ಬ್ರೇಕಿಂಗ್ ನ್ಯೂಸ್
24-01-25 07:18 pm Bangalore Correspondent ಕ್ರೈಂ
ಬೆಂಗಳೂರು, ಜ 24: ದೊಡ್ಡ ಪ್ರಮಾಣದ ಹಣ ವರ್ಗಾವಣೆಯಾದಾಗ ಬ್ಯಾಂಕ್ಗಳು ಖಚಿತಪಡಿಸಿಕೊಳ್ಳಲು ಮುನ್ನೆಚ್ಚರಿಕೆ ಕ್ರಮವಾಗಿ ಗ್ರಾಹಕರಿಗೆ ಮೇಲ್ ಅಥವಾ ಸಂದೇಶ ಕಳುಹಿಸುವುದು ಸಾಮಾನ್ಯ. ಆದರೆ ಬ್ಯಾಂಕ್ಗಳ ಈ ಕ್ರಮವನ್ನೂ ದುರ್ಬಳಕೆ ಮಾಡಿಕೊಂಡ ಸೈಬರ್ ಖದೀಮರು, ನಿಮ್ಮ ವಹಿವಾಟು ಖಚಿತಪಡಿಸಿ ಎಂದು ಕರೆ ಮಾಡಿ ಮಹಿಳೆಯೊಬ್ಬರ ಖಾತೆಯಿಂದ ಕ್ಷಣ ಮಾತ್ರದಲ್ಲಿ 2 ಲಕ್ಷ ರೂ. ಎಗರಿಸಿದ ಪ್ರಕರಣ ವರದಿಯಾಗಿದೆ.
ರಾಷ್ಟ್ರೀಕೃತ ಬ್ಯಾಂಕ್ವೊಂದರ ಪ್ರತಿನಿಧಿಗಳು ಎಂದು ಕರೆ ಮಾಡಿದ್ದ ವಂಚಕರು ಬೆಂಗಳೂರಿನ 58 ವರ್ಷದ ಮಹಿಳೆಯೊಬ್ಬರಿಗೆ ವಂಚಿಸಿದ್ದಾರೆ. ಈ ಬಗ್ಗೆ ಗಿರಿನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದೂರಿನ ವಿವರ:
ದೂರುದಾರ ಮಹಿಳೆಗೆ ಜನವರಿ 20ರಂದು ಬ್ಯಾಂಕ್ ಪ್ರತಿನಿಧಿಯ ಸೋಗಿನಲ್ಲಿ ಕರೆ ಮಾಡಿರುವ ವಂಚಕ, ''ನಿಮ್ಮ ಖಾತೆಯಿಂದ ಬೇರೆ ಖಾತೆಗೆ 2 ಲಕ್ಷ ರೂ. ಹಣ ವರ್ಗಾವಣೆಯಾಗುತ್ತಿದೆ. ಈ ಹಣವನ್ನು ನೀವೇ ವರ್ಗಾಯಿಸಿದ್ದರೆ ಮೂರನ್ನು ಒತ್ತಿ, ಇಲ್ಲವಾಗಿದ್ದಲ್ಲಿ ಒಂದನ್ನು ಒತ್ತಿ" ಎಂದಿದ್ದಾನೆ. ಗಾಬರಿಗೊಂಡ ಮಹಿಳೆ ಒಂದನ್ನು ಒತ್ತಿದ್ದಾರೆ. ಬಳಿಕ ''ನಿಮ್ಮ ಬ್ಯಾಂಕ್ ಮ್ಯಾನೇಜರ್ನ ಸಂಪರ್ಕಿಸಿ'' ಎಂದು ಕರೆ ಸ್ಥಗಿತಗೊಳಿಸಿದ್ದಾರೆ. ಅನುಮಾನದ ಮೇಲೆ ಬ್ಯಾಂಕ್ಗೆ ತೆರಳಿ ವಿಚಾರಿಸಿದಾಗ ತಮ್ಮ ಖಾತೆಯಲ್ಲಿನ 2 ಲಕ್ಷ ರೂ. ವಂಚಕರ ಖಾತೆಗೆ ವರ್ಗಾವಣೆಯಾಗಿರುವುದು ತಿಳಿದು ಬಂದಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ತಕ್ಷಣ ರಾಷ್ಟ್ರೀಯ ಸೈಬರ್ ಕ್ರೈಂ ಸಹಾಯವಾಣಿ (1930) ಗೆ ಪ್ರಾಥಮಿಕ ದೂರು ಸಲ್ಲಿಸಿರುವ ಮಹಿಳೆ, ನಂತರ ಗಿರಿನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಅದರ ಅನ್ವಯ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಕೈಗೊಳ್ಳಲಾಗುತ್ತಿದೆ. ಈ ರೀತಿಯ ಕರೆಗಳು ಬಂದಾಗ ಸಾರ್ವಜನಿಕರು ಅವರು ಹೇಳುವುದನ್ನು ಮಾಡದೇ ನೇರವಾಗಿ ಬ್ಯಾಂಕ್ಗೆ ತೆರಳಿ ಪರಿಶೀಲಿಸಿಕೊಳ್ಳಬೇಕು ಎಂದು ಪೊಲೀಸರು ತಿಳಿಸಿದ್ದಾರೆ.
Women from Bangalore looses 2 lakhs after pressing no 1 button on the mobile phone. Case has been filed at the cyber crime police station.
06-04-26 06:09 pm
HK News Staffer
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
06-04-26 05:40 pm
HK News Staffer
ಆತ್ಮಹತ್ಯೆ ಮಾಡಿಕೊಂಡ ಪತ್ನಿಯನ್ನು ನೋಡಲು ಆಸ್ಪತ್ರೆಗ...
06-04-26 02:34 pm
ಹಂದಿ ಬೇಟೆಗಾಗಿ ತೋಟದಲ್ಲಿ ಇಟ್ಟಿದ್ದ ನಾಡಬಾಂಬ್ ಸ್ಫೋ...
05-04-26 11:03 am
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm