ಬ್ರೇಕಿಂಗ್ ನ್ಯೂಸ್
07-02-25 11:55 am Mangalore Correspondent ಕ್ರೈಂ
ಮಂಗಳೂರು, ಫೆ.7: ಕುಡಿದ ಮತ್ತಿನಲ್ಲಿ ಪತ್ನಿಯನ್ನು ಕೊಲೆಗೈದು ಬಳಿಕ ಆತ್ಮಹತ್ಯೆಯೆಂದು ಬಿಂಬಿಸಿ ನಾಟಕವಾಡಿದ್ದ ಪತಿಗೆ ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಸುಳ್ಯ ತಾಲೂಕಿನ ತೊಡಿಕಾನ ಗ್ರಾಮದ ಅಂಡ್ಯಡ್ಕ ಸಿಆರ್ ಸಿ ಕ್ವಾರ್ಟರ್ಸ್ ನಿವಾಸಿ ರಾಜ(64) ಶಿಕ್ಷೆಗೀಡಾದ ಅಪರಾಧಿ. ಆತನ ಪತ್ನಿ ಕಮಲಾ (57) ಕೊಲೆಯಾದ ಮಹಿಳೆ.
2022ರ ಸೆ.4ರಂದು ಆರೋಪಿ ರಾಜಾ ಮತ್ತು ಪತ್ನಿ ಕಮಲಾ ರಬ್ಬರ್ ಟ್ಯಾಪಿಂಗ್ ಮಾಡುವುದಾಗಿ ಹೇಳಿ ಬೆಳ್ತಂಗಡಿ ಕೊಯ್ಯೂರು ಗ್ರಾಮದ ಧರ್ಣಪ್ಪ ಗೌಡರ ಮನೆಗೆ ಕೆಲಸ ಕೇಳಿಕೊಂಡು ಬಂದಿದ್ದರು. ದಂಪತಿಗೆ ರಬ್ಬರ್ ತೋಟದ ಶೆಡ್ ನಲ್ಲೇ ಉಳಿಯಲು ಅವಕಾಶ ಕೊಟ್ಟು ಕೆಲಸ ನೀಡಲಾಗಿತ್ತು. ಆದರೆ ಎರಡು ದಿನ ಕಳೆಯುವಷ್ಟರಲ್ಲಿ ದಂಪತಿ ಕುಡಿದು ಬಂದು ಗಲಾಟೆ ನಡೆಸಿದ್ದಾರೆ. ಸೆ.6ರಂದು ರಾತ್ರಿ 8 ಗಂಟೆ ಸುಮಾರಿಗೆ ಜಗಳಗೈದು ಆರೋಪಿ ರಾಜಾ ಸಿಟ್ಟಿನಲ್ಲಿ ಪತ್ನಿಯ ಕುತ್ತಿಗೆ ಹಿಸುಕಿದ್ದು ನೆಲದಲ್ಲಿ ಬೀಳಿಸಿ ಅಮುಕಿ ಹಿಡಿದಿದ್ದಾನೆ. ಇದರಿಂದ ಉಸಿರು ಕಟ್ಟಿ ಬಿದ್ದ ಮಹಿಳೆಯನ್ನು ಆತ್ಮಹತ್ಯೆಯೆಂದು ಬಿಂಬಿಸಲು ಲುಂಗಿಯನ್ನು ಹರಿದು ಹಗ್ಗದ ರೀತಿ ಮಾಡಿ ಕುತ್ತಿಗೆ ಬಿಗಿದಿದ್ದರಿಂದ ಕಮಲಾ ಸತ್ತಿದ್ದರು.
ಆರೋಪಿ ರಾಜಾ ಬಳಿಕ ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಸಾಕ್ಷ್ಯ ಸೃಷ್ಟಿಸಲು ಮನೆಯ ಪಕ್ಕಾಸಿಗೆ ಬಟ್ಟೆ ನೇತು ಹಾಕಿ ಅದನ್ನು ತಾನೇ ಹರಿದು ಉಳಿಸಿಕೊಂಡಿದ್ದರು. ಪತಿ ರಾಜಾನ ಹೇಳಿಕೆಯಂತೆ, ಆರಂಭದಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಸಾವೆಂದು ಪ್ರಕರಣ ದಾಖಲಾಗಿತ್ತು. ಆದರೆ ಶವದ ಪೋಸ್ಟ್ ಮಾರ್ಟಂ ಮಾಡಿದ್ದ ದೇರಳಕಟ್ಟೆ ಕೆ.ಎಸ್ ಹೆಗ್ಡೆ ಆಸ್ಪತ್ರೆಯ ವೈದ್ಯರು ಕುತ್ತಿಗೆಯನ್ನು ಹಿಸುಕಿ ಕೊಲೆ ಮಾಡಿರುವುದಾಗಿ ವರದಿ ನೀಡಿದ್ದರು. ಇದರಂತೆ, ಆರೋಪಿ ವಿರುದ್ಧ ಕೊಲೆ ಪ್ರಕರಣ ದಾಖಲುಗೊಂಡು ಪೊಲೀಸರು ಅರೆಸ್ಟ್ ಮಾಡಿದ್ದರು. ವೈದ್ಯರ ವರದಿಯನ್ನು ಪರಿಗಣಿಸಿ ವೈದ್ಯಾಧಿಕಾರಿ ಕೂಡ ಆರೋಪಿ ವಿರುದ್ಧ ಕೋರ್ಟಿನಲ್ಲಿ ಸಾಕ್ಷಿ ನುಡಿದಿದ್ದರು.
ಪ್ರಕರಣ ಸಂಬಂಧಿಸಿ ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶೆ ಸಂಧ್ಯಾ ಎಸ್. ಸಮಗ್ರ ವಿಚಾರಣೆ ನಡೆಸಿ ಆರೋಪ ಸಾಬೀತು ಮಾಡಿದ್ದು, ಜೀವಾವಧಿ ಶಿಕ್ಷೆಯ ತೀರ್ಪು ನೀಡಿದ್ದಾರೆ. ಕೊಲೆ ಆರೋಪದಲ್ಲಿ ಆರೋಪಿಗೆ ಜೀವಾವಧಿ ಶಿಕ್ಷೆ ಹಾಗೂ 15 ಸಾವಿರ ರೂ. ದಂಡ ವಿಧಿಸಲಾಗಿದೆ. ಮೃತ ಮಹಿಳೆಯ ಮೂವರು ಮಕ್ಕಳಾದ ಸವಿತಾ, ರಸ್ಯಾ ಮತ್ತು ಮನು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ ಪರಿಹಾರ ಪಡೆಯಬಹುದೆಂದು ಕೋರ್ಟ್ ಆದೇಶ ಮಾಡಿದೆ. ಬೆಳ್ತಂಗಡಿ ಠಾಣೆಯ ಅಂದಿನ ಉಪ ನಿರೀಕ್ಷಕ ನಂದ ಕುಮಾರ್ ಪ್ರಕರಣದ ಪ್ರಾಥಮಿಕ ತನಿಖೆ ನಡೆಸಿದ್ದು, ಆನಂತರ ಇನ್ಸ್ ಪೆಕ್ಟರ್ ಶಿವಕುಮಾರ್ ತನಿಖೆ ಪೂರ್ತಿಗೊಳಿಸಿ ದೋಷಾರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಸರಕಾರದ ಪರವಾಗಿ ಮೋಹನ್ ಕುಮಾರ್ ವಾದ ಮಂಡಿಸಿದ್ದರು.
Life imprisonment by mangalore court to accused for killing wife. The accused raja has been sentenced to life imprisonment for killing his own wife and later Created drama of not killing.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm