ಬ್ರೇಕಿಂಗ್ ನ್ಯೂಸ್
05-02-25 04:29 pm Bangalore Correspondent ಕ್ರೈಂ
ಬೆಂಗಳೂರು, ಫೆ.5: ಪತ್ನಿಯ ಶೀಲ ಶಂಕಿಸಿ ನಡುರಸ್ತೆಯಲ್ಲೇ ಚಾಕು ಇರಿದು ಪತಿಯೇ ಅಮಾನುಷವಾಗಿ ಕೊಲೆಗೈದ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲ್ಲೂಕಿನ ಹೆಬ್ಬಗೋಡಿಯ ವಿನಾಯಕನಗರದಲ್ಲಿ ನಡೆದಿದೆ.
ಮಗುವನ್ನ ಶಾಲೆಗೆ ಬಿಡಲು ಬಂದಿದ್ದ ಪತ್ನಿಯ ಮೇಲೆ ಪತಿ ಅಟ್ಯಾಕ್ ಮಾಡಿದ್ದು ಏಳೆಂಟು ಬಾರಿ ಚಾಕು ಇರಿದಿದ್ದಾನೆ. ತೀವ್ರ ಗಾಯಗೊಂಡು ನೆಲದಲ್ಲಿ ಕುಸಿದು ಬಿದ್ದ ಮಹಿಳೆ ಶ್ರೀಗಂಗಾ(29) ಸಾವನ್ನಪ್ಪಿದ್ದಾಳೆ. ಮೋಹನ್ ರಾಜು(32) ಪತ್ನಿಯನ್ನ ಕೊಲೆಗೈದ ದುರುಳ ವ್ಯಕ್ತಿ.
ಇವರು ಹೆಬ್ಬಗೋಡಿಯ ತಿರುಪಾಳ್ಯ ನಿವಾಸಿಗಳಾಗಿದ್ದು ಮದುವೆಯಾಗಿ ಏಳು ವರ್ಷಗಳಾಗಿದ್ದವು. ಇವರಿಗೆ ಆರು ವರ್ಷದ ಮಗನಿದ್ದು ಘಟನೆ ಸಂದರ್ಭದಲ್ಲಿ ಶಾಲೆಗೆ ಹೋಗಿದ್ದ. ಪತಿ ಮೋಹನ್ ರಾಜ್ ತನ್ನ ಸ್ನೇಹಿತನ ಜೊತೆಗೆ ಪತ್ನಿ ಗಂಗಾ ಅಕ್ರಮ ಸಂಬಂಧ ಇಟ್ಟುಕೊಂಡಿದ್ದಾಳೆಂದು ಶಂಕೆಯಲ್ಲಿ ಎರಡು- ಮೂರು ವರ್ಷದಿಂದ ಗಲಾಟೆ ಮಾಡುತ್ತಿದ್ದ. ಗಲಾಟೆಯಿಂದಾಗಿ ಕಳೆದ ಎಂಟು ತಿಂಗಳಿನಿಂದ ಪತಿ, ಪತ್ನಿ ದೂರವಾಗಿಯೇ ನೆಲೆಸಿದ್ದರು.
ನಿನ್ನೆ ರಾತ್ರಿ ಮಗುವನ್ನ ನೋಡಲು ಪತಿ ಮೋಹನ್ ರಾಜ್ ಪತ್ನಿಯಿದ್ದ ಮನೆಗೆ ಬಂದಿದ್ದ. ಆದರೆ ಆಗಲೂ ಮತ್ತೆ ಪತಿ - ಪತ್ನಿ ನಡುವೆ ಗಲಾಟೆ ನಡೆದಿತ್ತು. ಇದರಿಂದ ಸಿಟ್ಟಾಗಿದ್ದ ಮೋಹನ್ ಬೆಳಗ್ಗೆ ಮಗುವನ್ನ ಶಾಲೆಗೆ ಬಿಡಲು ಸ್ಕೂಟರ್ ನಲ್ಲಿ ಬಂದಿದ್ದ ಶ್ರೀಗಂಗಾಳನ್ನು ಕೊಲ್ಲಲೆಂದೇ ಕಾದು ಕುಳಿತಿದ್ದು ಚೂರಿಯಿಂದ ದಾಳಿ ನಡೆಸಿದ್ದಾನೆ. ಗಂಭೀರ ಗಾಯಗೊಂಡು ಕುಸಿದು ಬಿದ್ದಿದ್ದ ಮಹಿಳೆಯನ್ನ ಆಸ್ಪತ್ರೆಗೆ ಒಯ್ಯಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮಹಿಳೆ ಶ್ರೀಗಂಗಾ ಕೆಲ ಹೊತ್ತಿನಲ್ಲಿಯೇ ಸಾವನ್ನಪ್ಪಿದ್ದಾಳೆ. ಸ್ಥಳಕ್ಕೆ ಹೆಬ್ಬಗೋಡಿ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿ ಆರೋಪಿ ಮೋಹನ್ ರಾಜ್ ನನ್ನು ಬಂಧಿಸಿದ್ದಾರೆ.
Bangalore 29 year old wife brutally murdered by husband over illicit affair. The deceased has been identified as Shriganga, and Mohan raju is the accused husband.
23-01-26 03:21 pm
Bangalore Correspondent
ವಿಧಾನಸಭೆ ಅಧಿವೇಶನ ; ಭಾಷಣ ಅರ್ಧಕ್ಕೆ ಬಿಟ್ಟು ತೆರಳಿ...
22-01-26 10:27 pm
ಕುಕ್ಕೆ ಸುಬ್ರಹ್ಮಣ್ಯ ; 2 ತಿಂಗಳಲ್ಲಿ 14 ಕೋಟಿಗೂ ಹೆ...
22-01-26 05:20 pm
ಚಾಮರಾಜನಗರದಲ್ಲಿ ಚಿರತೆ ದಾಳಿ ; ಪಾದಯಾತ್ರೆಗೆ ಹೊರಟ್...
21-01-26 01:31 pm
ರಾಯಚೂರಿನಲ್ಲಿ ಭೀಕರ ಅಪಘಾತ ; ಬೊಲೆರೋ - ಪಿಕ್ಅ...
21-01-26 12:30 pm
23-01-26 06:44 pm
HK News Desk
ಗಾಜಾದಲ್ಲಿ ಶಾಂತಿ ಸ್ಥಾಪನೆಗೆ 35 ದೇಶಗಳ ಮಂಡಳಿ ರಚನೆ...
22-01-26 10:16 pm
ರೈಲಿನ ಶೌಚಾಲಯದಲ್ಲಿ ಎರಡು ಗಂಟೆ ಲಾಕ್ ಮಾಡಿಕೊಂಡ ಯುವ...
22-01-26 01:52 pm
ಗ್ರೀನ್ ಲ್ಯಾಂಡ್ ; ಯುರೋಪ್ ರಾಷ್ಟ್ರಗಳ ಮೇಲೆ ಸುಂಕ ಹ...
22-01-26 01:16 pm
ಆಂಧ್ರದಲ್ಲಿ ಮತ್ತೆ ಬಸ್ ಬೆಂಕಿ ; ಟೈರ್ ಸ್ಫೋಟಗೊಂಡು...
22-01-26 11:26 am
23-01-26 09:21 pm
Mangaluru Staffer
National Conference on Neuropsychiatry Held a...
23-01-26 09:08 pm
ನಾರ್ಲ ಪಡೀಲಿನಲ್ಲಿ ಒಣ ತ್ಯಾಜ್ಯ ಸಂಸ್ಕರಣಾ ಘಟಕ ನಿರ್...
23-01-26 08:22 pm
Prabhakara Joshi, Vishweshwar Bhat: ಜಾಲತಾಣದಲ್...
23-01-26 06:57 pm
Karkala Accident, Three Killed: ಕಾರ್ಕಳ ಕಂಬಳಕ್...
23-01-26 05:12 pm
23-01-26 09:36 pm
Mangaluru Staffer
ಕಾವೂರು ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ನಕಲಿ ಚಿನ್ನ...
23-01-26 03:34 pm
29 ವರ್ಷಗಳ ಹಿಂದೆ ತಾಯಿ, ಮಗನನ್ನು ಕೊಲೆಗೈದು ಚಿನ್ನಾ...
22-01-26 10:12 pm
ಸ್ವಾಮೀಜಿಗೆ ಬ್ಲ್ಯಾಕ್ಮೇಲ್ ; ಒಂದು ಕೋಟಿಗೆ ಡಿಮ್ಯಾಂ...
22-01-26 02:40 pm
ಜೂಜಾಡಿ ಸಾಲ ; ಹಣದಾಸೆಗೆ ಇಂಜೆಕ್ಷನ್ ನೀಡಿ ಸ್ವಂತ...
21-01-26 09:35 pm