ಬ್ರೇಕಿಂಗ್ ನ್ಯೂಸ್
05-02-25 04:29 pm Bangalore Correspondent ಕ್ರೈಂ
ಬೆಂಗಳೂರು, ಫೆ.5: ಪತ್ನಿಯ ಶೀಲ ಶಂಕಿಸಿ ನಡುರಸ್ತೆಯಲ್ಲೇ ಚಾಕು ಇರಿದು ಪತಿಯೇ ಅಮಾನುಷವಾಗಿ ಕೊಲೆಗೈದ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲ್ಲೂಕಿನ ಹೆಬ್ಬಗೋಡಿಯ ವಿನಾಯಕನಗರದಲ್ಲಿ ನಡೆದಿದೆ.
ಮಗುವನ್ನ ಶಾಲೆಗೆ ಬಿಡಲು ಬಂದಿದ್ದ ಪತ್ನಿಯ ಮೇಲೆ ಪತಿ ಅಟ್ಯಾಕ್ ಮಾಡಿದ್ದು ಏಳೆಂಟು ಬಾರಿ ಚಾಕು ಇರಿದಿದ್ದಾನೆ. ತೀವ್ರ ಗಾಯಗೊಂಡು ನೆಲದಲ್ಲಿ ಕುಸಿದು ಬಿದ್ದ ಮಹಿಳೆ ಶ್ರೀಗಂಗಾ(29) ಸಾವನ್ನಪ್ಪಿದ್ದಾಳೆ. ಮೋಹನ್ ರಾಜು(32) ಪತ್ನಿಯನ್ನ ಕೊಲೆಗೈದ ದುರುಳ ವ್ಯಕ್ತಿ.
ಇವರು ಹೆಬ್ಬಗೋಡಿಯ ತಿರುಪಾಳ್ಯ ನಿವಾಸಿಗಳಾಗಿದ್ದು ಮದುವೆಯಾಗಿ ಏಳು ವರ್ಷಗಳಾಗಿದ್ದವು. ಇವರಿಗೆ ಆರು ವರ್ಷದ ಮಗನಿದ್ದು ಘಟನೆ ಸಂದರ್ಭದಲ್ಲಿ ಶಾಲೆಗೆ ಹೋಗಿದ್ದ. ಪತಿ ಮೋಹನ್ ರಾಜ್ ತನ್ನ ಸ್ನೇಹಿತನ ಜೊತೆಗೆ ಪತ್ನಿ ಗಂಗಾ ಅಕ್ರಮ ಸಂಬಂಧ ಇಟ್ಟುಕೊಂಡಿದ್ದಾಳೆಂದು ಶಂಕೆಯಲ್ಲಿ ಎರಡು- ಮೂರು ವರ್ಷದಿಂದ ಗಲಾಟೆ ಮಾಡುತ್ತಿದ್ದ. ಗಲಾಟೆಯಿಂದಾಗಿ ಕಳೆದ ಎಂಟು ತಿಂಗಳಿನಿಂದ ಪತಿ, ಪತ್ನಿ ದೂರವಾಗಿಯೇ ನೆಲೆಸಿದ್ದರು.
ನಿನ್ನೆ ರಾತ್ರಿ ಮಗುವನ್ನ ನೋಡಲು ಪತಿ ಮೋಹನ್ ರಾಜ್ ಪತ್ನಿಯಿದ್ದ ಮನೆಗೆ ಬಂದಿದ್ದ. ಆದರೆ ಆಗಲೂ ಮತ್ತೆ ಪತಿ - ಪತ್ನಿ ನಡುವೆ ಗಲಾಟೆ ನಡೆದಿತ್ತು. ಇದರಿಂದ ಸಿಟ್ಟಾಗಿದ್ದ ಮೋಹನ್ ಬೆಳಗ್ಗೆ ಮಗುವನ್ನ ಶಾಲೆಗೆ ಬಿಡಲು ಸ್ಕೂಟರ್ ನಲ್ಲಿ ಬಂದಿದ್ದ ಶ್ರೀಗಂಗಾಳನ್ನು ಕೊಲ್ಲಲೆಂದೇ ಕಾದು ಕುಳಿತಿದ್ದು ಚೂರಿಯಿಂದ ದಾಳಿ ನಡೆಸಿದ್ದಾನೆ. ಗಂಭೀರ ಗಾಯಗೊಂಡು ಕುಸಿದು ಬಿದ್ದಿದ್ದ ಮಹಿಳೆಯನ್ನ ಆಸ್ಪತ್ರೆಗೆ ಒಯ್ಯಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮಹಿಳೆ ಶ್ರೀಗಂಗಾ ಕೆಲ ಹೊತ್ತಿನಲ್ಲಿಯೇ ಸಾವನ್ನಪ್ಪಿದ್ದಾಳೆ. ಸ್ಥಳಕ್ಕೆ ಹೆಬ್ಬಗೋಡಿ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿ ಆರೋಪಿ ಮೋಹನ್ ರಾಜ್ ನನ್ನು ಬಂಧಿಸಿದ್ದಾರೆ.
Bangalore 29 year old wife brutally murdered by husband over illicit affair. The deceased has been identified as Shriganga, and Mohan raju is the accused husband.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm