ಬ್ರೇಕಿಂಗ್ ನ್ಯೂಸ್
02-02-25 09:00 pm Bangalore Correspondent ಕ್ರೈಂ
ಬೆಂಗಳೂರು, ಫೆ 02: ಮದುವೆಗೆ ವಧು ತೋರಿಸುವ ನೆಪದಲ್ಲಿ ಹನಿಟ್ರ್ಯಾಪ್ ಮಾಡಿ ಸುಲಿಗೆ ಮಾಡುತ್ತಿದ್ದ ನಾಲ್ವರು ಮಹಿಳೆಯರೂ ಸೇರಿದಂತೆ ಆರು ಆರೋಪಿಗಳನ್ನು ಹೆಬ್ಬಾಳ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಭದ್ರಪ್ಪ ಲೇಔಟ್ನ ಮಂಜುಳಾ (45), ಮಂಗನಹಳ್ಳಿ ತಾವರೆಕೆರೆಯ ಶಿಲ್ಪಾ (45), ಎಂ.ಎಸ್.ಪಾಳ್ಯದ ಲೀಲಾವತಿ (37), ಹೆಬ್ಬಾಳದ ವಿಜಯಮ್ಮ (52) ಹಾಗೂ ಎಚ್.ವೆಂಕಟೇಶ್, ವಿದ್ಯಾರಣ್ಯಪುರದ ಎಂ.ಹರೀಶ್ (41) ಬಂಧಿತರು.
ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು, ನ್ಯಾಯಾಲಯವು ಎಲ್ಲ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಪ್ರಮುಖ ಆರೋಪಿ ಮಂಜುಳಾಗೆ ಕೆಲ ದಿನಗಳ ಹಿಂದೆ ಯುವಕನೊಬ್ಬ ಪರಿಚಯವಾಗಿದ್ದ. 'ವಧು ಹುಡುಕುತ್ತಿದ್ದು, ಕನ್ಯೆ ಇದ್ದರೆ ಹೇಳಿ' ಎಂದು ಮಂಜುಳಾ ಬಳಿ ಯುವಕ ಹೇಳಿದ್ದ. ಹೆಬ್ಬಾಳದ ತನ್ನ ಸ್ನೇಹಿತೆ ಮನೆಗೆ ಹೋದರೆ ಕನ್ಯೆ ತೋರಿಸುವುದಾಗಿ ಮಂಜುಳಾ ಹೇಳಿದ್ದಳು. ಅದರಂತೆ ಮಂಜುಳಾ ಸ್ನೇಹಿತೆ ವಿಜಯಲಕ್ಷ್ಮಿ ಮನೆಗೆ ಯುವಕ ಹೋಗಿದ್ದ.
ಮನೆಯಲ್ಲಿ ಲೀಲಾವತಿ ಎಂಬ ಯುವತಿಯನ್ನು ವಿಜಯಲಕ್ಷ್ಮಿ ಪರಿಚಯಿಸಿದ್ದಳು. ಕೆಲವೇ ಹೊತ್ತಿನಲ್ಲಿ ಇಬ್ಬರೂ ಮಾತನಾಡುತ್ತಿರಿ ಎಂದು ಹೇಳಿ ವಿಜಯಲಕ್ಷ್ಮಿ ಹೊರಕ್ಕೆ ಹೋಗಿದ್ದಳು. ಕೆಲವೇ ಹೊತ್ತಿನಲ್ಲಿ ಪೊಲೀಸರ ಸೋಗಿನಲ್ಲಿ ಗೀತಾ, ಹರೀಶ ಮತ್ತು ವೆಂಕಟೇಶ ಮನೆಗೆ ಬಂದಿದ್ದರು. ಮನೆಯಲ್ಲಿ ವೈಶ್ಯಾವಾಟಿಕೆ ನಡೆಯುತ್ತಿದೆ ಎಂದು ಬೆದರಿಸಿದ್ದರು. ಜೈಲಿಗೆ ಕಳುಹಿಸುವುದಾಗಿ ಬೆದರಿಕೆ ಹಾಕಿದ್ದರು. ಬೆದರಿದ್ದ ಯುವಕ, ಫೋನ್ ಪೇ ಮೂಲಕ 50 ಸಾವಿರ ಕಳಿಸಿದ್ದಾನೆ.
ಯುವಕ ನೀಡಿದ ದೂರು ಆಧರಿಸಿ ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ.
Four women arrested by Bangalore police over honeytrap case. They also used to pose as police officers and threaten the victim and loot money. Hebbal police have arrested four in connection to this case..
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm