ಬ್ರೇಕಿಂಗ್ ನ್ಯೂಸ್
19-02-25 09:26 pm Mangalore Correspondent ಕ್ರೈಂ
ಪುತ್ತೂರು, ಫೆ.19: ಛತ್ತೀಸ್ಗಢ ಮೂಲದ ಲಲಿತ್ ಜೈನ್ ಮತ್ತು ಪ್ರೇಕ್ಷಾ ಜೈನ್ ಮಾಲಿಕತ್ವದ ಕಂಪನಿಯವರು ಅಡಿಕೆ ಖರೀದಿಸಿ 2.76 ಕೋಟಿ ರೂಪಾಯಿ ಹಣ ನೀಡದೆ ವಂಚನೆ ಎಸಗಿದ್ದಾರೆ ಎಂದು ಬೆಟ್ಟಂಪಾಡಿಯ ಪಾರಸ್ ಟ್ರೇಡರ್ಸ್ ಕಂಪನಿಯ ಮಾಲಕ ಕಮಲ್ ಕಾಂತ್ ಶರ್ಮಾ ಎಂಬವರು ದೂರು ನೀಡಿದ್ದು, ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರಿನ ಮಣ್ಣಗುಡ್ಡದಲ್ಲಿ ವಾಸವಿರುವ ಕಮಲ್ ಕಾಂತ್ ಶರ್ಮಾ ಪುತ್ತೂರು ತಾಲೂಕಿನ ಬೆಟ್ಟಂಪಾಡಿಯಲ್ಲಿ ಪಾರಸ್ ಟ್ರೇಡಿಂಗ್ ಹೆಸರಲ್ಲಿ ಅಡಿಕೆ ವ್ಯಾಪಾರ ನಡೆಸುತ್ತಿದ್ದು, ಛತ್ತೀಸ್ಗಡ ಮೂಲದ ಕಂಪನಿಯೊಂದಿಗೆ ವ್ಯವಹಾರ ನಡೆಸುತ್ತ ಬಂದಿದ್ದರು. 2024ರ ಡಿ.13ರಂದು 230 ಬ್ಯಾಗ್ ನಲ್ಲಿ 46 ಲಕ್ಷ ಮೌಲ್ಯದ 14,950 ಕೇಜಿ ಅಡಿಕೆಯನ್ನು ಕಳಿಸಿಕೊಟ್ಟಿದ್ದರು. ಡಿ.26ರಂದು 230 ಬ್ಯಾಗ್ ನಲ್ಲಿ 14,950 ಕೇಜಿ ಅಡಿಕೆಯನ್ನು ಮತ್ತೆ ಕಳಿಸಿಕೊಟ್ಟಿದ್ದರು. ಜನವರಿ 4ರಂದು ಮತ್ತೆ 230 ಬ್ಯಾಗ್ ನಲ್ಲಿ 14950 ಕೇಜಿ ಅಡಿಕೆಯನ್ನು ಖರೀದಿಸಿದ್ದರು. ಪ್ರತ್ಯೇಕ ಇನ್ ವಾಯ್ಸ್ ನಲ್ಲಿ ಅಡಿಕೆಯನ್ನು ಖರೀದಿ ಮಾಡಿ ಒಯ್ದಿದ್ದು ಹಣ ಮತ್ತೆ ಕೊಡುವುದಾಗಿ ಹೇಳಿ ಬಾಕಿಯಿಟ್ಟಿದ್ದರು. ಒಟ್ಟು 2.76 ಲಕ್ಷ ಮೌಲ್ಯದ ಅಡಿಕೆಯನ್ನು ಖರೀದಿಸಿ ಒಯ್ದಿದ್ದಾರೆ.
ಹಣವನ್ನು ಕೇಳಿದಾಗ ಇಂದು, ನಾಳೆ ಎಂದು ಸತಾಯಿಸುತ್ತಿದ್ದಾರೆ. ಕೆಲವು ದಿನಗಳಿಂದ ಫೋನ್ ಮಾಡಿದಾಗ, ಸ್ವಿಚ್ ಆಫ್ ಮಾಡಿಕೊಂಡಿದ್ದು ವಂಚನೆ ಮಾಡಿರುತ್ತಾರೆ ಎಂದು ಕಮಲ್ ಕಾಂತ್ ಪುತ್ತೂರು ಗ್ರಾಮಾಂತರ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ. ಪುತ್ತೂರು, ವಿಟ್ಲದಲ್ಲಿ ಹಲವು ಅಡಿಕೆ ವ್ಯಾಪಾರಿಗಳಿಗೆ ಗುಜರಾತ್, ಉತ್ತರ ಭಾರತ ಮೂಲದ ಸೇಟ್ ಗಳು ಹಣ ನೀಡದೆ ವಂಚನೆ ಎಸಗಿದ್ದು ದೂರು ದಾಖಲಾಗಿದೆ. ಇದೀಗ ಮಂಗಳೂರಿನಲ್ಲಿ ನೆಲೆಸಿರುವ ಗುಜರಾತ್ ಮೂಲದ ವ್ಯಾಪಾರಿಯೊಬ್ಬರು ಮತ್ತೊಬ್ಬ ಕಂಪನಿಯ ಮೇಲೆ ದೂರು ದಾಖಲಿಸಿದ್ದಾರೆ.
Puttur Arecanut dealer paras traders cheated of 2.7 crores by Chhattisgarh company, case filed by company owner Kamal Kanth sharma.
01-01-26 06:21 pm
Bangalore Correspondent
ಜನವರಿ 15ರ ನಂತರ ಸಂಪುಟ ವಿಸ್ತರಣೆ ಆಗಲಿದೆ, ನನಗೂ ಮಂ...
01-01-26 05:18 pm
ಬೆಂಗಳೂರಿನಿಂದ ಕನ್ಯಾಕುಮಾರಿಗೆ ಸೈಕಲ್ ಸವಾರಿ ; 70ರ...
01-01-26 03:05 pm
ಕೋಗಿಲು ಬಡಾವಣೆ ವಿವಾದ ; ಬಿಜೆಪಿಯಿಂದ ಸತ್ಯಶೋಧನಾ ಸಮ...
31-12-25 10:57 pm
ಕೋಗಿಲು ಬಡಾವಣೆ ವಿವಾದ ನಡುವೆಯೇ ಕೇರಳ ಸಿಎಂ ಪಿಣರಾಯಿ...
31-12-25 02:35 pm
01-01-26 09:34 pm
HK News Desk
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
01-01-26 09:43 am
Mangalore Correspondent
ಧರ್ಮಸ್ಥಳ ಪ್ರಕರಣದಲ್ಲಿ ಕ್ಷೇತ್ರದ ಪರ ಬೆಳ್ತಂಗಡಿ ಕೋ...
31-12-25 10:57 pm
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
01-01-26 08:25 pm
Mangalore Correspondent
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm