ಬ್ರೇಕಿಂಗ್ ನ್ಯೂಸ್
24-01-25 07:18 pm Bangalore Correspondent ಕ್ರೈಂ
ಬೆಂಗಳೂರು, ಜ 24: ದೊಡ್ಡ ಪ್ರಮಾಣದ ಹಣ ವರ್ಗಾವಣೆಯಾದಾಗ ಬ್ಯಾಂಕ್ಗಳು ಖಚಿತಪಡಿಸಿಕೊಳ್ಳಲು ಮುನ್ನೆಚ್ಚರಿಕೆ ಕ್ರಮವಾಗಿ ಗ್ರಾಹಕರಿಗೆ ಮೇಲ್ ಅಥವಾ ಸಂದೇಶ ಕಳುಹಿಸುವುದು ಸಾಮಾನ್ಯ. ಆದರೆ ಬ್ಯಾಂಕ್ಗಳ ಈ ಕ್ರಮವನ್ನೂ ದುರ್ಬಳಕೆ ಮಾಡಿಕೊಂಡ ಸೈಬರ್ ಖದೀಮರು, ನಿಮ್ಮ ವಹಿವಾಟು ಖಚಿತಪಡಿಸಿ ಎಂದು ಕರೆ ಮಾಡಿ ಮಹಿಳೆಯೊಬ್ಬರ ಖಾತೆಯಿಂದ ಕ್ಷಣ ಮಾತ್ರದಲ್ಲಿ 2 ಲಕ್ಷ ರೂ. ಎಗರಿಸಿದ ಪ್ರಕರಣ ವರದಿಯಾಗಿದೆ.
ರಾಷ್ಟ್ರೀಕೃತ ಬ್ಯಾಂಕ್ವೊಂದರ ಪ್ರತಿನಿಧಿಗಳು ಎಂದು ಕರೆ ಮಾಡಿದ್ದ ವಂಚಕರು ಬೆಂಗಳೂರಿನ 58 ವರ್ಷದ ಮಹಿಳೆಯೊಬ್ಬರಿಗೆ ವಂಚಿಸಿದ್ದಾರೆ. ಈ ಬಗ್ಗೆ ಗಿರಿನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದೂರಿನ ವಿವರ:
ದೂರುದಾರ ಮಹಿಳೆಗೆ ಜನವರಿ 20ರಂದು ಬ್ಯಾಂಕ್ ಪ್ರತಿನಿಧಿಯ ಸೋಗಿನಲ್ಲಿ ಕರೆ ಮಾಡಿರುವ ವಂಚಕ, ''ನಿಮ್ಮ ಖಾತೆಯಿಂದ ಬೇರೆ ಖಾತೆಗೆ 2 ಲಕ್ಷ ರೂ. ಹಣ ವರ್ಗಾವಣೆಯಾಗುತ್ತಿದೆ. ಈ ಹಣವನ್ನು ನೀವೇ ವರ್ಗಾಯಿಸಿದ್ದರೆ ಮೂರನ್ನು ಒತ್ತಿ, ಇಲ್ಲವಾಗಿದ್ದಲ್ಲಿ ಒಂದನ್ನು ಒತ್ತಿ" ಎಂದಿದ್ದಾನೆ. ಗಾಬರಿಗೊಂಡ ಮಹಿಳೆ ಒಂದನ್ನು ಒತ್ತಿದ್ದಾರೆ. ಬಳಿಕ ''ನಿಮ್ಮ ಬ್ಯಾಂಕ್ ಮ್ಯಾನೇಜರ್ನ ಸಂಪರ್ಕಿಸಿ'' ಎಂದು ಕರೆ ಸ್ಥಗಿತಗೊಳಿಸಿದ್ದಾರೆ. ಅನುಮಾನದ ಮೇಲೆ ಬ್ಯಾಂಕ್ಗೆ ತೆರಳಿ ವಿಚಾರಿಸಿದಾಗ ತಮ್ಮ ಖಾತೆಯಲ್ಲಿನ 2 ಲಕ್ಷ ರೂ. ವಂಚಕರ ಖಾತೆಗೆ ವರ್ಗಾವಣೆಯಾಗಿರುವುದು ತಿಳಿದು ಬಂದಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ತಕ್ಷಣ ರಾಷ್ಟ್ರೀಯ ಸೈಬರ್ ಕ್ರೈಂ ಸಹಾಯವಾಣಿ (1930) ಗೆ ಪ್ರಾಥಮಿಕ ದೂರು ಸಲ್ಲಿಸಿರುವ ಮಹಿಳೆ, ನಂತರ ಗಿರಿನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಅದರ ಅನ್ವಯ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಕೈಗೊಳ್ಳಲಾಗುತ್ತಿದೆ. ಈ ರೀತಿಯ ಕರೆಗಳು ಬಂದಾಗ ಸಾರ್ವಜನಿಕರು ಅವರು ಹೇಳುವುದನ್ನು ಮಾಡದೇ ನೇರವಾಗಿ ಬ್ಯಾಂಕ್ಗೆ ತೆರಳಿ ಪರಿಶೀಲಿಸಿಕೊಳ್ಳಬೇಕು ಎಂದು ಪೊಲೀಸರು ತಿಳಿಸಿದ್ದಾರೆ.
Women from Bangalore looses 2 lakhs after pressing no 1 button on the mobile phone. Case has been filed at the cyber crime police station.
15-03-26 04:27 pm
HK News Staffer
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
15-03-26 05:37 pm
HK News Desk
ಎಪ್ರಿಲ್ 9 ಮತ್ತು 23 ; ಕೇರಳ, ತಮಿಳುನಾಡಿನಲ್ಲಿ ಒಂದ...
15-03-26 05:08 pm
ಅಮೆರಿಕ ವಿರುದ್ಧ ಯುದ್ಧಕ್ಕೆ ಹೌತಿಗಳು ಸಜ್ಜು ; ಹರ್ಮ...
15-03-26 04:57 pm
ಐತಿಹಾಸಿಕ ರಾಮಾಯಣ ಕ್ಷೇತ್ರಗಳ ದರ್ಶನಕ್ಕೆ ವಿಶೇಷ ರೈಲ...
15-03-26 01:08 pm
ಗಲ್ಫ್ ಯುದ್ಧ ನಡುವಲ್ಲೇ ಮಿಸೈಲ್ ಉಡಾಯಿಸಿದ ಉತ್ತರ ಕೊ...
14-03-26 10:31 pm
14-03-26 09:26 pm
HK News Desk
ಕಂದಾಯ- ಅರಣ್ಯ ಭೂಮಿ ಗುರುತಿಸಲು ಜಿಲ್ಲಾ ಮಟ್ಟದಲ್ಲಿ...
14-03-26 08:31 pm
ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಬಂಟ್ವಾಳದ ಯುವ ಛಾಯಾ...
14-03-26 06:07 pm
‘ಕ್ರಿಶ್ಚಿಯನ್ ಯುವಕ’ನಿಂದ ದೈವ ನರ್ತನ ಸೇವೆ ; ಪಂಬದ...
14-03-26 05:19 pm
ಮಾರ್ಚ್ 16ರಿಂದ 28ರ ವರೆಗೆ ಮಂಗಳೂರಿನಿಂದ ಶಾರ್ಜಾಕ್ಕ...
13-03-26 10:04 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am