ಬ್ರೇಕಿಂಗ್ ನ್ಯೂಸ್
21-01-25 06:00 pm Mangaluru Correspondent ಕ್ರೈಂ
ಮಂಗಳೂರು, ಜ.2: ಕೋಟೆಕಾರು ಸಹಕಾರಿ ಬ್ಯಾಂಕು ದರೋಡೆ ಪ್ರಕರಣದಲ್ಲಿ ಆರೋಪಿಯೊಬ್ಬನಿಗೆ ಮಂಗಳೂರು ಪೊಲೀಸರು ಗುಂಡೇಟಿನ ರುಚಿ ತೋರಿಸಿದ್ದಾರೆ. ತಮಿಳುನಾಡಿನಲ್ಲಿ ಬಂಧಿಸಲ್ಪಟ್ಟ ಆರೋಪಿಗಳನ್ನು ಮಂಗಳೂರಿಗೆ ಕರೆತಂದು ಸ್ಥಳ ಮಹಜರು ನಡೆಸುವುದಕ್ಕಾಗಿ ಉಳ್ಳಾಲಕ್ಕೆ ಕರೆದೊಯ್ದಿದ್ದರು. ಈ ವೇಳೆ, ಎಸ್ಕೇಪ್ ಆಗಲು ಯತ್ನಿಸಿದ ಕಣ್ಣನ್ ಮಣಿ (35) ಎಂಬಾತನ ಮೇಲೆ ಪೊಲೀಸರು ಗುಂಡು ಹಾರಿಸಿದ್ದಾರೆ. ಘಟನೆಯಲ್ಲಿ ಮೂವರು ಪೊಲೀಸರು ಗಾಯಗೊಂಡಿದ್ದಾರೆ.
ಕಣ್ಣನ್ ಮಣಿ ಮೂಲತಃ ತಮಿಳುನಾಡು ನಿವಾಸಿಯಾಗಿದ್ದರೂ, ಸದ್ಯಕ್ಕೆ ಮುಂಬೈ ನಗರದ ಚೆಂಬೂರಿನಲ್ಲಿ ನೆಲೆಸಿದ್ದ. ಧಾರಾವಿ ಗ್ಯಾಂಗ್ ನಲ್ಲಿ ಪ್ರಮುಖವಾಗಿ ಗುರುತಿಸಿಕೊಂಡಿದ್ದ ಮಣಿಯನ್ನು ಮಂಗಳೂರು ಸಿಸಿಬಿ ಮತ್ತು ಉಳ್ಳಾಲ ಪೊಲೀಸರು ಸ್ಥಳ ಮಹಜರು ನಡೆಸುವ ಸಲುವಾಗಿ ತಲಪಾಡಿ ಬಳಿಯ ಕೆಸಿ ರೋಡ್ ಅಲಂಕಾರ ಗುಡ್ಡೆಗೆ ಕರೆದೊಯ್ದಿದ್ದರು. ಅಲ್ಲಿ ಜೀಪಿನಿಂದ ಇಳಿಯುತ್ತಲೇ ಪೊಲೀಸರಿಗೆ ಹಲ್ಲೆಗೈದು ಪರಾರಿಗೆ ಯತ್ನಿಸಿದ್ದಾನೆ. ಸ್ಥಳದಲ್ಲಿ ಬಿದ್ದಿದ್ದ ಬಿಯರ್ ಬಾಟಲಿಯ ಚೂರಿನಿಂದ ಹಲ್ಲೆಗೆ ಯತ್ನಿಸಿದ್ದು ಸಿಸಿಬಿ ಇನ್ಸ್ ಪೆಕ್ಟರ್ ಆರೋಪಿ ಕಾಲಿಗೆ ಫೈರ್ ಮಾಡಿದ್ದಾರೆ.






ಘಟನೆಯಲ್ಲಿ ಉಳ್ಳಾಲ ಇನ್ಸ್ ಪೆಕ್ಟರ್ ಬಾಲಕೃಷ್ಣ, ಪೇದೆಗಳಾದ ಆಂಜಿನಪ್ಪ, ನಿತಿನ್ ಎಂಬವರಿಗೆ ಗಾಯವಾಗಿದ್ದು ಅವರನ್ನು ಮತ್ತು ಗುಂಡೇಟು ಪಡೆದ ಆರೋಪಿ ಕಣ್ಣನ್ ಮಣಿಯನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಫೈರಿಂಗ್ ಘಟನೆ ಬಗ್ಗೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸ್ಥಳದಲ್ಲಿ ಪೊಲೀಸರು ಬೀಡು ಬಿಟ್ಟಿದ್ದು, ಭದ್ರತಾ ಕಾರ್ಯ ನಡೆಸಿದ್ದಾರೆ. ದರೋಡೆ ಪ್ರಕರಣ ಸಂಬಂಧಿಸಿ ಮುರುಗನ್ ಡಿ ದೇವರ್, ಕಣ್ಣನ್ ಮಣಿ ಮತ್ತು ಯೋಶುವಾ ರಾಜೇಂದ್ರನ್ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ಸದ್ಯಕ್ಕೆ ಒಬ್ಬನನ್ನು ಮಾತ್ರ ಸ್ಥಳ ಮಹಜರಿಗಾಗಿ ಕರೆದೊಯ್ಯಲಾಗಿತ್ತು. ಇವರನ್ನು ತಮಿಳುನಾಡಿನ ಸ್ಥಳೀಯ ಕೋರ್ಟಿನಲ್ಲಿ ಹಾಜರುಪಡಿಸಿ ಮಂಗಳೂರಿಗೆ ಕರೆತರಲಾಗಿದೆ.
Kotekar robbery mangalore, accused kanan mani was shot in the leg by police while trying to assault on the police and flee during the spot Mahajar at kotekar bank.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm