ಬ್ರೇಕಿಂಗ್ ನ್ಯೂಸ್
24-02-25 09:43 pm Mangalore Correspondent ಕ್ರೈಂ
ಮಂಗಳೂರು, ಫೆ.24: ಮಂಗಳೂರು ನಗರ ಮಧ್ಯದ ಕೊಡಿಯಾಲಬೈಲಿನಲ್ಲಿರುವ ಸಬ್ ಜೈಲಿಗೆ ಹಿಂದಿನಿಂದಲೂ ಗಾಂಜಾ ಇನ್ನಿತರ ಮಾದಕ ಪದಾರ್ಥಗಳನ್ನು ಪೂರೈಸುವ ಆರೋಪಗಳಿದ್ದವು. ಇದೀಗ ಶಂಕಿತ ಗಾಂಜಾ ಪ್ಯಾಕೆಟನ್ನು ಹಾಡಹಗಲೇ ಸ್ಕೂಟರಿನಲ್ಲಿ ಬಂದಿದ್ದ ಇಬ್ಬರು ಯುವಕರು ಜೈಲು ಆವರಣ ಗೋಡೆಯ ಹೊರಗಿನಿಂದ ಬಹಿರಂಗವಾಗಿಯೇ ಎಸೆಯುತ್ತಿರುವ ದೃಶ್ಯ ಸೆರೆಯಾಗಿದ್ದು, ಜೈಲು ಆವರಣದಲ್ಲಿ ಗಾಂಜಾ ಪೂರೈಕೆ ಖುಲ್ಲಂ ಖುಲ್ಲಾ ಆಗಿದ್ಯಾ ಎನ್ನುವ ಅನುಮಾನ ಏಳುವಂತಾಗಿದೆ.
ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಮೇಯರ್ ಕವಿತಾ ಸನಿಲ್, ತನ್ನ ಕಾರಿನಲ್ಲಿ ಜೈಲಿನ ಎದುರಿನಿಂದ ಸಾಗುತ್ತಿದ್ದಾಗಲೇ ಇಬ್ಬರು ಯುವಕರು ನಂಬರ್ ಪ್ಲೇಟ್ ಇಲ್ಲದ ಸ್ಕೂಟರಿನಲ್ಲಿ ಬಂದು ಪ್ಲಾಸ್ಟಿಕ್ ಪೊಟ್ಟಣದಲ್ಲಿ ವಸ್ತುವೊಂದನ್ನು ಎಸೆಯುತ್ತಿರುವುದು ಪತ್ತೆಯಾಗಿದೆ. ಕೂಡಲೇ ಸ್ಕೂಟರನ್ನು ಬೆನ್ನತ್ತಿದಾಗ, ಅದರಲ್ಲಿದ್ದವರು ಮಿಂಚಿನ ವೇಗದಲ್ಲಿ ಪರಾರಿಯಾಗಿದ್ದಾರೆ. ಇಬ್ಬರು ಯುವಕರು ಸ್ಕೂಟರ್ ನಿಲ್ಲಿಸಿ ಜೈಲು ಆವರಣದಿಂದ ಒಳಭಾಗಕ್ಕೆ ಪ್ಯಾಕೆಟ್ ಒಂದನ್ನು ಎಸೆಯುತ್ತಿರುವುದು ಕಾರಿನ ಡ್ಯಾಶ್ ಬೋರ್ಡ್ ನಲ್ಲಿ ದಾಖಲಾಗಿದೆ.
ಜೈಲಿನ ಒಳಗಿರುವ ಕೈದಿಗಳು ಸಿಗರೇಟ್, ಗಾಂಜಾ ಸೇವನೆ ಮಾಡುತ್ತಿರುವುದು, ಜೊತೆಗೆ ಮೊಬೈಲ್ ಬಳಕೆಯನ್ನೂ ಮಾಡುತ್ತಿದ್ದಾರೆ ಎನ್ನುವ ಬಗ್ಗೆ ಬಹಳಷ್ಟು ಆಪಾದನೆ ಕೇಳಿಬಂದಿತ್ತು. ಪೊಲೀಸರು ದಾಳಿ ನಡೆಸಿದಾಗಲಂತೂ ಗಾಂಜಾ ಇನ್ನಿತರ ಮಾದಕ ಪದಾರ್ಥಗಳು, ಮೊಬೈಲ್ಗಳೂ ಪತ್ತೆಯಾಗಿದ್ದವು. ಇದೀಗ ಜೈಲಿನ ಆವರಣದ ಬೃಹತ್ ಗೋಡೆಯ ಹೊರಗಿನಿಂದ ಒಳಭಾಗಕ್ಕೆ ಸ್ಕೂಟರಿನಲ್ಲಿ ಬಂದಿದ್ದ ಯುವಕರು ಹಾಡಹಗಲೇ ಪ್ಲಾಸ್ಟಿಕ್ ಬಾಕ್ಸ್ ನಲ್ಲಿ ಗಾಂಜಾ ಎಸೆಯುತ್ತಿದ್ದಾರೆಯೇ ಎನ್ನುವ ರೀತಿಯ ವಿಡಿಯೋ ವೈರಲ್ ಆಗಿದೆ.




ಇದರ ಬೆನ್ನಲ್ಲೇ ಮಂಗಳೂರಿನ ಬಿಜೆಪಿ ಶಾಸಕ ವೇದವ್ಯಾಸ ಕಾಮತ್ ಮತ್ತು ಕವಿತಾ ಸನಿಲ್ ಜೈಲಿಗೆ ಭೇಟಿ ನೀಡಿದ್ದು, ಅಧಿಕಾರಿಗಳನ್ನು ತರಾಟೆಗೆತ್ತಿಕೊಂಡಿದ್ದಾರೆ. ಜೈಲಿನ ಒಳಗಡೆ ನಿರಾತಂಕ ಎನ್ನುವಂತೆ ಗಾಂಜಾ ಪೂರೈಕೆ ಆಗುತ್ತಿದೆ, ಬಂಧೀಖಾನೆ ಇಲಾಖೆಯ ಅಧಿಕಾರಿಗಳು ನಿದ್ದೆ ಮಾಡುತ್ತಿದ್ದಾರೆ, ಗೃಹ ಸಚಿವರು ಇದ್ಯಾವುದರ ಗೊಡವೆ ಇಲ್ಲದಂತೆ ಇದ್ದಾರೆ ಎಂದು ಶಾಸಕ ಕಾಮತ್ ಟೀಕಿಸಿದ್ದಾರೆ. ಗಾಂಜಾ ಎಸೆಯುತ್ತಿರುವ ದೃಶ್ಯಕ್ಕೆ ಸಂಬಂಧಿಸಿ ಮಂಗಳೂರು ಜೈಲಿನ ಅಧೀಕ್ಷಕ ಆಶೇಖಾನ್ ಪ್ರತಿಕ್ರಿಯಿಸಿದ್ದು, ನಾವು ಜೈಲು ಆವರಣದಲ್ಲಿರುವ ಸಿಸಿಟಿವಿಗಳನ್ನು ಪರಿಶೀಲನೆ ಮಾಡಿದ್ದೇವೆ. ಅದರಲ್ಲಿ ಗಾಂಜಾ ಸಿಕ್ಕಿಲ್ಲ, ಚಹಾ ಪುಡಿ ಮತ್ತು ಸಿಗರೇಟ್ ಎಸೆದಿರುವುದು ಸಿಕ್ಕಿದೆ. ಘಟನೆ ಬಗ್ಗೆ ತನಿಖೆ ನಡೆಸಲು ಬರ್ಕೆ ಠಾಣೆಗೆ ದೂರು ನೀಡಿದ್ದೇವೆ ಎಂದು ಹೇಳುವ ಮೂಲಕ ಪ್ಯಾಕೆಟ್ ಎಸೆದಿದ್ದನ್ನು ಹೌದೆಂದು ಒಪ್ಪಿಕೊಂಡಿದ್ದಾರೆ.
ಇತ್ತೀಚೆಗೆ ಜೈಲು ಆವರಣದ ನಿವಾಸಿಗಳು ಜಾಮರ್ ಅಳವಡಿಕೆಯಿಂದಾಗಿ ಮೊಬೈಲ್ ಸಂಪರ್ಕಕ್ಕೆ ತೊಂದರೆ ಅನುಭವಿಸುತ್ತಿದ್ದೇವೆ ಎಂದು ಅಳಲು ಹೇಳಿಕೊಂಡಿದ್ದರು. ಆನ್ಲೈನ್ ಕ್ಲಾಸ್ ತೆಗೆದುಕೊಳ್ಳುವ ವಿದ್ಯಾರ್ಥಿಗಳಿಗೂ ತೊಂದರೆ ಆಗುತ್ತಿದೆ, ಜಾಮರ್ ಯಂತ್ರದ ಪವರ್ ಕಡಿಮೆ ಮಾಡಬೇಕೆಂದು ಹೇಳಿದ್ದರು. ಆದರೆ ಜೈಲು ಹೊರಗಿನ ವ್ಯಕ್ತಿಗಳಿಗೆ ಜಾಮರ್ ಪ್ರಭಾವ ಇದ್ದರೂ, ಒಳಗಿರುವ ಕೈದಿಗಳಿಗೆ ಜಾಮರ್ ತೊಂದರೆ ಇಲ್ಲವೇ ಎನ್ನುವ ಪ್ರಶ್ನೆ ಎದುರಾಗಿದೆ. ಗಾಂಜಾ ಇನ್ನಿತರ ಪ್ಯಾಕೆಟ್ ಎಸೆಯುವಾಗ, ಒಳಗಿರುವ ಕೈದಿಗಳಿಗೆ ಇದೇ ಜಾಗದಲ್ಲಿ ಎಸೆದಿದ್ದೇವೆ ಎನ್ನುವ ಮಾಹಿತಿ ಹೇಗೆ ರವಾನೆಯಾಗುತ್ತದೆ ಎನ್ನುವುದು ಯಕ್ಷಪ್ರಶ್ನೆ.
Illegal drug supply to Mangalore jail captured in dash cam of car, video goes viral. Former mayor Kavitha sanil car has captured the illegal activity at Mangalore central jail.
23-01-26 03:21 pm
Bangalore Correspondent
ವಿಧಾನಸಭೆ ಅಧಿವೇಶನ ; ಭಾಷಣ ಅರ್ಧಕ್ಕೆ ಬಿಟ್ಟು ತೆರಳಿ...
22-01-26 10:27 pm
ಕುಕ್ಕೆ ಸುಬ್ರಹ್ಮಣ್ಯ ; 2 ತಿಂಗಳಲ್ಲಿ 14 ಕೋಟಿಗೂ ಹೆ...
22-01-26 05:20 pm
ಚಾಮರಾಜನಗರದಲ್ಲಿ ಚಿರತೆ ದಾಳಿ ; ಪಾದಯಾತ್ರೆಗೆ ಹೊರಟ್...
21-01-26 01:31 pm
ರಾಯಚೂರಿನಲ್ಲಿ ಭೀಕರ ಅಪಘಾತ ; ಬೊಲೆರೋ - ಪಿಕ್ಅ...
21-01-26 12:30 pm
23-01-26 06:44 pm
HK News Desk
ಗಾಜಾದಲ್ಲಿ ಶಾಂತಿ ಸ್ಥಾಪನೆಗೆ 35 ದೇಶಗಳ ಮಂಡಳಿ ರಚನೆ...
22-01-26 10:16 pm
ರೈಲಿನ ಶೌಚಾಲಯದಲ್ಲಿ ಎರಡು ಗಂಟೆ ಲಾಕ್ ಮಾಡಿಕೊಂಡ ಯುವ...
22-01-26 01:52 pm
ಗ್ರೀನ್ ಲ್ಯಾಂಡ್ ; ಯುರೋಪ್ ರಾಷ್ಟ್ರಗಳ ಮೇಲೆ ಸುಂಕ ಹ...
22-01-26 01:16 pm
ಆಂಧ್ರದಲ್ಲಿ ಮತ್ತೆ ಬಸ್ ಬೆಂಕಿ ; ಟೈರ್ ಸ್ಫೋಟಗೊಂಡು...
22-01-26 11:26 am
23-01-26 09:21 pm
Mangaluru Staffer
National Conference on Neuropsychiatry Held a...
23-01-26 09:08 pm
ನಾರ್ಲ ಪಡೀಲಿನಲ್ಲಿ ಒಣ ತ್ಯಾಜ್ಯ ಸಂಸ್ಕರಣಾ ಘಟಕ ನಿರ್...
23-01-26 08:22 pm
Prabhakara Joshi, Vishweshwar Bhat: ಜಾಲತಾಣದಲ್...
23-01-26 06:57 pm
Karkala Accident, Three Killed: ಕಾರ್ಕಳ ಕಂಬಳಕ್...
23-01-26 05:12 pm
23-01-26 09:36 pm
Mangaluru Staffer
ಕಾವೂರು ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ನಕಲಿ ಚಿನ್ನ...
23-01-26 03:34 pm
29 ವರ್ಷಗಳ ಹಿಂದೆ ತಾಯಿ, ಮಗನನ್ನು ಕೊಲೆಗೈದು ಚಿನ್ನಾ...
22-01-26 10:12 pm
ಸ್ವಾಮೀಜಿಗೆ ಬ್ಲ್ಯಾಕ್ಮೇಲ್ ; ಒಂದು ಕೋಟಿಗೆ ಡಿಮ್ಯಾಂ...
22-01-26 02:40 pm
ಜೂಜಾಡಿ ಸಾಲ ; ಹಣದಾಸೆಗೆ ಇಂಜೆಕ್ಷನ್ ನೀಡಿ ಸ್ವಂತ...
21-01-26 09:35 pm