ಬ್ರೇಕಿಂಗ್ ನ್ಯೂಸ್
12-02-25 06:23 pm Bangalore Correspondent ಕ್ರೈಂ
ಬೆಂಗಳೂರು, ಫೆ.12: ಮಗಳು ಅನ್ಯಜಾತಿಯ ಹುಡುಗನನ್ನು ಪ್ರೀತಿಸುತ್ತಿದ್ದಾಳೆಂದು ತಂದೆಯೇ ಉಪಾಯದಿಂದ ತನ್ನ ಟಿವಿಎಸ್ ಬೈಕಿನಲ್ಲಿ ಹೋಗುತ್ತಿದ್ದಾಗ ಕೆರೆಗೆ ಬೀಳಿಸಿ ಮಗಳನ್ನು ಕೊಂದಿರುವ ಆರೋಪ ಹೊತ್ತ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೆಕಲ್ ನಲ್ಲಿ ನಡೆದಿದೆ.
ಆನೆಕಲ್ ಹುಸ್ಕೂರು ಬಳಿಯ ಹಾರೋಹಳ್ಳಿಯಲ್ಲಿ ಘಟನೆ ನಡೆದಿದ್ದು, ಬೈಕ್ ಸಮೇತ ಕೆರೆಗೆ ಬಿದ್ದ ತಂದೆ ರಾಮಮೂರ್ತಿ ನೀರಿನಲ್ಲಿ ಈಜಿ ದಡ ಸೇರಿದ್ದರೆ, ಮಗಳು ಸಹನಾ (20) ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾಳೆ. ಸಾವಿನ ಸುತ್ತ ಅನುಮಾನ ಕೇಳಿಬಂದಿದ್ದು, ತಂದೆಯೇ ಮಗಳನ್ನು ಕೊಂದಿದ್ದಾನೆಂದು ಗಂಭೀರ ಆರೋಪ ಉಂಟಾಗಿದೆ.


ಸಹನಾ ಬೇರೆ ಜಾತಿಗೆ ಸೇರಿದ ನಿಖಿಲ್ ಎಂಬ ಯುವಕನನ್ನು ಪ್ರೀತಿಸುತ್ತಿದ್ದು, ಕೆಲವು ದಿನಗಳ ಹಿಂದೆ ಈ ವಿಷಯ ಮನೆಯವರಿಗೂ ತಿಳಿದುಹೋಗಿತ್ತು. ಇದರಿಂದ ಸಿಟ್ಟಿಗೆದ್ದ ತಂದೆ ರಾಮಮೂರ್ತಿ ಮನೆಯಲ್ಲಿ ಗಲಾಟೆ ಮಾಡಿದ್ದಲ್ಲದೆ, ಬೇರೆ ಹುಡುಗನ ಜೊತೆಗೆ ಮದುವೆ ಮಾಡಿಸಲು ಸಿದ್ಧತೆ ನಡೆಸಿದ್ದ. ತನ್ನ ಅಕ್ಕನ ಮಗನೊಂದಿಗೆ ಮದುವೆ ಮಾಡಲು ಮುಂದಾಗಿದ್ದು, ಈ ಬಗ್ಗೆ ಸ್ನೇಹಿತನೊಬ್ಬನ ಮನೆಗೆ ಕರೆದೊಯ್ದು ಮಾತುಕತೆಯನ್ನೂ ನಡೆಸಿದ್ದ. ಅಲ್ಲಿಯೂ ಮಗಳು ಮಾತ್ರ ತಾನು ಪ್ರೀತಿಸಿದ ಹುಡುಗನನ್ನೇ ಮದುವೆಯಾಗುವುದಾಗಿ ಹಠ ಹಿಡಿದಿದ್ದಳು ಎನ್ನಲಾಗಿದೆ.
ಅಲ್ಲಿಂದ ಮಗಳನ್ನು ಬೈಕಿನಲ್ಲಿ ಕೂರಿಸಿಕೊಂಡು ಬರುತ್ತಿದ್ದಾಗಲೇ ಕೆರೆಯ ಏರಿ ಮೇಲಿನಿಂದ ಚಲಿಸುತ್ತಿದ್ದಾಗ ಬೈಕ್ ಸಮೇತ ಕೆರೆಗೆ ಬಿದ್ದಿದ್ದಾರೆ. ಮಗಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದರೆ, ತಂದೆ ರಾಮಮೂರ್ತಿ ಈಜಿ ದಡ ಸೇರಿದ್ದ. ಘಟನೆಯ ಬಳಿಕ ಹೆಬ್ಬಗೋಡಿ ಠಾಣೆಗೆ ತೆರಳಿ ಘಟನೆ ಬಗ್ಗೆ ಹೇಳಿಕೊಂಡಿದ್ದ. ಆದರೆ ಆತನ ವರ್ತನೆ ಕಂಡು ಪೊಲೀಸರು ಅನುಮಾನದಲ್ಲಿ ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.
ಮರ್ಯಾದಾ ಹತ್ಯೆ- ಪ್ರಿಯಕರ ಆರೋಪ
ಇದೇ ವೇಳೆ, ಯುವತಿಯನ್ನು ಪ್ರೀತಿಸುತ್ತಿದ್ದ ನಿಖಿಲ್ ಮರ್ಯಾದೆ ಹತ್ಯೆ ಬಗ್ಗೆ ಆರೋಪ ಮಾಡಿದ್ದು, ಹುಡುಗಿ ತಂದೆಯ ವಿರುದ್ಧ ಹೆಬ್ಬಗೋಡಿ ಠಾಣೆಗೆ ದೂರು ನೀಡಿದ್ದಾನೆ. ತಂದೆಯೇ ತನ್ನ ಮಗಳನ್ನು ಹತ್ಯೆ ಮಾಡಿದ್ದಾನೆ, ಕೆರೆ ನೀರಿನಲ್ಲಿ ಕಾಲಿನಿಂದ ಒತ್ತಿ ತಲೆ ಮುಳುಗಿಸಿ ಹತ್ಯೆ ಮಾಡಿದ್ದಾನೆ. ಒಂದು ವರ್ಷದಿಂದ ಪ್ರೀತಿಸುತ್ತಿದ್ದು, ಮದುವೆಯಾಗಲು ನಿರ್ಧರಿಸಿದ್ದೆವು. ಎರಡು ದಿನಗಳ ಹಿಂದಷ್ಟೇ ಯುವತಿ ಹೆತ್ತವರಿಗೆ ನಮ್ಮ ಪ್ರೀತಿ ಬಗ್ಗೆ ಗೊತ್ತಾಗಿತ್ತು. ಅದೇ ದಿನ ತನಗೆ ರಾಮಮೂರ್ತಿ ಕರೆ ಮಾಡಿದ್ದು ನಿಂದಿಸಿದ್ದಲ್ಲದೆ ಬೆಳಗ್ಗೆ ಮಾತುಕತೆಗೆ ಬರುವಂತೆ ತಿಳಿಸಿದ್ದರು. ಬೇರೊಂದು ಮನೆಯಲ್ಲಿ ನ್ಯಾಯ ಪಂಚಾಯಿತಿ ಆಗಿದ್ದು, ಈ ವೇಳೆ ಯುವತಿ ಮೇಲೆ ರಾಮಮೂರ್ತಿ ಹಲ್ಲೆ ಮಾಡಿದ್ದ. ಅಲ್ಲದೆ, ಪ್ರಾಣ ಹೋದರೂ ನಿನ್ನ ಪ್ರೀತಿಗೆ ಒಪ್ಪುವುದಿಲ್ಲ ಎಂದು ಆವಾಜ್ ಹಾಕಿದ್ದ. ಈಗ ಮಾರ್ಗ ಮಧ್ಯೆ ಕೆರೆಗೆ ತಳ್ಳಿ ಆಕೆಯನ್ನು ಹತ್ಯೆ ಮಾಡಿದ್ದಾನೆಂದು ಪೊಲೀಸ್ ದೂರು ನೀಡಿದ್ದಾನೆ.
Bangalore 20 year old daughter body found in lake, father accused of honor killing. The deceased has been identified as Sahana. It is alleged that father pushed to her lake and have killed her because she was in love with other community boy.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm