ಬ್ರೇಕಿಂಗ್ ನ್ಯೂಸ್
19-02-25 09:26 pm Mangalore Correspondent ಕ್ರೈಂ
ಪುತ್ತೂರು, ಫೆ.19: ಛತ್ತೀಸ್ಗಢ ಮೂಲದ ಲಲಿತ್ ಜೈನ್ ಮತ್ತು ಪ್ರೇಕ್ಷಾ ಜೈನ್ ಮಾಲಿಕತ್ವದ ಕಂಪನಿಯವರು ಅಡಿಕೆ ಖರೀದಿಸಿ 2.76 ಕೋಟಿ ರೂಪಾಯಿ ಹಣ ನೀಡದೆ ವಂಚನೆ ಎಸಗಿದ್ದಾರೆ ಎಂದು ಬೆಟ್ಟಂಪಾಡಿಯ ಪಾರಸ್ ಟ್ರೇಡರ್ಸ್ ಕಂಪನಿಯ ಮಾಲಕ ಕಮಲ್ ಕಾಂತ್ ಶರ್ಮಾ ಎಂಬವರು ದೂರು ನೀಡಿದ್ದು, ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರಿನ ಮಣ್ಣಗುಡ್ಡದಲ್ಲಿ ವಾಸವಿರುವ ಕಮಲ್ ಕಾಂತ್ ಶರ್ಮಾ ಪುತ್ತೂರು ತಾಲೂಕಿನ ಬೆಟ್ಟಂಪಾಡಿಯಲ್ಲಿ ಪಾರಸ್ ಟ್ರೇಡಿಂಗ್ ಹೆಸರಲ್ಲಿ ಅಡಿಕೆ ವ್ಯಾಪಾರ ನಡೆಸುತ್ತಿದ್ದು, ಛತ್ತೀಸ್ಗಡ ಮೂಲದ ಕಂಪನಿಯೊಂದಿಗೆ ವ್ಯವಹಾರ ನಡೆಸುತ್ತ ಬಂದಿದ್ದರು. 2024ರ ಡಿ.13ರಂದು 230 ಬ್ಯಾಗ್ ನಲ್ಲಿ 46 ಲಕ್ಷ ಮೌಲ್ಯದ 14,950 ಕೇಜಿ ಅಡಿಕೆಯನ್ನು ಕಳಿಸಿಕೊಟ್ಟಿದ್ದರು. ಡಿ.26ರಂದು 230 ಬ್ಯಾಗ್ ನಲ್ಲಿ 14,950 ಕೇಜಿ ಅಡಿಕೆಯನ್ನು ಮತ್ತೆ ಕಳಿಸಿಕೊಟ್ಟಿದ್ದರು. ಜನವರಿ 4ರಂದು ಮತ್ತೆ 230 ಬ್ಯಾಗ್ ನಲ್ಲಿ 14950 ಕೇಜಿ ಅಡಿಕೆಯನ್ನು ಖರೀದಿಸಿದ್ದರು. ಪ್ರತ್ಯೇಕ ಇನ್ ವಾಯ್ಸ್ ನಲ್ಲಿ ಅಡಿಕೆಯನ್ನು ಖರೀದಿ ಮಾಡಿ ಒಯ್ದಿದ್ದು ಹಣ ಮತ್ತೆ ಕೊಡುವುದಾಗಿ ಹೇಳಿ ಬಾಕಿಯಿಟ್ಟಿದ್ದರು. ಒಟ್ಟು 2.76 ಲಕ್ಷ ಮೌಲ್ಯದ ಅಡಿಕೆಯನ್ನು ಖರೀದಿಸಿ ಒಯ್ದಿದ್ದಾರೆ.
ಹಣವನ್ನು ಕೇಳಿದಾಗ ಇಂದು, ನಾಳೆ ಎಂದು ಸತಾಯಿಸುತ್ತಿದ್ದಾರೆ. ಕೆಲವು ದಿನಗಳಿಂದ ಫೋನ್ ಮಾಡಿದಾಗ, ಸ್ವಿಚ್ ಆಫ್ ಮಾಡಿಕೊಂಡಿದ್ದು ವಂಚನೆ ಮಾಡಿರುತ್ತಾರೆ ಎಂದು ಕಮಲ್ ಕಾಂತ್ ಪುತ್ತೂರು ಗ್ರಾಮಾಂತರ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ. ಪುತ್ತೂರು, ವಿಟ್ಲದಲ್ಲಿ ಹಲವು ಅಡಿಕೆ ವ್ಯಾಪಾರಿಗಳಿಗೆ ಗುಜರಾತ್, ಉತ್ತರ ಭಾರತ ಮೂಲದ ಸೇಟ್ ಗಳು ಹಣ ನೀಡದೆ ವಂಚನೆ ಎಸಗಿದ್ದು ದೂರು ದಾಖಲಾಗಿದೆ. ಇದೀಗ ಮಂಗಳೂರಿನಲ್ಲಿ ನೆಲೆಸಿರುವ ಗುಜರಾತ್ ಮೂಲದ ವ್ಯಾಪಾರಿಯೊಬ್ಬರು ಮತ್ತೊಬ್ಬ ಕಂಪನಿಯ ಮೇಲೆ ದೂರು ದಾಖಲಿಸಿದ್ದಾರೆ.
Puttur Arecanut dealer paras traders cheated of 2.7 crores by Chhattisgarh company, case filed by company owner Kamal Kanth sharma.
15-03-26 04:27 pm
HK News Staffer
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
15-03-26 05:37 pm
HK News Desk
ಎಪ್ರಿಲ್ 9 ಮತ್ತು 23 ; ಕೇರಳ, ತಮಿಳುನಾಡಿನಲ್ಲಿ ಒಂದ...
15-03-26 05:08 pm
ಅಮೆರಿಕ ವಿರುದ್ಧ ಯುದ್ಧಕ್ಕೆ ಹೌತಿಗಳು ಸಜ್ಜು ; ಹರ್ಮ...
15-03-26 04:57 pm
ಐತಿಹಾಸಿಕ ರಾಮಾಯಣ ಕ್ಷೇತ್ರಗಳ ದರ್ಶನಕ್ಕೆ ವಿಶೇಷ ರೈಲ...
15-03-26 01:08 pm
ಗಲ್ಫ್ ಯುದ್ಧ ನಡುವಲ್ಲೇ ಮಿಸೈಲ್ ಉಡಾಯಿಸಿದ ಉತ್ತರ ಕೊ...
14-03-26 10:31 pm
14-03-26 09:26 pm
HK News Desk
ಕಂದಾಯ- ಅರಣ್ಯ ಭೂಮಿ ಗುರುತಿಸಲು ಜಿಲ್ಲಾ ಮಟ್ಟದಲ್ಲಿ...
14-03-26 08:31 pm
ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಬಂಟ್ವಾಳದ ಯುವ ಛಾಯಾ...
14-03-26 06:07 pm
‘ಕ್ರಿಶ್ಚಿಯನ್ ಯುವಕ’ನಿಂದ ದೈವ ನರ್ತನ ಸೇವೆ ; ಪಂಬದ...
14-03-26 05:19 pm
ಮಾರ್ಚ್ 16ರಿಂದ 28ರ ವರೆಗೆ ಮಂಗಳೂರಿನಿಂದ ಶಾರ್ಜಾಕ್ಕ...
13-03-26 10:04 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am