ಬ್ರೇಕಿಂಗ್ ನ್ಯೂಸ್
17-02-25 12:49 pm HK News Desk ಕ್ರೈಂ
ಮೈಸೂರು, ಫೆ 17: ಮೈಸೂರಿನ ವಿಶ್ವೇಶ್ವರಯ್ಯ ನಗರದ ಅಪಾರ್ಟ್ಮೆಂಟನಲ್ಲಿ ಒಂದೇ ಕುಟುಂಬದ ನಾಲ್ವರು ಸಾವಿಗೀಡಾಗಿದ್ದಾರೆ.
ಹಾಸನ್ ಮೂಲದ ಚೇತನ (45), ಪತ್ನಿ ರೂಪಾಲಿ (43), ಚೇತನ್ ತಾಯಿ ಪ್ರಿಯಂವಧ (62) ಚೇತನ್ ಅವರ ಮಗ ಕುಶಾಲ್ (15) ಮೃತರು. ನೇಣು ಬಿಗಿದ ಸ್ಥಿತಿಯಲ್ಲಿ ಚೇತನ್ ಶವ ಪತ್ತೆಯಾಗಿದೆ. ಉಳಿದವರು ಶವಗಳು ಅಪಾರ್ಟ್ಮೆಂಟಲ್ಲಿ ಪತ್ತೆಯಾಗಿವೆ.
ಚೇತನ್ ವಿಷ ನೀಡಿ ಮನೆಯವರನ್ನು ಕೊಂದು, ತಾನು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಮೈಸೂರು ನಗರ ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್, ಡಿಸಿಪಿ ಜಾಹ್ನವಿ ಹಾಗೂ ವಿದ್ಯಾರಣ್ಯಪುರಂ ಠಾಣೆ ಇನ್ಸ್ಪೆಕ್ಟರ್ ಮೋಹಿತ್ ಭೇಟಿ ನೀಡಿ ಪರಿಶೀಲಿಸಿದರು.
ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ವಿದ್ಯಾರಣ್ಯಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಾಲ್ವರು ಸಾವಿಗೀಡಾಗಿದ್ದಾರೆ. ಚೇತನ್, ಸೌದಿಗೆ ಕಾರ್ಮಿಕರನ್ನು ಕಳುಹಿಸುವ ಕೆಲಸ ಮಾಡುತ್ತಿದ್ದರು. 2019ರಲ್ಲಿ ಅಪಾರ್ಟ್ಮೆಂಟ್ ಖರೀದಿಸಿದ್ದರು. ಅವರ ಮಗ 10ನೇ ತರಗತಿ ಓದುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಚೇತನ್ ಅಣ್ಣ ವಿದೇಶದಲ್ಲಿದ್ದಾರೆ. ಅವರು ಮೃತ ಚೇತನ್ ಹೆಂಡತಿಯ ಅಪ್ಪ, ಅಮ್ಮನಿಗೆ ಸೋಮವಾರ ಬೆಳಗಿನ ಜಾವ ಕರೆ ಮಾಡಿ ಅಪಾರ್ಟ್ ಮೆಂಟ್ ಬಳಿಗೆ ಹೋಗಲು ಹೇಳಿದ್ದಾರೆ. ಅವರು ಬಂದು ನೋಡಿದಾಗ ಸಾವಿಗೀಡಾಗಿರುವ ವಿಚಾರ ಗೊತ್ತಾಗಿದೆ ಎಂದು ಮಾಹಿತಿ ನೀಡಿದರು.
ಚೇತನ್ ಕುಟುಂಬ ಭಾನುವಾರ ಸಂಜೆ ದೇವಸ್ಥಾನಕ್ಕೆ ಹೋಗಿ ಮನೆಗೆ ಮರಳಿದ್ದನ್ನು ಕೆಲವರು ನೋಡಿದ್ದಾರೆ. ತನಿಖೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ
A family of four–a man, his mother, his wife and son–were found dead in an apartment in Mysuru, Karnataka on Monday morning. The deceased were identified as 45-year-old Chetan, his 62-year-old mother Priyamvada, his 15-year-old son Kushal and his 43-year-old wife Rupali.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm