಕ್ಕೆ ಒಬ್ಬನನ್ನು ಮಾತ್ರ ಸ್ಥಳ ಮಹಜರಿಗಾಗಿ ಕರೆದೊಯ್ಯಲಾಗಿತ್ತು. ಇವರನ್ನು ತಮಿಳುನಾಡಿನ ಸ್ಥಳೀಯ ಕೋರ್ಟಿನಲ್ಲಿ ಹಾಜರುಪಡಿಸಿ ಮಂಗಳೂರಿಗೆ ಕರೆತರಲಾಗಿದೆ.
Kotekar robbery mangalore, accused kanan mani was shot in the leg by police while trying to assault on the police and flee during the spot Mahajar at kotekar bank.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm