ಬ್ರೇಕಿಂಗ್ ನ್ಯೂಸ್
19-02-25 09:26 pm Mangalore Correspondent ಕ್ರೈಂ
ಪುತ್ತೂರು, ಫೆ.19: ಛತ್ತೀಸ್ಗಢ ಮೂಲದ ಲಲಿತ್ ಜೈನ್ ಮತ್ತು ಪ್ರೇಕ್ಷಾ ಜೈನ್ ಮಾಲಿಕತ್ವದ ಕಂಪನಿಯವರು ಅಡಿಕೆ ಖರೀದಿಸಿ 2.76 ಕೋಟಿ ರೂಪಾಯಿ ಹಣ ನೀಡದೆ ವಂಚನೆ ಎಸಗಿದ್ದಾರೆ ಎಂದು ಬೆಟ್ಟಂಪಾಡಿಯ ಪಾರಸ್ ಟ್ರೇಡರ್ಸ್ ಕಂಪನಿಯ ಮಾಲಕ ಕಮಲ್ ಕಾಂತ್ ಶರ್ಮಾ ಎಂಬವರು ದೂರು ನೀಡಿದ್ದು, ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರಿನ ಮಣ್ಣಗುಡ್ಡದಲ್ಲಿ ವಾಸವಿರುವ ಕಮಲ್ ಕಾಂತ್ ಶರ್ಮಾ ಪುತ್ತೂರು ತಾಲೂಕಿನ ಬೆಟ್ಟಂಪಾಡಿಯಲ್ಲಿ ಪಾರಸ್ ಟ್ರೇಡಿಂಗ್ ಹೆಸರಲ್ಲಿ ಅಡಿಕೆ ವ್ಯಾಪಾರ ನಡೆಸುತ್ತಿದ್ದು, ಛತ್ತೀಸ್ಗಡ ಮೂಲದ ಕಂಪನಿಯೊಂದಿಗೆ ವ್ಯವಹಾರ ನಡೆಸುತ್ತ ಬಂದಿದ್ದರು. 2024ರ ಡಿ.13ರಂದು 230 ಬ್ಯಾಗ್ ನಲ್ಲಿ 46 ಲಕ್ಷ ಮೌಲ್ಯದ 14,950 ಕೇಜಿ ಅಡಿಕೆಯನ್ನು ಕಳಿಸಿಕೊಟ್ಟಿದ್ದರು. ಡಿ.26ರಂದು 230 ಬ್ಯಾಗ್ ನಲ್ಲಿ 14,950 ಕೇಜಿ ಅಡಿಕೆಯನ್ನು ಮತ್ತೆ ಕಳಿಸಿಕೊಟ್ಟಿದ್ದರು. ಜನವರಿ 4ರಂದು ಮತ್ತೆ 230 ಬ್ಯಾಗ್ ನಲ್ಲಿ 14950 ಕೇಜಿ ಅಡಿಕೆಯನ್ನು ಖರೀದಿಸಿದ್ದರು. ಪ್ರತ್ಯೇಕ ಇನ್ ವಾಯ್ಸ್ ನಲ್ಲಿ ಅಡಿಕೆಯನ್ನು ಖರೀದಿ ಮಾಡಿ ಒಯ್ದಿದ್ದು ಹಣ ಮತ್ತೆ ಕೊಡುವುದಾಗಿ ಹೇಳಿ ಬಾಕಿಯಿಟ್ಟಿದ್ದರು. ಒಟ್ಟು 2.76 ಲಕ್ಷ ಮೌಲ್ಯದ ಅಡಿಕೆಯನ್ನು ಖರೀದಿಸಿ ಒಯ್ದಿದ್ದಾರೆ.
ಹಣವನ್ನು ಕೇಳಿದಾಗ ಇಂದು, ನಾಳೆ ಎಂದು ಸತಾಯಿಸುತ್ತಿದ್ದಾರೆ. ಕೆಲವು ದಿನಗಳಿಂದ ಫೋನ್ ಮಾಡಿದಾಗ, ಸ್ವಿಚ್ ಆಫ್ ಮಾಡಿಕೊಂಡಿದ್ದು ವಂಚನೆ ಮಾಡಿರುತ್ತಾರೆ ಎಂದು ಕಮಲ್ ಕಾಂತ್ ಪುತ್ತೂರು ಗ್ರಾಮಾಂತರ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ. ಪುತ್ತೂರು, ವಿಟ್ಲದಲ್ಲಿ ಹಲವು ಅಡಿಕೆ ವ್ಯಾಪಾರಿಗಳಿಗೆ ಗುಜರಾತ್, ಉತ್ತರ ಭಾರತ ಮೂಲದ ಸೇಟ್ ಗಳು ಹಣ ನೀಡದೆ ವಂಚನೆ ಎಸಗಿದ್ದು ದೂರು ದಾಖಲಾಗಿದೆ. ಇದೀಗ ಮಂಗಳೂರಿನಲ್ಲಿ ನೆಲೆಸಿರುವ ಗುಜರಾತ್ ಮೂಲದ ವ್ಯಾಪಾರಿಯೊಬ್ಬರು ಮತ್ತೊಬ್ಬ ಕಂಪನಿಯ ಮೇಲೆ ದೂರು ದಾಖಲಿಸಿದ್ದಾರೆ.
Puttur Arecanut dealer paras traders cheated of 2.7 crores by Chhattisgarh company, case filed by company owner Kamal Kanth sharma.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 01:45 pm
HK News Staffer
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am
ಬಾಂಬ್ ಮಾದರಿಯ ವಸ್ತು ಸ್ಫೋಟಿಸಿ ರೀಲ್ಸ್ ಶೂಟಿಂಗ್ ;...
01-05-26 10:30 am
ಗುದದ್ವಾರದಲ್ಲಿ ಮೊಬೈಲ್ ಬಚ್ಚಿಟ್ಟು ಜೈಲು ಎಂಟ್ರಿಯಾದ...
01-05-26 09:39 am
ಸೌಜನ್ಯಾ ಪ್ರಕರಣ ಮರು ತನಿಖೆಗೆ ಸುಪ್ರೀಂ ಕೋರ್ಟಿಗೆ ಅ...
30-04-26 04:30 pm