ಬ್ರೇಕಿಂಗ್ ನ್ಯೂಸ್
05-02-25 04:29 pm Bangalore Correspondent ಕ್ರೈಂ
ಬೆಂಗಳೂರು, ಫೆ.5: ಪತ್ನಿಯ ಶೀಲ ಶಂಕಿಸಿ ನಡುರಸ್ತೆಯಲ್ಲೇ ಚಾಕು ಇರಿದು ಪತಿಯೇ ಅಮಾನುಷವಾಗಿ ಕೊಲೆಗೈದ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲ್ಲೂಕಿನ ಹೆಬ್ಬಗೋಡಿಯ ವಿನಾಯಕನಗರದಲ್ಲಿ ನಡೆದಿದೆ.
ಮಗುವನ್ನ ಶಾಲೆಗೆ ಬಿಡಲು ಬಂದಿದ್ದ ಪತ್ನಿಯ ಮೇಲೆ ಪತಿ ಅಟ್ಯಾಕ್ ಮಾಡಿದ್ದು ಏಳೆಂಟು ಬಾರಿ ಚಾಕು ಇರಿದಿದ್ದಾನೆ. ತೀವ್ರ ಗಾಯಗೊಂಡು ನೆಲದಲ್ಲಿ ಕುಸಿದು ಬಿದ್ದ ಮಹಿಳೆ ಶ್ರೀಗಂಗಾ(29) ಸಾವನ್ನಪ್ಪಿದ್ದಾಳೆ. ಮೋಹನ್ ರಾಜು(32) ಪತ್ನಿಯನ್ನ ಕೊಲೆಗೈದ ದುರುಳ ವ್ಯಕ್ತಿ.
ಇವರು ಹೆಬ್ಬಗೋಡಿಯ ತಿರುಪಾಳ್ಯ ನಿವಾಸಿಗಳಾಗಿದ್ದು ಮದುವೆಯಾಗಿ ಏಳು ವರ್ಷಗಳಾಗಿದ್ದವು. ಇವರಿಗೆ ಆರು ವರ್ಷದ ಮಗನಿದ್ದು ಘಟನೆ ಸಂದರ್ಭದಲ್ಲಿ ಶಾಲೆಗೆ ಹೋಗಿದ್ದ. ಪತಿ ಮೋಹನ್ ರಾಜ್ ತನ್ನ ಸ್ನೇಹಿತನ ಜೊತೆಗೆ ಪತ್ನಿ ಗಂಗಾ ಅಕ್ರಮ ಸಂಬಂಧ ಇಟ್ಟುಕೊಂಡಿದ್ದಾಳೆಂದು ಶಂಕೆಯಲ್ಲಿ ಎರಡು- ಮೂರು ವರ್ಷದಿಂದ ಗಲಾಟೆ ಮಾಡುತ್ತಿದ್ದ. ಗಲಾಟೆಯಿಂದಾಗಿ ಕಳೆದ ಎಂಟು ತಿಂಗಳಿನಿಂದ ಪತಿ, ಪತ್ನಿ ದೂರವಾಗಿಯೇ ನೆಲೆಸಿದ್ದರು.
ನಿನ್ನೆ ರಾತ್ರಿ ಮಗುವನ್ನ ನೋಡಲು ಪತಿ ಮೋಹನ್ ರಾಜ್ ಪತ್ನಿಯಿದ್ದ ಮನೆಗೆ ಬಂದಿದ್ದ. ಆದರೆ ಆಗಲೂ ಮತ್ತೆ ಪತಿ - ಪತ್ನಿ ನಡುವೆ ಗಲಾಟೆ ನಡೆದಿತ್ತು. ಇದರಿಂದ ಸಿಟ್ಟಾಗಿದ್ದ ಮೋಹನ್ ಬೆಳಗ್ಗೆ ಮಗುವನ್ನ ಶಾಲೆಗೆ ಬಿಡಲು ಸ್ಕೂಟರ್ ನಲ್ಲಿ ಬಂದಿದ್ದ ಶ್ರೀಗಂಗಾಳನ್ನು ಕೊಲ್ಲಲೆಂದೇ ಕಾದು ಕುಳಿತಿದ್ದು ಚೂರಿಯಿಂದ ದಾಳಿ ನಡೆಸಿದ್ದಾನೆ. ಗಂಭೀರ ಗಾಯಗೊಂಡು ಕುಸಿದು ಬಿದ್ದಿದ್ದ ಮಹಿಳೆಯನ್ನ ಆಸ್ಪತ್ರೆಗೆ ಒಯ್ಯಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮಹಿಳೆ ಶ್ರೀಗಂಗಾ ಕೆಲ ಹೊತ್ತಿನಲ್ಲಿಯೇ ಸಾವನ್ನಪ್ಪಿದ್ದಾಳೆ. ಸ್ಥಳಕ್ಕೆ ಹೆಬ್ಬಗೋಡಿ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿ ಆರೋಪಿ ಮೋಹನ್ ರಾಜ್ ನನ್ನು ಬಂಧಿಸಿದ್ದಾರೆ.
Bangalore 29 year old wife brutally murdered by husband over illicit affair. The deceased has been identified as Shriganga, and Mohan raju is the accused husband.
15-03-26 04:27 pm
HK News Staffer
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
15-03-26 05:37 pm
HK News Desk
ಎಪ್ರಿಲ್ 9 ಮತ್ತು 23 ; ಕೇರಳ, ತಮಿಳುನಾಡಿನಲ್ಲಿ ಒಂದ...
15-03-26 05:08 pm
ಅಮೆರಿಕ ವಿರುದ್ಧ ಯುದ್ಧಕ್ಕೆ ಹೌತಿಗಳು ಸಜ್ಜು ; ಹರ್ಮ...
15-03-26 04:57 pm
ಐತಿಹಾಸಿಕ ರಾಮಾಯಣ ಕ್ಷೇತ್ರಗಳ ದರ್ಶನಕ್ಕೆ ವಿಶೇಷ ರೈಲ...
15-03-26 01:08 pm
ಗಲ್ಫ್ ಯುದ್ಧ ನಡುವಲ್ಲೇ ಮಿಸೈಲ್ ಉಡಾಯಿಸಿದ ಉತ್ತರ ಕೊ...
14-03-26 10:31 pm
14-03-26 09:26 pm
HK News Desk
ಕಂದಾಯ- ಅರಣ್ಯ ಭೂಮಿ ಗುರುತಿಸಲು ಜಿಲ್ಲಾ ಮಟ್ಟದಲ್ಲಿ...
14-03-26 08:31 pm
ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಬಂಟ್ವಾಳದ ಯುವ ಛಾಯಾ...
14-03-26 06:07 pm
‘ಕ್ರಿಶ್ಚಿಯನ್ ಯುವಕ’ನಿಂದ ದೈವ ನರ್ತನ ಸೇವೆ ; ಪಂಬದ...
14-03-26 05:19 pm
ಮಾರ್ಚ್ 16ರಿಂದ 28ರ ವರೆಗೆ ಮಂಗಳೂರಿನಿಂದ ಶಾರ್ಜಾಕ್ಕ...
13-03-26 10:04 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am