ಬ್ರೇಕಿಂಗ್ ನ್ಯೂಸ್
31-01-25 10:22 am HK News Desk ಕ್ರೈಂ
ಹಾಸನ, ಜ 31: ಖಾಸಗಿ ಬಸ್ ಅಡ್ಡಗಟ್ಟಿ ತಲವಾರಿನಿಂದ ದಾಳಿ ಮಾಡಿ ಅಟ್ಟಹಾಸ ಮೆರೆದಿದ್ದಲ್ಲದೇ ಬಂಧಿಸಲು ಬಂದ ಪೊಲೀಸರ ಮೇಲೆಯೇ ಹಲ್ಲೆಗೆ ಯತ್ನಿಸಿದ ರೌಡಿಶೀಟರ್ ಕಾಲಿಗೆ ಗುಂಡು ಹಾರಿಸಿ, ಪೊಲೀಸರು ಬಂಧಿಸಿದ ಘಟನೆ ಹಾಸನದಲ್ಲಿ ಗುರುವಾರ ನಡೆದಿದೆ.
ಮನು ಬಂಧಿತ ಆರೋಪಿ. ಈತ ಬುಧವಾರ ಮಧ್ಯರಾತ್ರಿ ಬಸ್ ಅಡ್ಡಗಟ್ಟಿ ಅದರ ಗಾಜನ್ನು ಲಾಂಗ್ನಿಂದ ಒಡೆದು ಹಾಕಿದ್ದ. ಬಸ್ ಪ್ರಯಾಣಿಕರು ಆತನನ್ನು ಹಿಡಿಯಲು ಮುಂದಾದಾಗ ಕಾರು ಹತ್ತಿ ಪರಾರಿಯಾಗಿದ್ದ. ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಬೆನ್ನಲ್ಲೇ ಮಾಹಿತಿ ತಿಳಿದು ಪೊಲೀಸರು ಕಾರ್ಯಾಚರಣೆಗೆ ಇಳಿದಿದ್ದರು.
ಆರೋಪಿಯ ಚಲನವಲನ ಗಮನಿಸಿದ ಪೊಲೀಸರು, ಮಂಗಳೂರು ಕಡೆಯಿಂದ ಬೆಂಗಳೂರಿನೆಡೆಗೆ ವಾಪಸ್ ಆಗುತ್ತಿದ್ದಾಗ ಹಾಸನ ತಾಲೂಕಿನ ಶಾಂತಿಗ್ರಾಮದ ಬಳಿ ಟೋಲ್ ಗೇಟ್ ಸಮೀಪ ಆತನನ್ನು ಸುತ್ತುವರಿದಿದ್ದಾರೆ. ಈ ವೇಳೆ ಆರೋಪಿ ಕಾರಿನಲ್ಲಿದ್ದ ಲಾಂಗ್ ತೆಗೆದು ಪೊಲೀಸರ ಮೇಲೂ ಹಲ್ಲೆಗೆ ಮುಂದಾಗಿದ್ದ. ಪ್ರಾಣ ರಕ್ಷಣೆಗೆ ಪೊಲೀಸರು ಆರೋಪಿಯ ಕಾಲಿಗೆ ಗುಂಡು ಹಾರಿಸಿದ್ದಾರೆ. ಆರೋಪಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.
ಆರೋಪಿ ಮನು ಮೇಲೆ ಒಂದು ಕೊಲೆ ಪ್ರಕರಣ, ಮೂರು ಕೊಲೆ ಯತ್ನ ಹಾಗೂ ರಾತ್ರಿ ಕಳ್ಳತನ ಪ್ರಕರಣಗಳು ದಾಖಲಾಗಿವೆ.
ಹಾಸನ ಹೊರವಲಯದ ಬೈಪಾಸ್ ರಸ್ತೆಯ ದೇವರಾಯಪಟ್ಟಣದ ಬಳಿ ಬುಧವಾರ ರಾತ್ರಿ 2 ಸುಮಾರಿಗೆ ಬೆಂಗಳೂರಿನಿಂದ ಮಂಗಳೂರಿಗೆ ಖಾಸಗಿ ಬಸ್ ಸಂಚರಿಸುತ್ತಿತ್ತು. ಈ ವೇಳೆ ತನ್ನ ಕಾರನ್ನು ಖಾಸಗಿ ಬಸ್ಗೆ ಅಡ್ಡಲಾಗಿ ನಿಲ್ಲಿಸಿ ಚಾಲಕನನ್ನು ಬೆದರಿಸಲು ನೋಡಿದ್ದಾನೆ. ಅಷ್ಟೇ ಅಲ್ಲ, ಕಾರಿನಲ್ಲಿದ್ದ ಮಾರಕಾಸ್ತ್ರವನ್ನು ತೆಗೆದು ಬಸ್ ಮುಂಭಾಗದ ಗಾಜನ್ನು ಒಡೆದು ಪುಡಿ ಪುಡಿ ಮಾಡಿದ್ದ. ಇದರ ದೃಶ್ಯ ಬಸ್ಸಿನಲ್ಲಿದ್ದ ಪ್ರಯಾಣಿಕರ ಮೊಬೈಲ್ನಲ್ಲಿ ಸೆರೆಯಾಗಿತ್ತು. ಈ ಕುರಿತು ಮಾಹಿತಿ ಸಿಕ್ಕ ನಂತರ ಪೊಲೀಸರು ಕಾರ್ಯಾಚರಣೆಗೆ ಇಳಿದಿದ್ದರು.
The #HassanPolice have registered a case against a rowdy-sheeter who attacked a private bus with a machete, leaving passengers traumatised.
— Hate Detector 🔍 (@HateDetectors) January 30, 2025
The incident occurred following a quarrel between the accused and the bus driver over overtaking.
Reprtedly, the accused is currently… pic.twitter.com/3MhxicPei4
Hassan police open fire at person who attacked a private bus coming towards Mangalore from Bangalore. Manu, the accused, recently waylaid a private bus on the Bengaluru-Mangaluru highway near Hassan by stopping his car and later hit the windshield with a lethal weapon. A video clip of his act went viral on social media platforms.
13-07-25 08:37 pm
HK News Desk
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
ಬೀದಿನಾಯಿಗಳಿಗೆ ಬಿರಿಯಾನಿ ಭಾಗ್ಯ ; ಶಾಲೆಗಳಲ್ಲಿ ಮಕ...
12-07-25 07:07 pm
ಧರ್ಮಸ್ಥಳ ಘಟನೆ ; ಒಬ್ಬ ವ್ಯಕ್ತಿಯ ಪರವಾಗಿ ವಕೀಲರು ದ...
11-07-25 06:36 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm