ಬ್ರೇಕಿಂಗ್ ನ್ಯೂಸ್
31-01-25 10:22 am HK News Desk ಕ್ರೈಂ
ಹಾಸನ, ಜ 31: ಖಾಸಗಿ ಬಸ್ ಅಡ್ಡಗಟ್ಟಿ ತಲವಾರಿನಿಂದ ದಾಳಿ ಮಾಡಿ ಅಟ್ಟಹಾಸ ಮೆರೆದಿದ್ದಲ್ಲದೇ ಬಂಧಿಸಲು ಬಂದ ಪೊಲೀಸರ ಮೇಲೆಯೇ ಹಲ್ಲೆಗೆ ಯತ್ನಿಸಿದ ರೌಡಿಶೀಟರ್ ಕಾಲಿಗೆ ಗುಂಡು ಹಾರಿಸಿ, ಪೊಲೀಸರು ಬಂಧಿಸಿದ ಘಟನೆ ಹಾಸನದಲ್ಲಿ ಗುರುವಾರ ನಡೆದಿದೆ.
ಮನು ಬಂಧಿತ ಆರೋಪಿ. ಈತ ಬುಧವಾರ ಮಧ್ಯರಾತ್ರಿ ಬಸ್ ಅಡ್ಡಗಟ್ಟಿ ಅದರ ಗಾಜನ್ನು ಲಾಂಗ್ನಿಂದ ಒಡೆದು ಹಾಕಿದ್ದ. ಬಸ್ ಪ್ರಯಾಣಿಕರು ಆತನನ್ನು ಹಿಡಿಯಲು ಮುಂದಾದಾಗ ಕಾರು ಹತ್ತಿ ಪರಾರಿಯಾಗಿದ್ದ. ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಬೆನ್ನಲ್ಲೇ ಮಾಹಿತಿ ತಿಳಿದು ಪೊಲೀಸರು ಕಾರ್ಯಾಚರಣೆಗೆ ಇಳಿದಿದ್ದರು.

ಆರೋಪಿಯ ಚಲನವಲನ ಗಮನಿಸಿದ ಪೊಲೀಸರು, ಮಂಗಳೂರು ಕಡೆಯಿಂದ ಬೆಂಗಳೂರಿನೆಡೆಗೆ ವಾಪಸ್ ಆಗುತ್ತಿದ್ದಾಗ ಹಾಸನ ತಾಲೂಕಿನ ಶಾಂತಿಗ್ರಾಮದ ಬಳಿ ಟೋಲ್ ಗೇಟ್ ಸಮೀಪ ಆತನನ್ನು ಸುತ್ತುವರಿದಿದ್ದಾರೆ. ಈ ವೇಳೆ ಆರೋಪಿ ಕಾರಿನಲ್ಲಿದ್ದ ಲಾಂಗ್ ತೆಗೆದು ಪೊಲೀಸರ ಮೇಲೂ ಹಲ್ಲೆಗೆ ಮುಂದಾಗಿದ್ದ. ಪ್ರಾಣ ರಕ್ಷಣೆಗೆ ಪೊಲೀಸರು ಆರೋಪಿಯ ಕಾಲಿಗೆ ಗುಂಡು ಹಾರಿಸಿದ್ದಾರೆ. ಆರೋಪಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.
ಆರೋಪಿ ಮನು ಮೇಲೆ ಒಂದು ಕೊಲೆ ಪ್ರಕರಣ, ಮೂರು ಕೊಲೆ ಯತ್ನ ಹಾಗೂ ರಾತ್ರಿ ಕಳ್ಳತನ ಪ್ರಕರಣಗಳು ದಾಖಲಾಗಿವೆ.
ಹಾಸನ ಹೊರವಲಯದ ಬೈಪಾಸ್ ರಸ್ತೆಯ ದೇವರಾಯಪಟ್ಟಣದ ಬಳಿ ಬುಧವಾರ ರಾತ್ರಿ 2 ಸುಮಾರಿಗೆ ಬೆಂಗಳೂರಿನಿಂದ ಮಂಗಳೂರಿಗೆ ಖಾಸಗಿ ಬಸ್ ಸಂಚರಿಸುತ್ತಿತ್ತು. ಈ ವೇಳೆ ತನ್ನ ಕಾರನ್ನು ಖಾಸಗಿ ಬಸ್ಗೆ ಅಡ್ಡಲಾಗಿ ನಿಲ್ಲಿಸಿ ಚಾಲಕನನ್ನು ಬೆದರಿಸಲು ನೋಡಿದ್ದಾನೆ. ಅಷ್ಟೇ ಅಲ್ಲ, ಕಾರಿನಲ್ಲಿದ್ದ ಮಾರಕಾಸ್ತ್ರವನ್ನು ತೆಗೆದು ಬಸ್ ಮುಂಭಾಗದ ಗಾಜನ್ನು ಒಡೆದು ಪುಡಿ ಪುಡಿ ಮಾಡಿದ್ದ. ಇದರ ದೃಶ್ಯ ಬಸ್ಸಿನಲ್ಲಿದ್ದ ಪ್ರಯಾಣಿಕರ ಮೊಬೈಲ್ನಲ್ಲಿ ಸೆರೆಯಾಗಿತ್ತು. ಈ ಕುರಿತು ಮಾಹಿತಿ ಸಿಕ್ಕ ನಂತರ ಪೊಲೀಸರು ಕಾರ್ಯಾಚರಣೆಗೆ ಇಳಿದಿದ್ದರು.
The #HassanPolice have registered a case against a rowdy-sheeter who attacked a private bus with a machete, leaving passengers traumatised.
— Hate Detector 🔍 (@HateDetectors) January 30, 2025
The incident occurred following a quarrel between the accused and the bus driver over overtaking.
Reprtedly, the accused is currently… pic.twitter.com/3MhxicPei4
Hassan police open fire at person who attacked a private bus coming towards Mangalore from Bangalore. Manu, the accused, recently waylaid a private bus on the Bengaluru-Mangaluru highway near Hassan by stopping his car and later hit the windshield with a lethal weapon. A video clip of his act went viral on social media platforms.
23-01-26 03:21 pm
Bangalore Correspondent
ವಿಧಾನಸಭೆ ಅಧಿವೇಶನ ; ಭಾಷಣ ಅರ್ಧಕ್ಕೆ ಬಿಟ್ಟು ತೆರಳಿ...
22-01-26 10:27 pm
ಕುಕ್ಕೆ ಸುಬ್ರಹ್ಮಣ್ಯ ; 2 ತಿಂಗಳಲ್ಲಿ 14 ಕೋಟಿಗೂ ಹೆ...
22-01-26 05:20 pm
ಚಾಮರಾಜನಗರದಲ್ಲಿ ಚಿರತೆ ದಾಳಿ ; ಪಾದಯಾತ್ರೆಗೆ ಹೊರಟ್...
21-01-26 01:31 pm
ರಾಯಚೂರಿನಲ್ಲಿ ಭೀಕರ ಅಪಘಾತ ; ಬೊಲೆರೋ - ಪಿಕ್ಅ...
21-01-26 12:30 pm
23-01-26 06:44 pm
HK News Desk
ಗಾಜಾದಲ್ಲಿ ಶಾಂತಿ ಸ್ಥಾಪನೆಗೆ 35 ದೇಶಗಳ ಮಂಡಳಿ ರಚನೆ...
22-01-26 10:16 pm
ರೈಲಿನ ಶೌಚಾಲಯದಲ್ಲಿ ಎರಡು ಗಂಟೆ ಲಾಕ್ ಮಾಡಿಕೊಂಡ ಯುವ...
22-01-26 01:52 pm
ಗ್ರೀನ್ ಲ್ಯಾಂಡ್ ; ಯುರೋಪ್ ರಾಷ್ಟ್ರಗಳ ಮೇಲೆ ಸುಂಕ ಹ...
22-01-26 01:16 pm
ಆಂಧ್ರದಲ್ಲಿ ಮತ್ತೆ ಬಸ್ ಬೆಂಕಿ ; ಟೈರ್ ಸ್ಫೋಟಗೊಂಡು...
22-01-26 11:26 am
23-01-26 09:21 pm
Mangaluru Staffer
National Conference on Neuropsychiatry Held a...
23-01-26 09:08 pm
ನಾರ್ಲ ಪಡೀಲಿನಲ್ಲಿ ಒಣ ತ್ಯಾಜ್ಯ ಸಂಸ್ಕರಣಾ ಘಟಕ ನಿರ್...
23-01-26 08:22 pm
Prabhakara Joshi, Vishweshwar Bhat: ಜಾಲತಾಣದಲ್...
23-01-26 06:57 pm
Karkala Accident, Three Killed: ಕಾರ್ಕಳ ಕಂಬಳಕ್...
23-01-26 05:12 pm
23-01-26 09:36 pm
Mangaluru Staffer
ಕಾವೂರು ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ನಕಲಿ ಚಿನ್ನ...
23-01-26 03:34 pm
29 ವರ್ಷಗಳ ಹಿಂದೆ ತಾಯಿ, ಮಗನನ್ನು ಕೊಲೆಗೈದು ಚಿನ್ನಾ...
22-01-26 10:12 pm
ಸ್ವಾಮೀಜಿಗೆ ಬ್ಲ್ಯಾಕ್ಮೇಲ್ ; ಒಂದು ಕೋಟಿಗೆ ಡಿಮ್ಯಾಂ...
22-01-26 02:40 pm
ಜೂಜಾಡಿ ಸಾಲ ; ಹಣದಾಸೆಗೆ ಇಂಜೆಕ್ಷನ್ ನೀಡಿ ಸ್ವಂತ...
21-01-26 09:35 pm