ಬ್ರೇಕಿಂಗ್ ನ್ಯೂಸ್
23-02-25 03:42 pm HK News Desk ಕ್ರೈಂ
ಶಿರಸಿ, ಫೆ.23 : ಹತ್ತು ವರ್ಷದಿಂದ ಪ್ರೀತಿಸುತ್ತಿದ್ದ ಹುಡುಗಿ ಬೇರೆ ಯುವಕನನ್ನು ಮದುವೆಯಾದ ಸಿಟ್ಟಿಗೆ ಆಕೆಯ ಗಂಡನನ್ನು ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದಾಗಲೇ ಚಾಕುವಿನಿಂದ ಇರಿದು ಕೊಲೆಗೈದ ಘಟನೆ ಶಿರಸಿಯಲ್ಲಿ ನಡೆದಿದೆ. ಶನಿವಾರ ರಾತ್ರಿ ಶಿರಸಿಯಿಂದ ಬೆಂಗಳೂರಿಗೆ ಹೊರಟಿದ್ದ ಕೆಎಸ್ಸಾರ್ಟಿಸಿ ಬಸ್ನಲ್ಲಿ ಘಟನೆ ನಡೆದಿದೆ.
ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ನಿವಾಸಿ ಗಂಗಾಧರ್ ಹತ್ಯೆಯಾದ ಯುವಕ. ಶಿರಸಿ ನಗರದ ಸ್ಥಳೀಯ ನಿವಾಸಿ ಪ್ರೀತಮ್ ಡಿಸೋಜ ಕೊಲೆಗೈದ ವ್ಯಕ್ತಿ. ಘಟನೆ ಬಳಿಕ ಪ್ರೀತಮ್ ಡಿಸೋಜಾ ಸ್ಥಳದಿಂದ ಪರಾರಿಯಾಗಿದ್ದರೂ ಬಳಿಕ ಪೊಲೀಸರಿಗೆ ಶರಣಾಗಿದ್ದಾನೆ.




ಶಿರಸಿಯ ಯುವತಿ ಮತ್ತು ಪ್ರೀತಮ್ ಡಿಸೋಜ ಹತ್ತು ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದ. ಆದರೆ ಕೆಲಸಕ್ಕಾಗಿ ವರ್ಷದ ಹಿಂದೆ ಬೆಂಗಳೂರಿಗೆ ಹೋದ ಯುವತಿಗೆ, ಅಲ್ಲಿ ಸಾಗರದ ಯುವಕ ಗಂಗಾಧರ್ ಪರಿಚಯವಾಗಿದ್ದು ನಾಲ್ಕು ತಿಂಗಳ ಹಿಂದೆ ವಿವಾಹವಾಗಿದ್ದರು. ಫೆ.22ರ ಶನಿವಾರ ಗಂಗಾಧರ್, ಪತ್ನಿಯ ಸಂಬಂಧಿಕರ ಕಾರ್ಯಕ್ರಮಕ್ಕೆಂದು ಪತ್ನಿಯೊಂದಿಗೆ ಶಿರಸಿಗೆ ಬಂದಿದ್ದ. ಶನಿವಾರ ರಾತ್ರಿ ಬೆಂಗಳೂರಿಗೆ ಹಿಂತಿರುಗಲು ಶಿರಸಿಯ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣಕ್ಕೆ ಬಂದು ಬಸ್ಸಿನಲ್ಲಿ ಕುಳಿತಿದ್ದರು. ಈ ವೇಳೆ ಪ್ರೀತಮ್ ಕೂಡ ಅದೇ ಬಸ್ಸಿಗೆ ಹತ್ತಿದ್ದು, ಏಕಾಏಕಿ ಗಂಗಾಧರ್ ಜೊತೆಗೆ ಜಗಳಕ್ಕಿಳಿದಿದ್ದಾನೆ. ಇದೇ ವೇಳೆ, ಪ್ರೀತಮ್ ಕೈಯಲ್ಲಿದ್ದ ಚೂರಿ ತೆಗೆದು, ಗಂಗಾಧರ್ನ ಎದೆಯ ಭಾಗಕ್ಕೆ ಚುಚ್ಚಿದ್ದಾನೆ. ಗಂಭೀರ ಗಾಯಗೊಂಡ ಗಂಗಾಧರ್ ಆಸ್ಪತ್ರೆ ಒಯ್ಯುವಷ್ಟರಲ್ಲಿ ಸಾವನ್ನಪ್ಪಿದ್ದಾರೆ.
ಶಿರಸಿ ಡಿಎಸ್ಪಿ ಕೆ.ಎಲ್.ಗಣೇಶ, ಸಿಪಿಐ ಶಶಿಕಾಂತ ವರ್ಮಾ, ಪಿಎಸ್ಐ ನಾಗಪ್ಪ ಬಿ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಶಿರಸಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In an incident near the KSRTC bus stand in Sirsi, Uttara Kannada district, a man was stabbed to death aboard a bus full of scared passengers which was bound for Bengaluru The victim, Gangadhar from Neechadi in Sagar taluk, was travelling with his wife, Pooja, when it happened. Pooja had previously been in a decade-long relationship with Pritam D'Souza, the accused, before marrying Gangadhar four months ago after relocating to Bengalore for work.
23-01-26 03:21 pm
Bangalore Correspondent
ವಿಧಾನಸಭೆ ಅಧಿವೇಶನ ; ಭಾಷಣ ಅರ್ಧಕ್ಕೆ ಬಿಟ್ಟು ತೆರಳಿ...
22-01-26 10:27 pm
ಕುಕ್ಕೆ ಸುಬ್ರಹ್ಮಣ್ಯ ; 2 ತಿಂಗಳಲ್ಲಿ 14 ಕೋಟಿಗೂ ಹೆ...
22-01-26 05:20 pm
ಚಾಮರಾಜನಗರದಲ್ಲಿ ಚಿರತೆ ದಾಳಿ ; ಪಾದಯಾತ್ರೆಗೆ ಹೊರಟ್...
21-01-26 01:31 pm
ರಾಯಚೂರಿನಲ್ಲಿ ಭೀಕರ ಅಪಘಾತ ; ಬೊಲೆರೋ - ಪಿಕ್ಅ...
21-01-26 12:30 pm
23-01-26 06:44 pm
HK News Desk
ಗಾಜಾದಲ್ಲಿ ಶಾಂತಿ ಸ್ಥಾಪನೆಗೆ 35 ದೇಶಗಳ ಮಂಡಳಿ ರಚನೆ...
22-01-26 10:16 pm
ರೈಲಿನ ಶೌಚಾಲಯದಲ್ಲಿ ಎರಡು ಗಂಟೆ ಲಾಕ್ ಮಾಡಿಕೊಂಡ ಯುವ...
22-01-26 01:52 pm
ಗ್ರೀನ್ ಲ್ಯಾಂಡ್ ; ಯುರೋಪ್ ರಾಷ್ಟ್ರಗಳ ಮೇಲೆ ಸುಂಕ ಹ...
22-01-26 01:16 pm
ಆಂಧ್ರದಲ್ಲಿ ಮತ್ತೆ ಬಸ್ ಬೆಂಕಿ ; ಟೈರ್ ಸ್ಫೋಟಗೊಂಡು...
22-01-26 11:26 am
23-01-26 09:21 pm
Mangaluru Staffer
National Conference on Neuropsychiatry Held a...
23-01-26 09:08 pm
ನಾರ್ಲ ಪಡೀಲಿನಲ್ಲಿ ಒಣ ತ್ಯಾಜ್ಯ ಸಂಸ್ಕರಣಾ ಘಟಕ ನಿರ್...
23-01-26 08:22 pm
Prabhakara Joshi, Vishweshwar Bhat: ಜಾಲತಾಣದಲ್...
23-01-26 06:57 pm
Karkala Accident, Three Killed: ಕಾರ್ಕಳ ಕಂಬಳಕ್...
23-01-26 05:12 pm
23-01-26 09:36 pm
Mangaluru Staffer
ಕಾವೂರು ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ನಕಲಿ ಚಿನ್ನ...
23-01-26 03:34 pm
29 ವರ್ಷಗಳ ಹಿಂದೆ ತಾಯಿ, ಮಗನನ್ನು ಕೊಲೆಗೈದು ಚಿನ್ನಾ...
22-01-26 10:12 pm
ಸ್ವಾಮೀಜಿಗೆ ಬ್ಲ್ಯಾಕ್ಮೇಲ್ ; ಒಂದು ಕೋಟಿಗೆ ಡಿಮ್ಯಾಂ...
22-01-26 02:40 pm
ಜೂಜಾಡಿ ಸಾಲ ; ಹಣದಾಸೆಗೆ ಇಂಜೆಕ್ಷನ್ ನೀಡಿ ಸ್ವಂತ...
21-01-26 09:35 pm