ಬ್ರೇಕಿಂಗ್ ನ್ಯೂಸ್
15-02-25 05:08 pm HK News Desk ಕ್ರೈಂ
ಬೀದರ್, ಫೆ.15 : ಎಟಿಎಂಗೆ ಹಣ ತುಂಬಿಸುವ ವಾಹನ ಸಿಬಂದಿಗೆ ಗುಂಡು ಹಾರಿಸಿ ದರೋಡೆಗೈದ ಪ್ರಕರಣದಲ್ಲಿ ಇಬ್ಬರು ದರೋಡೆಕೋರರ ಗುರುತನ್ನು ಪೊಲೀಸರು ಪತ್ತೆಹಚ್ಚಿದ್ದಾರೆ. ಬಿಹಾರ ಮೂಲದ ನಟೋರಿಯಸ್ ಇಬ್ಬರು ದರೋಡೆಕೋರರ ಗುರುತು ಪತ್ತೆಹಚ್ಚಿದ್ದು ಇವರ ಪತ್ತೆಗಾಗಿ ಕರ್ನಾಟಕ ಸರ್ಕಾರ ಸುಳಿವು ಕೊಟ್ಟವರಿಗೆ ಐದು ಲಕ್ಷ ಬಹುಮಾನ ಘೋಷಿಸಿದೆ.
ಬಿಹಾರದ ವೈಶಾಲಿ ಜಿಲ್ಲೆಯ ಫತೇಪುರ ಮೂಲದ ಅಮನ್ ಕುಮಾರ್ ರಾಜಕಿಶೋರ್ ಸಿಂಗ್ ಹಾಗೂ ಅಲೋಕ್ ಕುಮಾರ್ ಅಲಿಯಾಸ್ ಅಶುತೋಷ್ ಶತ್ರುಘ್ನ ಪ್ರಸಾದ್ ಸಿಂಗ್ ಕೃತ್ಯ ಎಸಗಿದವರು ಎಂದು ಗುರುತಿಸಲಾಗಿದೆ. ಉತ್ತರ ಪ್ರದೇಶದ ಮಿರ್ಜಾಪುರ ಸೇರಿದಂತೆ ತೆಲಂಗಾಣ ರಾಜ್ಯದ ಹಲವೆಡೆ ಇವರು ಇದೇ ರೀತಿಯ ದರೋಡೆ ಪ್ರಕರಣಗಳಲ್ಲಿ ಭಾಗಿಯಾಗಿದ್ದರು. ಉತ್ತರ ಪ್ರದೇಶದಲ್ಲಿ 2023ರಲ್ಲಿ ಎಟಿಎಂ ವಾಹನದಲ್ಲಿ ಒಯ್ಯುತ್ತಿದ್ದ ಹಣವನ್ನು ದರೋಡೆ ಮಾಡಿದ್ದರು. ಈಗಾಗಲೇ ಉತ್ತರ ಪ್ರದೇಶ, ತೆಲಂಗಾಣ ರಾಜ್ಯಗಳು ಆರೋಪಿಗಳ ಸುಳಿವಿಗಾಗಿ ಬಹುಮಾನ ಘೋಷಿಸಿವೆ.

ದರೋಡೆಕೋರರ ಗುರುತು ಪತ್ತೆಯಾದ ನಂತರ ಬೀದರ್ ಜಿಲ್ಲಾ ಪೊಲೀಸರು ಬಿಹಾರದ ಹಲವೆಡೆ ‘ಬೇಕಾಗಿದ್ದಾರೆ’ ಎಂದು ಪೋಸ್ಟರ್ ಅಂಟಿಸಿದ್ದಾರೆ. ಇಬ್ಬರ ಬಗ್ಗೆ ಮಾಹಿತಿ ಕೊಟ್ಟವರಿಗೆ ₹5 ಲಕ್ಷ ನಗದು ಬಹುಮಾನ ಕೂಡ ಘೋಷಿಸಿದ್ದಾರೆ.
ಈಗ ಕರ್ನಾಟಕ ಸರ್ಕಾರವೂ ದರೋಡೆ ಆರೋಪಿಗಳ ಸುಳಿವು ಕೊಟ್ಟವರಿಗೆ 5 ಲಕ್ಷ ಬಹುಮಾನ ಘೋಷಣೆ ಮಾಡಿದೆ. ಕಳೆದ ಜನವರಿ 16ರಂದು ಬ್ಯಾಂಕಿನಿಂದ ಎಟಿಎಂಗಳಿಗೆ ಜಮೆ ಮಾಡಲು ಹಣ ಕೊಂಡೊಯ್ಯುತ್ತಿದ್ದ ಎಸ್ಬಿಐನ ಸಿಎಂಎಸ್ ಕಂಪನಿಯ ಇಬ್ಬರು ನೌಕರರ ಮೇಲೆ ಗುಂಡಿನ ದಾಳಿ ನಡೆಸಿ, ₹83 ಲಕ್ಷ ನಗದು ಹಣವಿದ್ದ ಟ್ರಂಕ್ನೊಂದಿಗೆ ಬೈಕ್ ನಲ್ಲಿ ಆರೋಪಿಗಳು ಪರಾರಿಯಾಗಿದ್ದರು. ಘಟನೆಯಲ್ಲಿ ಸಿಎಂಎಸ್ ಕಂಪನಿಯ ಕ್ಯಾಶ್ ಕಸ್ಟೋಡಿಯನ್ ಗಿರಿ ವೆಂಕಟೇಶ ಸ್ಥಳದಲ್ಲೇ ಮೃತಪಟ್ಟಿದ್ದರು. ಶಿವಕುಮಾರ್ ಎಂಬವರು ಗಂಭೀರ ಗಾಯಗೊಂಡಿದ್ದರು.
Photos of Wanted criminals in Bidar Bank robbery case released, cash reward of 5 lakhs announced. Bike-borne armed robbers shot dead two security guards before decamping with Rs 93 lakh cash meant for filling the SBI ATM in the district headquarters.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm