ಬ್ರೇಕಿಂಗ್ ನ್ಯೂಸ್
14-02-25 05:19 pm HK News Desk ಕ್ರೈಂ
ವಿಜಯಪುರ, ಫೆ.14: ಭೀಮಾತೀರದ ಹಂತಕ, ನಟೋರಿಯಸ್ ರೌಡಿ ಬಾಗಪ್ಪ ಹರಿಜನ್ ಬರ್ಬರ ಹತ್ಯೆಗೆ ಸಂಬಂಧಿಸಿ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.
ಈ ಬಗ್ಗೆ ಸುದ್ದಿಗೋಷ್ಟಿ ನಡೆಸಿದ ವಿಜಯಪುರ ಎಸ್ಪಿ ಲಕ್ಷ್ಮಣ ನಿಂಬರಗಿ, ಪ್ರಕರಣದ ಸಂಬಂಧಿಸಿ 4 ಜನರನ್ನ ಬಂಧಿಲಾಗಿದೆ. ಪ್ರಕಾಶ್ ಮೇಲಿನಕೇರಿ ಅಲಿಯಾಸ್ ಪಿಂಟು, ರಾಹುಲ್ ಭೀಮಾಶಂಕರ್ ತಳಕೇರಿ, ಸುದೀಪ್ ಕಾಂಬಳೆ ಹಾಗೂ ಮಣಿಕಂಠ ಬೆನಕೊಪ್ಪ ಬಂಧಿತ ಆರೋಪಿಗಳು. ಮೂವರು ಇಂಡಿ ತಾಲೂಕಿನ ಅಗರಖೇಡ ಗ್ರಾಮದವರು. ಮಣಿಕಂಠ ಬೆಳಗಾವಿ ಜಿಲ್ಲೆ ಬೈಲಹೊಂಗಲ ಪಟ್ಟಣದ ನಿವಾಸಿ ಎಂದು ತಿಳಿಸಿದ್ದಾರೆ.
ಕೃತ್ಯಕ್ಕೆ ಬಳಸಿದ ಆಯುಧಗಳು ಹಾಗೂ ಆಟೋ, ಬೈಕ್ ವಶಕ್ಕೆ ಪಡೆಯಲಾಗಿದೆ. ಪಿಸ್ತೂಲ್ ಬಳಸಿ ಗುಂಡು ಹಾರಿಸಿ, ಮಚ್ಚು ಹಾಗೂ ಜಂಬೆಯಿಂದ ಹೊಡೆದು ಹಲ್ಲೆ ಮಾಡಿದ್ದಾರೆ. ಆಸ್ತಿ ವಿಚಾರವಾಗಿ ವಕೀಲ ರವಿ ಹಾಗೂ ಭಾಗಪ್ಪ ನಡುವೆ ಗಲಾಟೆ ನಡೆದಿತ್ತು. ಇದೇ ಕಾರಣಕ್ಕಾಗಿ ಭಾಗಪ್ಪನ ಶಿಷ್ಯರು ರವಿಯನ್ನ ಹತ್ಯೆ ಮಾಡಿದ್ದರು. ರವಿ ಹತ್ಯೆಗೆ ಪ್ರತೀಕಾರವಾಗಿ ಆತನ ತಮ್ಮ ಪ್ರಕಾಶ ಮೇಲಿನಕೇರಿ ಸೇಡು ತಿರಿಸಿಕೊಂಡಿದ್ದಾನೆ ಎಂದರು.

ಹತ್ಯೆಗೆ ಸಂಬಂಧಿಸಿ ಮಗಳು ಗಂಗೂಬಾಯಿ ಗಾಂಧಿಚೌಕ ಪೊಲೀಸ್ ಠಾಣೆಯಲ್ಲಿ ನೀಡಿದ್ದ ದೂರಿನಲ್ಲಿ, ಈ ಹಿಂದೆ ಕೊಲೆಯಾದ ರವಿ ಅಗರಖೇಡ್ ಸಹೋದರ ಪಿಂಟ್ಯಾ ವಿರುದ್ಧ ಅನುಮಾನ ವ್ಯಕ್ತಪಡಿಸಿದ್ದರು. ಅದರಂತೆ, ಪೊಲೀಸರು ಕಾರ್ಯಾಚರಣೆ ನಡೆಸಿದ್ದರು. ರವಿ ಅಗರಖೇಡ್ ವಕೀಲ ವೃತ್ತಿಯಲ್ಲಿ ತೊಡಗಿದ್ದ ಯುವಕನಾಗಿದ್ದು ಬಾಗಪ್ಪನ ದೂರ ಸಂಬಂಧಿಯಾಗಿದ್ದ. ಕಳೆದ ವರ್ಷ ವಿಜಯಪುರದ ಕೋರ್ಟ್ನಿಂದ ಸ್ಕೂಟಿಯಲ್ಲಿ ಬರುತ್ತಿದ್ದಾಗ ಇನ್ನೋವಾ ಕಾರು ಡಿಕ್ಕಿಯಾಗಿತ್ತು. ಡಿಕ್ಕಿಯ ರಭಸಕ್ಕೆ ರವಿ ಸ್ಕೂಟಿ ದೂರ ಹೋಗಿ ಬಿದ್ದರೆ, ಆತನ ದೇಹವನ್ನು 2 ಕಿಮೀ ದೂರದವರೆಗೂ ಕಾರಿನಲ್ಲಿ ಎಳೆದೊಯ್ಯಲಾಗಿತ್ತು. ಭೀಕರ ಅಪಘಾತದಿಂದ ರವಿ ಸ್ಥಳದಲ್ಲೇ ಮೃತಪಟ್ಟಿದ್ದರು. ಮೊನ್ನೆ ಬಾಗಪ್ಪ ಹತ್ಯೆ ಬಳಿಕ ರವಿ ಜೊತೆಗಿನ ಪೋಟೋ ಸ್ಟೇಟಸ್ ಹಾಕಿದ್ದ ಪಿಂಟು ಅಣ್ಣಾ ನಿನ್ನ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಬರೆದುಕೊಂಡಿದ್ದ.



ಸಾಕ್ಷಿ ಹೇಳಲು ಬಂದಿದ್ದ ಬಾಗಪ್ಪ
2018ರ ಆಗಸ್ಟ್ 8 ರಂದು ಕೋರ್ಟ್ ಆವರಣದಲ್ಲಿ ತನ್ನ ಮೇಲೆ ನಡೆದಿದ್ದ ಫೈರಿಂಗ್ ಕೇಸ್ನಲ್ಲಿ ಸಾಕ್ಷಿ ನುಡಿಯಲು ಬಾಗಪ್ಪ ವಿಜಯಪುರ ನಗರದಲ್ಲಿ ಬಾಡಿಗೆ ಮನೆ ಮಾಡಿಕೊಂಡಿದ್ದ. ವಿರೋಧಿ ಗ್ಯಾಂಗ್ಗಳಿಗೆ ಗೊತ್ತಾಗದಿರಲಿ ಎಂದು ನಗರದ ಹೊರ ವಲಯದಲ್ಲಿ ಬಾಡಿಗೆ ಮನೆ ಮಾಡಿದ್ದು ಅಡಿಗೆ ಮಾಡಲು ತನ್ನ ದೂರದ ಸಂಬಂಧಿ ಮಹಿಳೆಯನ್ನು ಇರಿಸಿದ್ದ. ಮೊನ್ನೆ ರಾತ್ರಿ ಬಾಗಪ್ಪ ಊಟ ಮಾಡಿ ವಾಕಿಂಗ್ಗೆ ಹೊರ ಬಂದಿದ್ದಾಗಲೇ ಅಟ್ಯಾಕ್ ಮಾಡಿದ್ದರು.
Karnataka police have arrested four men in connection with the brutal murder of notorious criminal Bhagappa Hucchappa Harijan, who was killed outside his residence in Madeena Nagar on February 11.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm