ಬ್ರೇಕಿಂಗ್ ನ್ಯೂಸ್
08-02-25 01:00 pm HK News Desk ಕ್ರೈಂ
ಬೀದರ್, ಫೆ.8: ಮನೆಯವರು ತೋರಿಸಿದ ಹುಡುಗನನ್ನು ಮದುವೆಯಾಗಲು ನಿರಾಕರಿಸಿದ ಕೋಪದಲ್ಲಿ ಹೆತ್ತ ತಂದೆಯೇ 18 ವರ್ಷದ ಮಗಳನ್ನು ಹಗ್ಗದಿಂದ ಕುತ್ತಿಗೆ ಬಿಗಿದು ಕೊಲೆ ಮಾಡಿರುವ ಆಘಾತಕಾರಿ ಘಟನೆ ಬೀದರ್ ಜಿಲ್ಲೆಯಲ್ಲಿ ನಡೆದಿದೆ.
ಔರಾದ್ ತಾಲ್ಲೂಕಿನ ವಡಗಾಂವ ಸಮೀಪದ ಬರಗೇನ್ ತಾಂಡಾದಲ್ಲಿ ಶುಕ್ರವಾರ (ಫೆ.7) ಘಟನೆ ನಡೆದಿದ್ದು, ಮೋನಿಕಾ ಜಾಧವ (18) ಕೊಲೆಗೀಡಾದ ಯುವತಿ. ಮಗಳ ಕೊಂದ ತಂದೆ ಮೋತಿರಾಮ ಜಾಧವ ಆರೋಪಿಯಾಗಿದ್ದಾನೆ. ಕೊಲೆ ಆರೋಪಿ ಪತ್ತೆಗೆ ಪೊಲೀಸರ ಕಾರ್ಯಾಚರಣೆ ಮುಂದುವರೆದಿದೆ.
'ಕುಟುಂಬಸ್ಥರು ತೋರಿಸಿದ ಯುವಕನೊಂದಿಗೆ ಮದುವೆ ಮಾಡಿಕೊಳ್ಳಲು ಯುವತಿಗೆ ಇಷ್ಟ ಇರಲಿಲ್ಲ. ತಾನು ಬೇರೊಬ್ಬ ಯುವಕನೊಂದಿಗೆ ಪ್ರೀತಿ ಮಾಡುತ್ತಿರುವುದಾಗಿ ಹೇಳಿದ್ದಳು. ಈ ಸಂಬಂಧ ಮಗಳೊಂದಿಗೆ ತಂದೆ ಜಗಳವಾಡಿದ್ದು, ಮನೆಯಲ್ಲಿ ಯಾರೂ ಇಲ್ಲದ ವೇಳೆ ಕೋಪದಲ್ಲಿ ಮಗಳ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ, ಹಗ್ಗದಿಂದ ಕತ್ತು ಬಿಗಿದು ಮಗಳನ್ನು ಕೊಂದು ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ವಿಷಯ ತಿಳಿದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ, ಭಾಲ್ಕಿ ಡಿವೈಎಸ್ಪಿ ಶಿವಾನಂದ ಪವಾಡಶೆಟ್ಟಿ, ಔರಾದ್ ಸಿಪಿಐ ರಘುವೀರ್ ಸಿಂಗ್ ಠಾಕೂರ್, ಸಂತಪೂರ ಪಿಎಸ್ಐ ನಂದಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಸಂತಪೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
18 year old daughter killed by father for rejecting marriage proposal in Bidar. The disease as been identified as Monica Jadav. She was In love with another boy where the father got angry and killer right in the house
22-11-25 08:03 pm
HK News Desk
DK Shivakumar: ಸಿಎಂ ಅವರೇ ಐದು ವರ್ಷ ಇರೋದಾಗಿ ಹೇಳ...
22-11-25 02:25 pm
ಸಿಎಂ ಬದಲಾವಣೆ ಬಗ್ಗೆ ಹೈಕಮಾಂಡ್ ಹೇಳಿದ್ಯಾ? ಮತ್ಯಾಕೆ...
21-11-25 05:25 pm
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
22-11-25 10:44 pm
Mangalore Correspondent
ಡಿ.3ರಂದು ಸಿದ್ದರಾಮಯ್ಯ ಸಿಎಂ ಆಗಿಯೇ ಕೋಣಾಜೆಗೆ ಬರಲಿ...
22-11-25 05:46 pm
Drem Deal Group Fraud, Mangalore: IMPACT: ಕೆಎ...
22-11-25 03:49 pm
ಈ ಬಾರಿ ಕಂಬಳದಲ್ಲಿ ಸಬ್ ಜೂನಿಯರ್ ಓಟ ಇರಲ್ಲ ; 24 ಗಂ...
21-11-25 10:39 pm
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
22-11-25 07:55 pm
Bangalore Correspondent
Bangalore Robbery, Police Arrested: ಮಹಾನ್ ದರೋ...
21-11-25 11:07 pm
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm