ಬ್ರೇಕಿಂಗ್ ನ್ಯೂಸ್
17-02-25 12:49 pm HK News Desk ಕ್ರೈಂ
ಮೈಸೂರು, ಫೆ 17: ಮೈಸೂರಿನ ವಿಶ್ವೇಶ್ವರಯ್ಯ ನಗರದ ಅಪಾರ್ಟ್ಮೆಂಟನಲ್ಲಿ ಒಂದೇ ಕುಟುಂಬದ ನಾಲ್ವರು ಸಾವಿಗೀಡಾಗಿದ್ದಾರೆ.
ಹಾಸನ್ ಮೂಲದ ಚೇತನ (45), ಪತ್ನಿ ರೂಪಾಲಿ (43), ಚೇತನ್ ತಾಯಿ ಪ್ರಿಯಂವಧ (62) ಚೇತನ್ ಅವರ ಮಗ ಕುಶಾಲ್ (15) ಮೃತರು. ನೇಣು ಬಿಗಿದ ಸ್ಥಿತಿಯಲ್ಲಿ ಚೇತನ್ ಶವ ಪತ್ತೆಯಾಗಿದೆ. ಉಳಿದವರು ಶವಗಳು ಅಪಾರ್ಟ್ಮೆಂಟಲ್ಲಿ ಪತ್ತೆಯಾಗಿವೆ.
ಚೇತನ್ ವಿಷ ನೀಡಿ ಮನೆಯವರನ್ನು ಕೊಂದು, ತಾನು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಮೈಸೂರು ನಗರ ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್, ಡಿಸಿಪಿ ಜಾಹ್ನವಿ ಹಾಗೂ ವಿದ್ಯಾರಣ್ಯಪುರಂ ಠಾಣೆ ಇನ್ಸ್ಪೆಕ್ಟರ್ ಮೋಹಿತ್ ಭೇಟಿ ನೀಡಿ ಪರಿಶೀಲಿಸಿದರು.
ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ವಿದ್ಯಾರಣ್ಯಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಾಲ್ವರು ಸಾವಿಗೀಡಾಗಿದ್ದಾರೆ. ಚೇತನ್, ಸೌದಿಗೆ ಕಾರ್ಮಿಕರನ್ನು ಕಳುಹಿಸುವ ಕೆಲಸ ಮಾಡುತ್ತಿದ್ದರು. 2019ರಲ್ಲಿ ಅಪಾರ್ಟ್ಮೆಂಟ್ ಖರೀದಿಸಿದ್ದರು. ಅವರ ಮಗ 10ನೇ ತರಗತಿ ಓದುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಚೇತನ್ ಅಣ್ಣ ವಿದೇಶದಲ್ಲಿದ್ದಾರೆ. ಅವರು ಮೃತ ಚೇತನ್ ಹೆಂಡತಿಯ ಅಪ್ಪ, ಅಮ್ಮನಿಗೆ ಸೋಮವಾರ ಬೆಳಗಿನ ಜಾವ ಕರೆ ಮಾಡಿ ಅಪಾರ್ಟ್ ಮೆಂಟ್ ಬಳಿಗೆ ಹೋಗಲು ಹೇಳಿದ್ದಾರೆ. ಅವರು ಬಂದು ನೋಡಿದಾಗ ಸಾವಿಗೀಡಾಗಿರುವ ವಿಚಾರ ಗೊತ್ತಾಗಿದೆ ಎಂದು ಮಾಹಿತಿ ನೀಡಿದರು.
ಚೇತನ್ ಕುಟುಂಬ ಭಾನುವಾರ ಸಂಜೆ ದೇವಸ್ಥಾನಕ್ಕೆ ಹೋಗಿ ಮನೆಗೆ ಮರಳಿದ್ದನ್ನು ಕೆಲವರು ನೋಡಿದ್ದಾರೆ. ತನಿಖೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ
A family of four–a man, his mother, his wife and son–were found dead in an apartment in Mysuru, Karnataka on Monday morning. The deceased were identified as 45-year-old Chetan, his 62-year-old mother Priyamvada, his 15-year-old son Kushal and his 43-year-old wife Rupali.
09-09-25 09:14 pm
Bangalore Correspondent
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
09-09-25 09:38 pm
HK News Desk
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
09-09-25 08:01 pm
Mangalore Correspondent
YouTuber Munaf, SIT, Dharmasthala Case: ಎಸ್ಐಟ...
09-09-25 05:59 pm
Mangalore, NHAI, Padmaraj: ಇನ್ನೆಷ್ಟು ಜೀವ ಬಲಿಯ...
09-09-25 05:14 pm
MLA Vedavyas Kamath, Mangalore, Yakshangana:...
09-09-25 04:47 pm
Mangalore, Bajilakere, Suicide: ನನ್ನವರೇ ನನ್ನನ...
09-09-25 03:07 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm