ಬ್ರೇಕಿಂಗ್ ನ್ಯೂಸ್
09-02-25 07:35 pm Mangalore Correspondent ಕ್ರೈಂ
ಮಂಗಳೂರು, ಫೆ.9: ಕೊಲೆ ಪ್ರಕರಣದಲ್ಲಿ ಆರೋಪ ಸಾಬೀತಾದ ಅಪರಾಧಿಗೆ ತನ್ನ ಮನೆಯಲ್ಲಿ ಆಶ್ರಯ ನೀಡಿದ ಆರೋಪ ಹೊತ್ತಿದ್ದ ಮಂಗಳೂರು ಹೊರವಲಯದ ತಲಪಾಡಿಯ ವ್ಯಕ್ತಿಯೊಬ್ಬರ ಮೇಲೆ ದಾಖಲಾದ ಕ್ರಿಮಿನಲ್ ಪ್ರಕರಣವನ್ನು ಹೈಕೋರ್ಟ್ ರದ್ದುಗೊಳಿಸಿ ಆದೇಶ ಮಾಡಿದೆ.
ತಲಪಾಡಿ ಗ್ರಾಮದ ಉದಯ ಕುಮಾರ್ ಶೆಟ್ಟಿ ಎಂಬವರು ತಮ್ಮ ಮೇಲಿನ ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ಆರ್ ಕೃಷ್ಣಕುಮಾರ್ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ. ಅಲ್ಲದೆ, ಐಪಿಸಿ ಸೆಕ್ಷನ್ 216 (ಅಪರಾಧಿಗೆ ಉದ್ದೇಶಪೂರ್ವಕವಾಗಿ ಆಶ್ರಯ ನೀಡುವುದು) ಅಡಿಯಲ್ಲಿ ಪ್ರಕರಣ ದಾಖಲಿಸಬೇಕಾದಲ್ಲಿ ಆರೋಪಿಗೆ ಕೋರ್ಟಿನಲ್ಲಿ ಪ್ರಕರಣ ಸಾಬೀತಾದ ಅಪರಾಧಿಯ ಶಿಕ್ಷೆಯ ಬಗ್ಗೆ ಸಂಪೂರ್ಣ ಮಾಹಿತಿ ಇರಬೇಕು, ಜತೆಗೆ ಉದ್ದೇಶಪೂರ್ವಕ ಆಶ್ರಯ ನೀಡಿದ್ದಾರೆ ಎಂಬುದನ್ನು ಸಾಬೀತುಪಡಿಸುವಂತಹ ಅಂಶಗಳು ಬೇಕಾಗುತ್ತವೆ ಎಂದು ಆದೇಶದಲ್ಲಿ ತಿಳಿಸಿದೆ.
ಅಪರಾಧಿಯನ್ನು ಅರ್ಜಿದಾರರ ಮನೆಯಲ್ಲಿಯೇ ಬಂಧಿಸಿ ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂಬ ಅಂಶವನ್ನು ಹೊರತುಪಡಿಸಿ ಅರ್ಜಿದಾರರಿಗೆ ಅಪರಾಧಿಯ ಶಿಕ್ಷೆಯ ಬಗ್ಗೆ ತಿಳಿದಿತ್ತು ಮತ್ತು ಅವರು ಉದ್ದೇಶಪೂರ್ವಕವಾಗಿ ಅಪರಾಧಿಗೆ ಆಶ್ರಯ ನೀಡಿದ್ದಾರೆ ಎಂದು ಸಾಬೀತುಪಡಿಸಲು ಯಾವುದೇ ಪುರಾವೆಗಳಿಲ್ಲ ಎಂದು ಹೇಳಿ ಪ್ರಕರಣ ರದ್ದುಪಡಿಸಲಾಗಿದೆ. ಜೊತೆಗೆ, ಸಾಕ್ಷ್ಯಾಧಾರಗಳಿಲ್ಲದೆ ಅರ್ಜಿದಾರರ ವಿರುದ್ಧ ಕಾನೂನು ಕ್ರಮಗಳನ್ನು ಮುಂದುವರಿಸುವುದು ನ್ಯಾಯಾಂಗ ಪ್ರಕ್ರಿಯೆಯ ದುರುಪಯೋಗವಾಗುತ್ತದೆ ಎಂದು ನ್ಯಾಯಪೀಠ ಅಭಿಪ್ರಾಯ ಪಟ್ಟಿದೆ.
ಕೊಲೆ ಅಪರಾಧಿಗೆ ಆಶ್ರಯ ನೀಡಿದ್ದಕ್ಕೆ ಕೇಸು
ಮಂಗಳೂರಿನ ಬರ್ಕೆ ಠಾಣೆಯಲ್ಲಿ ದಾಖಲಾದ ಕೊಲೆ ಪ್ರಕರಣ ಒಂದರಲ್ಲಿ ಶರಣ್ ಪೂಜಾರಿ ಎಂಬಾತನಿಗೆ ಮಂಗಳೂರಿನ 5ನೇ ಜಿಲ್ಲಾ ಸೆಶನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿತ್ತು. ಆರೋಪಿ ಪೊಲೀಸರಿಗೆ ಸಿಗದೇ ತಲೆಮರೆಸಿಕೊಂಡಿದ್ದರಿಂದ ಬಂಧಿಸಲು ಹುಡುಕಾಟ ನಡೆಸಿದ್ದರು. ಈ ವೇಳೆ, ತಲಪಾಡಿಯ ಉದಯ ಕುಮಾರ್ ಶೆಟ್ಟಿ ಮನೆಯಲ್ಲಿ ಬಂಧಿಸಲಾಗಿತ್ತು. ಈ ಬಗ್ಗೆ ಪೊಲೀಸರು ಉದಯ ಶೆಟ್ಟಿ ವಿರುದ್ಧವೂ ಕೊಲೆ ಅಪರಾಧಿಗೆ ಆಶ್ರಯ ನೀಡಿದ್ದಕ್ಕಾಗಿ ಪ್ರಕರಣ ದಾಖಲಿಸಿದ್ದರು. ಇದನ್ನು ಪ್ರಶ್ನಿಸಿ ಉದಯ ಶೆಟ್ಟಿ ವಕೀಲರ ಮೂಲಕ ಹೈಕೋರ್ಟಿನಲ್ಲಿ ದಾವೆ ಹೂಡಿದ್ದರು.
Mangalore Accused Uday Kumar from talapady arrested for giving shelter to murder accused gets stay in high court.
14-07-25 10:44 pm
Bangalore Correspondent
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 09:55 pm
Mangalore Correspondent
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm